ಮೈಸೂರು-ಮಲಬಾರ್ ರೈಲು ಮಾರ್ಗಕ್ಕೆ ಕೇಂದ್ರ ಹಸಿರು ನಿಶಾನೆ
ಮೈಸೂರು, ಡಿಸೆಂಬರ್ 04: ಮೈಸೂರು- ಮಲಬಾರ್ ಹೊಸ ರೈಲು ಮಾರ್ಗಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದ್ದು, 22 ಕಿಲೋ ಮೀಟರ್ ಸುರಂಗ ಮಾರ್ಗವನ್ನೊಳಗೊಂಡ ರೈಲು ಮಾರ್ಗದ ನಕ್ಷೆಯನ್ನು ಕರ್ನಾಟಕ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗಿದೆ ಎಂದು ಮಲಬಾರ್- ಮೈಸೂರು ರೋಡ್ ರೈಲ್ವೆ ಅಭಿವೃದ್ಧಿ ಸಮಿತಿಯ ಕೇರಳ ರಾಜ್ಯ ಸಮಿತಿಯ ಸಂಯೋಜಕ ಉಮೇಶ್ ಪೊಚ್ಚಪ್ಪನ್ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮಹತ್ವದ ಯೋಜನೆಗೆ ಅಂದಾಜು 11 ಸಾವಿರ ಕೋಟಿ ರೂ ವೆಚ್ಚ ತಗುಲಿದ್ದು, ಇದು ಕಾರ್ಯರೂಪಕ್ಕೆ ಬಂದದ್ದೇ ಆದರೆ ಕೇರಳ ಮತ್ತು ಕರ್ನಾಟಕ ರಾಜ್ಯದ ನಡುವೆ ಹೊಸ ರೈಲ್ವೆ ಮಾರ್ಗ ಅಭಿವೃದ್ಧಿಯಾಗಿ ಎರಡು ರಾಜ್ಯಗಳ ರೈತರಿಗೆ, ಉದ್ಯೋಗಸ್ಥರಿಗೆ, ಪ್ರವಾಸಿಗರಿಗೆ ಸಾಮಾನ್ಯ ಜನರಿಗೆ, ಕೂಲಿ ಕಾರ್ಮಿಕರಿಗೆ ಬಹಳಷ್ಟು ಅನುಕೂಲ ಅಗಲಿದೆ. ಜತೆಗೆ ಪ್ರವಾಸೋದ್ಯಮಕ್ಕೆ ಹೆಚ್ಚು ಉತ್ತೇಜನ ಸಿಗುವುದರೊಂದಿಗೆ ಕಡಿಮೆ ಖರ್ಚಿನಲ್ಲಿ, ಕಡಿಮೆ ಅವಧಿಯಲ್ಲಿ ಎರಡು ರಾಜ್ಯಗಳ ನಡುವೆ ಜನರು ಸಂಪರ್ಕ ಹೊಂದಲು ಸಹಕಾರಿಯಾಗಲಿದೆ ಎಂದರು.
ಸಮಿತಿಯ ಕರ್ನಾಟಕ ರಾಜ್ಯ ಸಂಯೋಜಕ ಶಂಕರ್ ಕೆ. ಮುತ್ತು ಮಾತನಾಡಿ, ಈ ಮಹತ್ವದ ಯೋಜನೆಯಿಂದ ಕಾಡು ಮತ್ತು ಪ್ರಾಣಿಗಳು ಸೇರಿದಂತೆ ರಾಜ್ಯದ ಜೀವನಾಡಿ ಕಬಿನಿ ಜಲಾಶಯದ ಹಿನ್ನೀರು ಪ್ರದೇಶಕ್ಕೆ ಯಾವುದೇ ತೊಂದರೆಯಾಗದಂತೆ ಯೋಜಿಸಿ ಹೆಲಿಕ್ಯಾಪ್ಟರ್ ಸರ್ವೇ ಕೂಡ ಮಾಡಿಸಲಾಗಿದೆ. ಮೈಸೂರು- ಕೇರಳದ ತಲಚೇರಿವರೆಗಿನ ನೂತನ ರೈಲು ಮಾರ್ಗ ಎಚ್.ಡಿ.ಕೋಟೆ ಮಾರ್ಗವಾಗಿ ಸಂಚರಿಸಿ ತಾಲೂಕಿನ ಅಂತರಸಂತೆ ಬಳಿಯಿಂದ ಗಡಿಭಾಗದ ಬಾವಲಿ ಗ್ರಾಮದವರೆಗೆ 22 ಕಿ.ಲೋ.ಮೀಟರ್ ಸುರಂಗ ಮಾರ್ಗದಲ್ಲಿ ಚಲಿಸಲಿದೆ ಎಂದು ವಿವರಿಸಿದರು.

ಎರಡು ರಾಜ್ಯಗಳ ಸಂಪರ್ಕದ ಕೊಂಡಿಯಾಗಲಿರುವ ನೂತನ ಮೈಸೂರು- ಮಲಬಾರ್ ರೈಲು ಮಾರ್ಗ ಯಶಸ್ವಿ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಮುಂದಾಗಿ ಪ್ರತಿಯೊಬ್ಬರು ಇದಕ್ಕೆ ಕೈ ಜೋಡಿಸಬೇಕೆಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಎಂ.ಎಂ.ಆರ್.ಸಿ. ಸಮಿತಿಯ ಎಚ್.ಡಿ.ಕೋಟೆ ತಾಲೂಕು ಅಧ್ಯಕ್ಷ ದೇವದತ್ತ, ಶಿವರಾಮ್, ಅಂತರ ರಾಜ್ಯ ಸಂಯೋಜಕ ಬ್ಲೇಸ್ಸಿ, ಬೂದನೂರು ವೆಂಕಟೇಶ್, ಹಿರೇಹಳ್ಳಿ ಪ್ರಕಾಶ್, ಹಂಚೀಪುರ ಸುರೇಶ್ ಇದ್ದರು.
-
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications