Get Updates
Get notified of breaking news, exclusive insights, and must-see stories!

ಚಾಮುಂಡಿ ಬೆಟ್ಟದಲ್ಲಿ ₹48 ಕೋಟಿ ಅಭಿವೃದ್ಧಿ ಯೋಜನೆ: ಕೇಂದ್ರ ಸರ್ಕಾರದ ಪ್ರಸ್ತಾವಕ್ಕೆ ವಿರೋಧವೇಕೆ?

ಮೈಸೂರು, ಡಿಸೆಂಬರ್‌ 27: ನಗರದಲ್ಲಿ ಪ್ರವಾಸೋದ್ಯಮದ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಪ್ರಸ್ತಾವವನ್ನು ಮುಂದಿಟ್ಟಿದೆ.

ತೀರ್ಥಯಾತ್ರಾ ಸ್ಥಳಗಳ ಪುನರುಜ್ಜೀವನ ಹಾಗೂ ಆಧ್ಯಾತ್ಮಿಕ ವಿಕಾಸ ಯೋಜನೆ (ಪ್ರಸಾದ್) ಅಡಿಯಲ್ಲಿ 48 ಕೋಟಿ ರೂಪಾಯಿ ಮತ್ತು ಸ್ವದೇಶ್ ಯೋಜನೆಯಡಿ 100 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಲು ಪ್ರಸ್ತಾಪಿಸಿದೆ.

ಪ್ರಸಾದ್‌ ಯೋಜನೆಯಡಿ ಚಾಮುಂಡಿ ಬೆಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಪ್ರಸ್ತಾಪಿಸಿದ ರೀತಿಗೆ ಪರಿಸರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Centres Rs 48-crore development plans for Karnatakas Chamundi Hills draw greens ire

2019 ರಲ್ಲಿ ಮೊದಲ ಪ್ರಸ್ತಾಪ

2019 ರಲ್ಲಿ, ಪ್ರಸಾದ್ ಯೋಜನೆಯಡಿ ಒಟ್ಟು ಅಂದಾಜು 60 ಕೋಟಿ ರೂ.ಗಳಲ್ಲಿ ಚಾಮುಂಡಿ ಬೆಟ್ಟವನ್ನು ಅಭಿವೃದ್ಧಿಪಡಿಸಲು ಮೊದಲು ಪ್ರಸ್ತಾಪಿಸಲಾಯಿತು. ಆದರೆ, ವಿರೋಧದ ಹಿನ್ನೆಲೆಯಲ್ಲಿ ಪ್ರಸ್ತಾವನೆಯನ್ನು ಬದಲಾಯಿಸಲಾಗಿತ್ತು. ಪವಿತ್ರ ಮತ್ತು ಸೂಕ್ಷ್ಮ ಪ್ರದೇಶದ ಮೇಲೆ ಪರಿಣಾಮ ಬೀರುವ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಪರಿಸರ ಹೋರಾಟಗಾರರು ವಿರೋಧಿಸುತ್ತಿದ್ದಾರೆ ಎಂದು ವರದಿಯಾಗಿತ್ತು.

ಲಭ್ಯವಿರುವ ದಾಖಲೆಗಳ ಪ್ರಕಾರ, ಪ್ರಸಾದ ಯೋಜನೆಯಡಿ ಚಾಮುಂಡಿ ಬೆಟ್ಟದ ಮೇಲಿರುವ ಆರು ಸ್ಥಳಗಳಲ್ಲಿ ಅಭಿವೃದ್ಧಿ ಚಟುವಟಿಕೆಗಳನ್ನು ಪ್ರಸ್ತಾಪಿಸಲಾಗಿದೆ. ಇದರಲ್ಲಿ ಚಾಮುಂಡಿ ದೇವಸ್ಥಾನದ ಆವರಣದಲ್ಲಿ 20.65 ಕೋಟಿ ರೂ. ತೀರ್ಥೋದ್ಭವ ಮತ್ತು ಮಹಿಷಾಸುರ ಪ್ಲಾಜಾ ಅಭಿವೃದ್ಧಿಗೆ 5.37 ಕೋಟಿ ರೂ., ದೇವಿಕೆರೆ ಅಭಿವೃದ್ಧಿಗೆ 1.51 ಕೋಟಿ ರೂ., ನಂದಿ ಪ್ರತಿಮೆ ಮಂಟಪ ಅಭಿವೃದ್ಧಿಗೆ 4.34 ಕೋಟಿ ರೂ., ತಪ್ಪಲಿನ ಪುನರಾಭಿವೃದ್ಧಿಗೆ 4.16 ಕೋಟಿ ರೂ., ವೀಕ್ಷಣಾ ಕೇಂದ್ರಗಳ ಅಭಿವೃದ್ಧಿಗೆ 1.34 ಕೋಟಿ ರೂ ವ್ಯಯಿಸಲಾಗುತ್ತಿದೆ.

ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕಿ ಅನಿತಾ ಭಾಸ್ಕರ್ ಮಾತನಾಡಿ, ಸ್ವದೇಶ್ ದರ್ಶನ್ ಯೋಜನೆಯಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆವರಣವನ್ನು 100 ಕೋಟಿ ರೂ.ಗಳಲ್ಲಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದನ್ನು ದೆಹಲಿ ಹಾತ್ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದ್ದಾರೆ.

Centres Rs 48-crore development plans for Karnatakas Chamundi Hills draw greens ire

ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿದ ನಂತರ ಪ್ರವಾಸೋದ್ಯಮ ಸಚಿವಾಲಯದಿಂದ ಮೈಸೂರು ಹಾತ್‌ಗೆ ಇಲಾಖೆ ಅನುಮೋದನೆ ಪಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಮೈಸೂರು ಸಂಸದ ಪ್ರತಾಪ್ ಸಿಂಹ ಅವರು, ಪ್ರಸಾದ್ ಮತ್ತು ಸ್ವದೇಶ್ ದರ್ಶನ್ ಯೋಜನೆಯಡಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಿದ ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಅವರಿಗೆ ಧನ್ಯವಾದ ಅರ್ಪಿಸಿದರು.

ಪ್ರಸಾದ್‌ ಯೋಜನೆ ಜಾರಿಯಾಗುತ್ತಿರುವ ರೀತಿ ಮತ್ತು ಅಭಿವೃದ್ಧಿ ಕಾಮಗಾರಿಗಳು ಅಂತಿಮಗೊಳ್ಳುತ್ತಿರುವ ಬಗ್ಗೆ ಹೋರಾಟಗಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

'ನಾವು ಅಭಿವೃದ್ಧಿ ವಿರೋಧಿಗಳಲ್ಲ. ಆದರೆ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪ್ರಸಾದ್ ಅಡಿಯಲ್ಲಿ ಕಾಮಗಾರಿಗಳನ್ನು ಅಂತಿಮಗೊಳಿಸುವ ಮೊದಲು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು' ಎಂದು ಹೋರಾಟಗಾರ ಭಾಮಿ.ವಿ. ಶೆಣೈ ಹೇಳಿದ್ದಾರೆ.

'ಮೈಸೂರು ನಿವಾಸಿಗಳು ಕಳೆದ ಕೆಲವು ದಶಕಗಳಿಂದ ಪರಿಸರ ಸೂಕ್ಷ್ಮ ಚಾಮುಂಡಿ ಬೆಟ್ಟವನ್ನು ಉಳಿಸಲು ಹೋರಾಡುತ್ತಿದ್ದಾರೆ. ಬೆಟ್ಟಗಳ ಆಧ್ಯಾತ್ಮಿಕ ಮತ್ತು ಪರಿಸರ ಪ್ರಾಮುಖ್ಯತೆಯನ್ನು ಕಾಪಾಡುವುದು ನಮ್ಮ ಗುರಿಯಾಗಿದೆ' ಎಂದು ಅವರು ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+