ಆಷಾಢ ಶುಕ್ರವಾರ ಹಿನ್ನೆಲೆ ತಾಯಿ ಚಾಮುಂಡಿ ದರ್ಶನ ಪಡೆದ ನಟ ದರ್ಶನ್
Recommended Video
ಮೈಸೂರು, ಜುಲೈ 5 : ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ನಾಡ ಅಧಿದೇವತೆ ಚಾಮುಂಡೇಶ್ವರಿಯ ಪೂಜೆಗಾಗಿ ಹಲವೆಡೆಯಿಂದ ಭಕ್ತರು ಸಾಗರೋಪಾದಿಯಲ್ಲಿ ಆಗಮಿಸುತ್ತಿದ್ದಾರೆ. ಇಂದು ನಟ ದರ್ಶನ್ ಕೂಡ ಚಾಮುಂಡಿ ಬೆಟ್ಟಕ್ಕೆ ಬಂದು ತಾಯಿಯ ದರ್ಶನ ಪಡೆದುಕೊಂಡರು.
ನಟ ದರ್ಶನ್, ಅವರ ಆಪ್ತರು ಮತ್ತು ಅಭಿಮಾನಿಗಳೊಂದಿಗೆ ಬೆಳಿಗ್ಗೆಯೇ ದೇವಸ್ಥಾನಕ್ಕೆ ಬಂದು ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದುಕೊಂಡಿದ್ದಾರೆ. ಜೊತೆಗೆ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಹ ಸಲ್ಲಿಸಿದರು.
ಕರಾವಳಿಯ ಪುಣ್ಯಕ್ಷೇತ್ರಗಳಲ್ಲಿ ಪೂಜೆ ಸಲ್ಲಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
ಇದಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ವರ್ಷವೂ ತಾಯಿಯ ದರ್ಶನ ಪಡೆದುಕೊಳ್ಳುತ್ತೇನೆ. ಅದೇ ರೀತಿ ಈ ವರ್ಷವೂ ಬಂದಿದ್ದೇನೆ. ಆ ತಾಯಿಯಿಂದಲೇ ನಾವೆಲ್ಲ ಇರುವುದು. ಚಾಮುಂಡೇಶ್ವರಿ ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದು ಹೇಳಿದ್ದಾರೆ. ನೆಚ್ಚಿನ ನಟನನ್ನು ಕಂಡ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ಸಡಗರ ರಂಗೇರಿದ್ದು, ಚಾಮುಂಡೇಶ್ವರಿ ದೇವಿಗೆ ವಿಶೇಷ ಅಲಂಕಾರ ಮಾಡಿ, ಪೂಜೆ ಸಲ್ಲಿಸಲಾಗುತ್ತಿದೆ. ಮೊದಲನೇ ಆಷಾಢ ಶುಕ್ರವಾರವಾದ ಕಾರಣ, ಬೆಳಗಿನ ಜಾವದಿಂದಲೇ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಸಾಗರ ಹರಿದುಬರುತ್ತಿದೆ.