ಮೈಸೂರು-ಕುಶಾಲನಗರ ರೈಲು ಮಾರ್ಗಕ್ಕೆ ಕೇಂದ್ರದ ಒಪ್ಪಿಗೆ
ಮೈಸೂರು, ಫೆಬ್ರವರಿ 28 : ಮೈಸೂರು-ಕುಶಾಲನಗರ ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಈ ರೈಲಯ ಯೋಜನೆ ಭಾರಿ ವಿರೋಧಕ್ಕೆ ಕಾರಣವಾಗಿತ್ತು.
ಮೈಸೂರು (ಬೆಳಗೊಳ)-ಕುಶಾಲನಗರ ರೈಲು ಮಾರ್ಗಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. 87 ಕಿ.ಮೀ. ರೈಲು ಮಾರ್ಗವನ್ನು 1,860 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತದೆ.
ಚೆನ್ನೈ- ಬೆಂಗಳೂರ್ ಬುಲೆಟ್ ಟ್ರೈನ್ ಸೇರಿ 10 ಹೊಸ ರೈಲು?
ಈ ನೂತನ ಮಾರ್ಗ ನಿರ್ಮಾಣವಾದರೆ ಕೊಡಗು ಜಿಲ್ಲೆಗೆ ರೈಲ್ವೆ ಸಂಪರ್ಕ ಲಭಿಸಿದಂತಾಗುತ್ತದೆ. ರೈಲು ಮಾರ್ಗ ಪೂರ್ಣಗೊಂಡರೆ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ಬೈಲುಕುಪ್ಪೆ ಹಾಗೂ ಕುಶಾಲನಗರದ ಜನರಿಗೆ ಅನುಕೂಲವಾಗಲಿದೆ.
ಶೀಘ್ರದಲ್ಲೇ ಹರಿಹರ-ಕೊಟ್ಟೂರು ಮೂಲಕ ಬೆಂಗಳೂರು ರೈಲು ಸಂಚಾರ
ಕೊಡಗು ಜಲ್ಲೆಯ ಪ್ರವಾಸೋದ್ಯಮಕ್ಕೆ ರೈಲು ಮಾರ್ಗ ನಿರ್ಮಾಣದಿಂದ ಲಾಭವಾಗುವ ನಿರೀಕ್ಷೆ ಇದೆ. ಪ್ರತಿವರ್ಷ ಲಕ್ಷಾಂತರ ಸಂಖ್ಯೆಯಲ್ಲಿ ಪ್ರವಾಸಿಗರು ಕೊಡಗು ಜಿಲ್ಲೆಗೆ ಆಗಮಿಸುತ್ತಾರೆ. ರೈಲು ಮಾರ್ಗ ನಿರ್ಮಾಣದಿಂದ ಸಂಚಾರಕ್ಕೆ ಅನುಕೂಲವಾಗಲಿದೆ.
ಮೈಸೂರಿಗರಿಗೆ ಸಿಹಿ ಸುದ್ದಿ : ಬೆಂಗಳೂರಿಗೆ ಮತ್ತೆರಡು ರೈಲು ಸಂಚಾರ
ಕೊಡಗಿನಲ್ಲಿ ರೈಲು ಮಾರ್ಗ ನಿರ್ಮಾಣ ಮಾಡಲು ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದರು. ಮೈಸೂರು-ಕುಶಾಲನಗರ ರೈಲು ಮಾರ್ಗ ನಿರ್ಮಾಣಕ್ಕೆ ಹಿಂದೆಯೇ ಸಮೀಕ್ಷೆ ನಡೆಸಲಾಗಿತ್ತು. ಆದರೆ, ಯೋಜನೆ ಲಾಭದಾಯಕವಲ್ಲ ಎಂದು ಯೋಜನೆ ಕೈಗೆತ್ತಿಕೊಂಡಿರಲಿಲ್ಲ.
New Railway Line between Mysuru and Kushalnagar(87 Kms) APPROVED! Total cost 1854 crores. Thank u @PiyushGoyal ji n thank u all. pic.twitter.com/foXhMBSeei
— Pratap Simha (@mepratap) February 27, 2019
ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. 'ಹಲವು ವರ್ಷಗಳಿಂದ ಈ ಯೋಜನೆ ನೆನೆಗುದಿಗೆ ಬಿದ್ದಿತ್ತು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗುತ್ತದೆ' ಎಂದು ಹೇಳಿದ್ದಾರೆ.