ಚಾಮುಂಡಿ ಬೆಟ್ಟದಲ್ಲಿ ₹48 ಕೋಟಿ ಅಭಿವೃದ್ಧಿ ಯೋಜನೆ: ಕೇಂದ್ರ ಸರ್ಕಾರದ ಪ್ರಸ್ತಾವಕ್ಕೆ ವಿರೋಧವೇಕೆ?
ಮೈಸೂರು, ಡಿಸೆಂಬರ್ 27: ನಗರದಲ್ಲಿ ಪ್ರವಾಸೋದ್ಯಮದ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಪ್ರಸ್ತಾವವನ್ನು ಮುಂದಿಟ್ಟಿದೆ.
ತೀರ್ಥಯಾತ್ರಾ ಸ್ಥಳಗಳ ಪುನರುಜ್ಜೀವನ ಹಾಗೂ ಆಧ್ಯಾತ್ಮಿಕ ವಿಕಾಸ ಯೋಜನೆ (ಪ್ರಸಾದ್) ಅಡಿಯಲ್ಲಿ 48 ಕೋಟಿ ರೂಪಾಯಿ ಮತ್ತು ಸ್ವದೇಶ್ ಯೋಜನೆಯಡಿ 100 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಲು ಪ್ರಸ್ತಾಪಿಸಿದೆ.
ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಪ್ರಸ್ತಾಪಿಸಿದ ರೀತಿಗೆ ಪರಿಸರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2019 ರಲ್ಲಿ ಮೊದಲ ಪ್ರಸ್ತಾಪ
2019 ರಲ್ಲಿ, ಪ್ರಸಾದ್ ಯೋಜನೆಯಡಿ ಒಟ್ಟು ಅಂದಾಜು 60 ಕೋಟಿ ರೂ.ಗಳಲ್ಲಿ ಚಾಮುಂಡಿ ಬೆಟ್ಟವನ್ನು ಅಭಿವೃದ್ಧಿಪಡಿಸಲು ಮೊದಲು ಪ್ರಸ್ತಾಪಿಸಲಾಯಿತು. ಆದರೆ, ವಿರೋಧದ ಹಿನ್ನೆಲೆಯಲ್ಲಿ ಪ್ರಸ್ತಾವನೆಯನ್ನು ಬದಲಾಯಿಸಲಾಗಿತ್ತು. ಪವಿತ್ರ ಮತ್ತು ಸೂಕ್ಷ್ಮ ಪ್ರದೇಶದ ಮೇಲೆ ಪರಿಣಾಮ ಬೀರುವ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಪರಿಸರ ಹೋರಾಟಗಾರರು ವಿರೋಧಿಸುತ್ತಿದ್ದಾರೆ ಎಂದು ವರದಿಯಾಗಿತ್ತು.
ಲಭ್ಯವಿರುವ ದಾಖಲೆಗಳ ಪ್ರಕಾರ, ಪ್ರಸಾದ ಯೋಜನೆಯಡಿ ಚಾಮುಂಡಿ ಬೆಟ್ಟದ ಮೇಲಿರುವ ಆರು ಸ್ಥಳಗಳಲ್ಲಿ ಅಭಿವೃದ್ಧಿ ಚಟುವಟಿಕೆಗಳನ್ನು ಪ್ರಸ್ತಾಪಿಸಲಾಗಿದೆ. ಇದರಲ್ಲಿ ಚಾಮುಂಡಿ ದೇವಸ್ಥಾನದ ಆವರಣದಲ್ಲಿ 20.65 ಕೋಟಿ ರೂ. ತೀರ್ಥೋದ್ಭವ ಮತ್ತು ಮಹಿಷಾಸುರ ಪ್ಲಾಜಾ ಅಭಿವೃದ್ಧಿಗೆ 5.37 ಕೋಟಿ ರೂ., ದೇವಿಕೆರೆ ಅಭಿವೃದ್ಧಿಗೆ 1.51 ಕೋಟಿ ರೂ., ನಂದಿ ಪ್ರತಿಮೆ ಮಂಟಪ ಅಭಿವೃದ್ಧಿಗೆ 4.34 ಕೋಟಿ ರೂ., ತಪ್ಪಲಿನ ಪುನರಾಭಿವೃದ್ಧಿಗೆ 4.16 ಕೋಟಿ ರೂ., ವೀಕ್ಷಣಾ ಕೇಂದ್ರಗಳ ಅಭಿವೃದ್ಧಿಗೆ 1.34 ಕೋಟಿ ರೂ ವ್ಯಯಿಸಲಾಗುತ್ತಿದೆ.
ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕಿ ಅನಿತಾ ಭಾಸ್ಕರ್ ಮಾತನಾಡಿ, ಸ್ವದೇಶ್ ದರ್ಶನ್ ಯೋಜನೆಯಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆವರಣವನ್ನು 100 ಕೋಟಿ ರೂ.ಗಳಲ್ಲಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದನ್ನು ದೆಹಲಿ ಹಾತ್ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದ್ದಾರೆ.

ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿದ ನಂತರ ಪ್ರವಾಸೋದ್ಯಮ ಸಚಿವಾಲಯದಿಂದ ಮೈಸೂರು ಹಾತ್ಗೆ ಇಲಾಖೆ ಅನುಮೋದನೆ ಪಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಮೈಸೂರು ಸಂಸದ ಪ್ರತಾಪ್ ಸಿಂಹ ಅವರು, ಪ್ರಸಾದ್ ಮತ್ತು ಸ್ವದೇಶ್ ದರ್ಶನ್ ಯೋಜನೆಯಡಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಿದ ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಅವರಿಗೆ ಧನ್ಯವಾದ ಅರ್ಪಿಸಿದರು.
ಪ್ರಸಾದ್ ಯೋಜನೆ ಜಾರಿಯಾಗುತ್ತಿರುವ ರೀತಿ ಮತ್ತು ಅಭಿವೃದ್ಧಿ ಕಾಮಗಾರಿಗಳು ಅಂತಿಮಗೊಳ್ಳುತ್ತಿರುವ ಬಗ್ಗೆ ಹೋರಾಟಗಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
'ನಾವು ಅಭಿವೃದ್ಧಿ ವಿರೋಧಿಗಳಲ್ಲ. ಆದರೆ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪ್ರಸಾದ್ ಅಡಿಯಲ್ಲಿ ಕಾಮಗಾರಿಗಳನ್ನು ಅಂತಿಮಗೊಳಿಸುವ ಮೊದಲು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು' ಎಂದು ಹೋರಾಟಗಾರ ಭಾಮಿ.ವಿ. ಶೆಣೈ ಹೇಳಿದ್ದಾರೆ.
'ಮೈಸೂರು ನಿವಾಸಿಗಳು ಕಳೆದ ಕೆಲವು ದಶಕಗಳಿಂದ ಪರಿಸರ ಸೂಕ್ಷ್ಮ ಚಾಮುಂಡಿ ಬೆಟ್ಟವನ್ನು ಉಳಿಸಲು ಹೋರಾಡುತ್ತಿದ್ದಾರೆ. ಬೆಟ್ಟಗಳ ಆಧ್ಯಾತ್ಮಿಕ ಮತ್ತು ಪರಿಸರ ಪ್ರಾಮುಖ್ಯತೆಯನ್ನು ಕಾಪಾಡುವುದು ನಮ್ಮ ಗುರಿಯಾಗಿದೆ' ಎಂದು ಅವರು ತಿಳಿಸಿದ್ದಾರೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications