'ಅವನ್ಯಾರು ಚಕ್ರವರ್ತಿ ಸೂಲಿಬೆಲೆನಾ ತಲೆಹರಟೆ, ಅವ್ನಗೇನ್ ಮಾನ ಮಾರ್ಯಾದೆ ಇದೆಯಾ..?'
ಬೆಂಗಳೂರು, ಫೆಬ್ರವರಿ 06: 'ಅವನ್ಯಾರು ಚಕ್ರವರ್ತಿ ಸೂಲಿಬೆಲೆನಾ ತಲೆಹರಟೆ, ಅವ್ನಗೇನ್ ಮಾನ ಮಾರ್ಯಾದೆ ಇದೆಯಾ..?' ಇದೇ ತಾನೆ ವಿಷ ಬೀಜ ಬಿತ್ತೋ ಕೆಲಸ..?' ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಏಕವಚನದಲ್ಲೇ ಹರಿಹಾಯ್ದಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡುವಾಗ ಶೀಕ್ಷಣ ಸಚಿವ ಮಧು ಬಂಗಾರಪ್ಪ, ಸೂಲಿಬೆಲೆ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರ ಮುಸ್ಲಿಮರ ಓಲೈಕೆ ಮಾಡುವ ಉದ್ದೇಶದಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲೂನ ಮಾಜ್ಗಾಗಿ ಪರೀಕ್ಷೆಯ ಸಮಯವೇ ಬದಲು ಮಾಡಿದೆ ಎಂದು ಸುಳ್ಳು ಸುದ್ದಿ ಹಬ್ಬಿದ್ದ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ದೂರುಗಳು ಬಂದಿವೆ. ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿಕ್ಷಣ ಸಚಿವ ಗರಂ
ಮಾಧ್ಯಮಗೋಷ್ಠಯಲ್ಲಿ ಮಾತನಾಡಿದ ಮಧು ಬಂಗಾರಪ್ಪ, "ಅವನ್ಯಾರು ಚಕ್ರವರ್ತಿ ಸೂಲಿಬೆಲೆನಾ ತಲೆಹರಟೆ, ಅವ್ನಗೇನ್ ಮಾನ ಮಾರ್ಯಾದೆ ಇದೆಯಾ..?. ಪುಸ್ತಕದಲ್ಲಿ ಮಕ್ಕಳನ್ನು ದಿಕ್ಕು ತಪ್ಪಿಸುವ ಕೆಲಸ ಬರೆದಿದ್ದರು, ನಾನು ಬಂದಾಗ ಅದಕ್ಕೆ ಹೇಳಿದ್ದು ಅದನ್ನು ಕಿತ್ತು ಬಿಸಾಡುತ್ತೇನೆ ಅಂತ. ಅದು ಕೂಡ ದೊಡ್ಡ ಚರ್ಚೆ ಮಾಡಿದ್ದರು. ಇಂಥದ್ದನ್ನು ಕಿತ್ತು ಬಿಸಾಕದೆ ಇನ್ನೇನು ಮಾಡೋದು? ಹೊಲಸನ್ನು ಮನೆಯಲ್ಲಿ ಇಟ್ಟುಕೊಳ್ತೀರಾ?"ಎಂದು ಸಚಿವರು ಪ್ರಶ್ನಿಸಿದ್ದಾರೆ.
" ಅವ ಮತ್ತೆ ಮೊನ್ನೆ ಟ್ವೀಟ್ ಮಾಡಿದ್ದಾನೆ. ಮಾನ ಮರ್ಯಾದೆ ಇಲ್ಲ... ಹತ್ತನೆ ಕ್ಲಾಸ್ ಪರೀಕ್ಷೆ ದಿನ ಒಂಬತ್ತು ಗಂಟೆಗೆ ಮಾಡ್ತಿರಾ ಮಾರ್ಚ್ 1 ಕ್ಕೆ ಶುಕ್ರವಾರ ಯಾಕೆ ಎರಡು ಗಂಟೆಗೆ... ವೈ ...? ನಮಾಜ್ಗಾ? ಅಂತ ಟ್ವಿಟ್ ಮಾಡಿದ್ದಾರೆ. ವಿಷ ಬೀಜ ಬಿತ್ತೋದು ಇಂತಹವರೆ ಅಲ್ವಾ? ದೂರುಗಳು ಬಂದಿವೆ. ಕಂಪ್ಲೈಂಟ್ಸ್ ಹೋಗುತ್ತಿವೆ ಅವರ ಮೇಲೆ" ಎಂದಿದ್ದಾರೆ
ಪರೀಕ್ಷೆ ಮಧ್ಯಾಹ್ನ ನಡೆಸಲು ಅಸಲಿ ಕಾರಣ ಬೇರೆನೇ
"ಮಾರ್ಚ್ 1 ರಿಂದ ಸೆಕೆಂಡ್ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಅದೇ ಶಾಲೆಯಲ್ಲಿ ಬೆಳಗ್ಗೆ ದ್ವಿತೀಯ ಪಿಯುಸಿ ಪರೀಕ್ಷೆ ಇದೆ. ಮಧ್ಯಾಹ್ನಕ್ಕೆ ಎಸ್ಎಸ್ಎಲ್ಸಿ ಪರೀಕ್ಷೆಯಿದೆ. ಪರೀಕ್ಷೆಯನ್ನು ಪುಶ್ ಮಾಡಿರೋದಷ್ಟೆ. ಇವರಿಗೆ ಒಂದು ಕಾಮನ್ ಸೆನ್ಸ್ ಇಲ್ವಲ್ಲ? ಇವರು ಒಂದು ಪಠ್ಯ ಪುಸ್ತಕ ಪರೀಷ್ಕರಣಗೆ ಅಧ್ಯಕ್ಷನೋ ಸುಡುಗಾಡೋ ಆಗಿದ್ದರು. ಮಾನ ಮರ್ಯಾದೆ ಇದೆಯಾ ಇವರಿಗೆ.. ಒಂದು ಕಡೆ ಕೆಲಸ ಮಾಡಿ ಎಲೆಕ್ಷನ್ ಬಂದ ತಕ್ಷಣ ತಲೆ ಎತ್ತುತ್ತವೆ. ಇದೆಲ್ಲಾ ಬಿಟ್ಟು ಬಿಡಿ ಬಿಜೆಪಿ. ಇವು ಯಾವುದು ನಡೆಯುವುದಿಲ್ಲ" ಎಂದು ಎಚ್ಚರಿಕೆ ನೀಡಿದ್ದಾರೆ.
Karnataka state 10th standard exam time table released. All the exams in the morning session but for Friday. Why?
— Chakravarty Sulibele (@astitvam) February 4, 2024
Oh.. time for Namaz? pic.twitter.com/zi5daLIoyr
"ಇಡೀ ದೇಶದ ಬಗ್ಗೆ ನಾನು ಮಾತಾಡಲ್ಲ. ಆದರೆ, ನಮ್ಮ ರಾಜ್ಯದಲ್ಲಿ ಭಾವನಾತ್ಮಕ ವಿಷಯ ಇಟ್ಟುಕೊಂಡು ಬಂದರೆ ನಡೆಯುವುದಿಲ್ಲ. ನೀವು ವಿಷಯಗಳನ್ನು ಭಾವನಾತ್ಮ ಮಾಡಿದಷ್ಟು ಈ ರಾಜ್ಯದ ಜನ ಮತ್ತಷ್ಟು ಶಿಕ್ಷೆ ಕೊಡ್ತಾರೆ. ಗ್ಯಾರಂಟಿ, ಓಟು, ನಂಬಿಕೆ, ವಿಶ್ವಾಸ ಉಳಿಸಿಕೊಂಡಿರೋದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾತ್ರ" ಎಂದು ವಿಪಕ್ಷಕ್ಕೆ ಎಚ್ಚರಿಕೆ ನೀಡಿದ್ದಾರೆ.
ಎಸ್ಎಸ್ಎಲ್ಸಿಯ ಎಲ್ಲ ಪರೀಕ್ಷೆಗಳು ಬೆಳಗೆಗ ಒಂಬತ್ತು ಗಂಟೆಗೆ ನಡೆಸಲಾಗುತ್ತಿದೆ. ಆದರೆ, ಮಾರ್ಚ್ ಒಂದರಂದು ಮಾತ್ರ ಒಂದು ಪರೀಕ್ಷೆಯನ್ನು ಮಧ್ಯಾಹ್ನ ನಡೆಸಲಾಗುತ್ತಿದೆ. ಅವತ್ತು ಶುಕ್ರವಾರ. ಅಂದೇ ದ್ವಿತೀಯ ಪಿಯುಸಿ ಪರೀಕ್ಷೆಗಳು ಕೂಡ ಆರಂಭವಾಗಲಿವೆ. ಹಾಗಾಗಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಮಧ್ಯಾಹ್ನಕ್ಕೆ ಪುಶ್ ಮಾಡಲಾಗಿದೆ.
ಆದರೆ, ವಿಷಯ ತಿಳಿಯದೇ ನಮಾಜಿಗೋಸ್ಕರ ಪರೀಕ್ಷಾ ಸಮಯವನ್ನೇ ಬದಲಾಯಿಸಲಾಗಿದೆಯೇ ಅಂತ ಚಕ್ರವರ್ತಿ ಸೂಲಿಬೆಲೆ ಟ್ವಿಟ್ ಮಾಡಿದ್ದಾರೆ. ಈ ಟ್ವೀಟನ್ನು ಉಲ್ಲೇಖಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಕಾಂಗ್ರೆಸ್ ಕೂಡ ಟ್ವೀಟ್ ಅನ್ನು ಟೀಕಿಸಿದೆ.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications