ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಪ್ರಕೃತಿ ವಿಕೋಪ ನಿರ್ವಹಣೆ ಬಗ್ಗೆ ಮೈಸೂರಿನಲ್ಲಿ ತರಬೇತಿ
ಮೈಸೂರು, ಜುಲೈ 29: ಆಡಳಿತ ತರಬೇತಿ ಸಂಸ್ಥೆಯ ವಿಕೋಪ ನಿರ್ವಹಣಾ ಕೇಂದ್ರದ ವತಿಯಿಂದ ಮೈಸೂರು ಜಿಲ್ಲಾ ವಿಕೋಪ ನಿರ್ವಹಣಾ ಪರಿಷ್ಕರಣೆ ಕುರಿತು ಎರಡು ದಿನಗಳ ತರಬೇತಿ ಕಾರ್ಯಕ್ರಮಕ್ಕೆ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಚಾಲನೆ ನೀಡಲಾಯಿತು.
ವಿವಿಧ ಇಲಾಖೆಗಳಿಂದ 30 ಅಧಿಕಾರಿಗಳು ಭಾಗವಹಿಸಿ ತರಬೇತಿ ಪಡೆದರು. ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಮಂಜುನಾಥ ಸ್ವಾಮಿ "ಪ್ರತಿಯೊಂದು ಜಿಲ್ಲೆಯಲ್ಲೂ ಬೇರೆ ಬೇರೆ ವಿಕೋಪ ಅಪಾಯಗಳಿದ್ದು, ಅದಕ್ಕೆ ತಕ್ಕಂತೆ ಯೋಜನೆಗಳನ್ನು ಸಿದ್ದಪಡಿಸಿಕೊಳ್ಳಬೇಕಿದ್ದು, ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಪೂರಕವಾದ ಮಾಹಿತಿ ನೀಡಿ ಸಹ ಭಾಗಿಗಳಾಗಬೇಕು.
ಮೈಸೂರಿನಲ್ಲಿ ಸುಮಾರು 71 ವಿಕೋಪ ಅಪಾಯವನ್ನುಂಟು ಮಾಡುವ ಕಾರ್ಖಾನೆಗಳಿವೆ. ಅವುಗಳಿಂದ ಯಾವುದೇ ಅಪಾಯ ಸಂಭವಿಸದಂತೆ ಪೂರ್ವಸಿದ್ದತೆ ಮತ್ತು ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತದಿಂದ ಆಗಾಗ ಅಣಕು ಕಾರ್ಯಾಚರಣೆ ಹಮ್ಮಿಕೊಳ್ಳುವುದರ ಮೂಲಕ ಅಧಿಕಾರಿಗಳು ಮತ್ತು ಸಮುದಾಯದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ವಿಕೋಪ ನಿರ್ವಹಣಾ ಯೋಜನೆ ಅನುಷ್ಠಾನ ಮಾಡುವಲ್ಲಿ ಜಿಲ್ಲಾಡಳಿತದೊಂದಿಗೆ ವಿವಿಧ ಇಲಾಖೆಗಳು ಹಾಗೂ ಸಮೂಹ ಭಾಗಿಯಾದರೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸಬಹುದು ಎಂದು ತಿಳಿಸಿದರು.

ತರಬೇತಿ ನಿರ್ದೇಶಕರಾದ ಡಾ. ದಿಲೀಪ್ ಕುಮಾರ್. ಎಂ ಅವರು ಮೈಸೂರು ಜಿಲ್ಲೆಯಲ್ಲಿ ಸಂಭವನೀಯ ವಿಪತ್ತು ಅಪಾಯಗಳನ್ನು ವಿವರಿಸುತ್ತಾ ಜಿಲ್ಲಾ ವಿಕೋಪ ನಿರ್ವಹಣಾ ಯೋಜನೆಯನ್ನು ಸಿದ್ದಪಡಿಸುವಿಕೆಗೆ ಪಾಲಿಸಬೇಕಾದ NDMP/SDMP ಮಾದರಿಗಳ ಬಗ್ಗೆ ತಿಳಿಸಿದರು. ಮೈಸೂರು ವಿ.ನಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅನುಕೂಲವಾಗುವ ರೀತಿಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಇಲಾಖೆಗಳು ಹಾಗೂ ಅಧಿಕಾರಿಗಳ ನಿರ್ದಿಷ್ಟ ಜವಾಬ್ದಾರಿಗಳನ್ನು ಹಂಚಿಕೆ ಮಾಡಬೇಕಿದೆ ಎಂದು ಕಾರ್ಯಾಗಾರದಲ್ಲಿ ತಿಳಿಸಿದರು.

ಕಾರ್ಯಾಗಾರದಲ್ಲಿ ವಿಕೋಪ ನಿರ್ವಹಣೆಯಲ್ಲಿ ಆರೋಗ್ಯ ನಿರ್ವಹಣೆ ಮತ್ತು ಆಸ್ಪತ್ರೆ ವಿಕೋಪ ನಿರ್ವಹಣಾ ಯೋಜನೆ ಕುರಿತು ಜಿಲ್ಲಾ ಹಿರಿಯ ವೈದ್ಯಾಧಿಕಾರಿ ಡಾ. ಮಲ್ಲಿಕಾ ಅವರು ತರಬೇತಿ ನೀಡಿದರು. ಪ್ರಾದೇಶಿಕ ಅಗ್ನಿ ಶಾಮಕ ಅಧಿಕಾರಿಗಳಾದ ಕೆ.ಪಿ ನವೀನ್ ಕುಮಾರ್ ಅವರು ಜಿಲ್ಲೆಗಳಲ್ಲಿ ಅಗ್ನಿ ಅಪಾಯಗಳನ್ನು ಗುರುತಿಸಿದ್ದು ಅವುಗಳನ್ನು ನಿರ್ವಹಿಸಲು ಸಂಬಂಧಪಟ್ಟ ಇಲಾಖೆಗಳ ಸಮನ್ವಯತೆ ಅವಶ್ಯವಿದ್ದು ಪ್ರಾತಿಕ್ಷತೆ ವಿಧಾನ ಮೂಲಕ ಪ್ರಯೋಗಿಕವಾಗಿ ತರಬೇತಿ ನೀಡಿದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications