ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಪ್ರಕೃತಿ ವಿಕೋಪ ನಿರ್ವಹಣೆ ಬಗ್ಗೆ ಮೈಸೂರಿನಲ್ಲಿ ತರಬೇತಿ
ಮೈಸೂರು, ಜುಲೈ 29: ಆಡಳಿತ ತರಬೇತಿ ಸಂಸ್ಥೆಯ ವಿಕೋಪ ನಿರ್ವಹಣಾ ಕೇಂದ್ರದ ವತಿಯಿಂದ ಮೈಸೂರು ಜಿಲ್ಲಾ ವಿಕೋಪ ನಿರ್ವಹಣಾ ಪರಿಷ್ಕರಣೆ ಕುರಿತು ಎರಡು ದಿನಗಳ ತರಬೇತಿ ಕಾರ್ಯಕ್ರಮಕ್ಕೆ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಚಾಲನೆ ನೀಡಲಾಯಿತು.
ವಿವಿಧ ಇಲಾಖೆಗಳಿಂದ 30 ಅಧಿಕಾರಿಗಳು ಭಾಗವಹಿಸಿ ತರಬೇತಿ ಪಡೆದರು. ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಮಂಜುನಾಥ ಸ್ವಾಮಿ "ಪ್ರತಿಯೊಂದು ಜಿಲ್ಲೆಯಲ್ಲೂ ಬೇರೆ ಬೇರೆ ವಿಕೋಪ ಅಪಾಯಗಳಿದ್ದು, ಅದಕ್ಕೆ ತಕ್ಕಂತೆ ಯೋಜನೆಗಳನ್ನು ಸಿದ್ದಪಡಿಸಿಕೊಳ್ಳಬೇಕಿದ್ದು, ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಪೂರಕವಾದ ಮಾಹಿತಿ ನೀಡಿ ಸಹ ಭಾಗಿಗಳಾಗಬೇಕು.
ಮೈಸೂರಿನಲ್ಲಿ ಸುಮಾರು 71 ವಿಕೋಪ ಅಪಾಯವನ್ನುಂಟು ಮಾಡುವ ಕಾರ್ಖಾನೆಗಳಿವೆ. ಅವುಗಳಿಂದ ಯಾವುದೇ ಅಪಾಯ ಸಂಭವಿಸದಂತೆ ಪೂರ್ವಸಿದ್ದತೆ ಮತ್ತು ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತದಿಂದ ಆಗಾಗ ಅಣಕು ಕಾರ್ಯಾಚರಣೆ ಹಮ್ಮಿಕೊಳ್ಳುವುದರ ಮೂಲಕ ಅಧಿಕಾರಿಗಳು ಮತ್ತು ಸಮುದಾಯದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ವಿಕೋಪ ನಿರ್ವಹಣಾ ಯೋಜನೆ ಅನುಷ್ಠಾನ ಮಾಡುವಲ್ಲಿ ಜಿಲ್ಲಾಡಳಿತದೊಂದಿಗೆ ವಿವಿಧ ಇಲಾಖೆಗಳು ಹಾಗೂ ಸಮೂಹ ಭಾಗಿಯಾದರೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸಬಹುದು ಎಂದು ತಿಳಿಸಿದರು.

ತರಬೇತಿ ನಿರ್ದೇಶಕರಾದ ಡಾ. ದಿಲೀಪ್ ಕುಮಾರ್. ಎಂ ಅವರು ಮೈಸೂರು ಜಿಲ್ಲೆಯಲ್ಲಿ ಸಂಭವನೀಯ ವಿಪತ್ತು ಅಪಾಯಗಳನ್ನು ವಿವರಿಸುತ್ತಾ ಜಿಲ್ಲಾ ವಿಕೋಪ ನಿರ್ವಹಣಾ ಯೋಜನೆಯನ್ನು ಸಿದ್ದಪಡಿಸುವಿಕೆಗೆ ಪಾಲಿಸಬೇಕಾದ NDMP/SDMP ಮಾದರಿಗಳ ಬಗ್ಗೆ ತಿಳಿಸಿದರು. ಮೈಸೂರು ವಿ.ನಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅನುಕೂಲವಾಗುವ ರೀತಿಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಇಲಾಖೆಗಳು ಹಾಗೂ ಅಧಿಕಾರಿಗಳ ನಿರ್ದಿಷ್ಟ ಜವಾಬ್ದಾರಿಗಳನ್ನು ಹಂಚಿಕೆ ಮಾಡಬೇಕಿದೆ ಎಂದು ಕಾರ್ಯಾಗಾರದಲ್ಲಿ ತಿಳಿಸಿದರು.

ಕಾರ್ಯಾಗಾರದಲ್ಲಿ ವಿಕೋಪ ನಿರ್ವಹಣೆಯಲ್ಲಿ ಆರೋಗ್ಯ ನಿರ್ವಹಣೆ ಮತ್ತು ಆಸ್ಪತ್ರೆ ವಿಕೋಪ ನಿರ್ವಹಣಾ ಯೋಜನೆ ಕುರಿತು ಜಿಲ್ಲಾ ಹಿರಿಯ ವೈದ್ಯಾಧಿಕಾರಿ ಡಾ. ಮಲ್ಲಿಕಾ ಅವರು ತರಬೇತಿ ನೀಡಿದರು. ಪ್ರಾದೇಶಿಕ ಅಗ್ನಿ ಶಾಮಕ ಅಧಿಕಾರಿಗಳಾದ ಕೆ.ಪಿ ನವೀನ್ ಕುಮಾರ್ ಅವರು ಜಿಲ್ಲೆಗಳಲ್ಲಿ ಅಗ್ನಿ ಅಪಾಯಗಳನ್ನು ಗುರುತಿಸಿದ್ದು ಅವುಗಳನ್ನು ನಿರ್ವಹಿಸಲು ಸಂಬಂಧಪಟ್ಟ ಇಲಾಖೆಗಳ ಸಮನ್ವಯತೆ ಅವಶ್ಯವಿದ್ದು ಪ್ರಾತಿಕ್ಷತೆ ವಿಧಾನ ಮೂಲಕ ಪ್ರಯೋಗಿಕವಾಗಿ ತರಬೇತಿ ನೀಡಿದರು.
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ












Click it and Unblock the Notifications