ಸುಳ್ವಾಡಿ ಜನರು ನರಹಂತಕ ವೀರಪ್ಪನ್ ನನ್ನು ನೆನಪಿಸಿಕೊಂಡಿದ್ದೇಕೆ?
Recommended Video

ಮೈಸೂರು, ಡಿಸೆಂಬರ್ 18 : ವಿಷಪ್ರಸಾದಕ್ಕೆ ಬಲಿಯಾದ ಆಘಾತದಿಂದ ಇಡೀ ಗ್ರಾಮದ ಜನರು ಇನ್ನೂ ಹೊರಬಂದಿಲ್ಲ. ಅದರ ನಡುವೆ ಇಲ್ಲಿನ ಜನರನ್ನು ಮಾತನಾಡಿಸಲು ಸಿಕ್ಕಾಗ ಒಬ್ಬೊಬ್ಬರದು ಒಂದೊಂದು ಕಥೆ. 1997ರ ಆಗಸ್ಟ್ 15ರಂದು ಚಾಮರಾಜನಗರ ಜಿಲ್ಲೆ ಮೈಸೂರಿನಿಂದ ಬೇರ್ಪಟ್ಟು ಪ್ರತ್ಯೇಕ ಜಿಲ್ಲೆಯಾಯಿತು.
ನಂತರ ಜಿಲ್ಲೆಯಲ್ಲಿ ಇಷ್ಟು ದೊಡ್ಡ ಪ್ರಮಾಣದ ಸಾವು -ನೋವು ಸಂಭವಿಸಿಲ್ಲ. ಇಂತಹ ಪೈಶಾಚಿಕ ಕೃತ್ಯವೂ ನಡೆದಿಲ್ಲ.ಪ್ರಾಣಘಾತುಕ ವಿಷ ಆಹಾರವನ್ನು ಸೇವಿಸಿ, ಜನರು ಸಾಮೂಹಿಕವಾಗಿ ಪ್ರಾಣಕಳೆದುಕೊಂಡ ಅಥವಾ ತೀವ್ರ ರೀತಿಯಲ್ಲಿ ಅಸ್ವಸ್ಥಗೊಂಡು 80-90 ಜನರು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ಪ್ರಕರಣಗಳು ನಡೆದಿಲ್ಲ ಎಂದು ಹೇಳುತ್ತಾರೆ ಜಿಲ್ಲೆಯ ಹಿರಿಯ ಪರಿಸರವಾದಿ ಪುಣಜನೂರು ದೊರೆಸ್ವಾಮಿ.
ಜಿಲ್ಲೆ ಇನ್ನೂ ಮೈಸೂರಿನೊಂದಿಗೆ ಬೆಸೆದಿದುಕೊಂಡಿದ್ದ ಅವಧಿಯಲ್ಲಿ, 90ರ ದಶಕದ ಆರಂಭದಲ್ಲಿ ಮಲೆಮಹದೇಶ್ವರ ಅರಣ್ಯ ಹಾಗೂ ಇನ್ನಿತರ ಅರಣ್ಯ ಪ್ರದೇಶಗಳನ್ನು ತನ್ನ ಕಾರ್ಯಕ್ಷೇತ್ರವನ್ನಾಗಿ ಮಾಡಿಕೊಂಡಿದ್ದ ನರಹಂತಕ ವೀರಪ್ಪನ್ ನಾಲ್ಕೈದು ಬಾರಿ ದ್ವೇಷದ ಕ್ರೌರ್ಯ ಮೆರೆದು ಸಾಮೂಹಿಕವಾಗಿ ಹಲವರನ್ನು ಹತ್ಯೆ ಮಾಡಿದ್ದ. ಅದೇ ಕೊನೆ. ಆ ನಂತರ ಸಾಮೂಹಿಕ ನರಮೇಧ ಪ್ರಕರಣಗಳು ಈ ಭಾಗದಲ್ಲಿ ನಡೆದಿರಲಿಲ್ಲ ಎಂದು ಹೇಳುತ್ತಾರೆ ಹಿರಿಯರು. ಮುಂದೆ ಓದಿ..

ಪೊಲೀಸರ ಮೇಲೆ ದ್ವೇಷ
ಸದಾ ಪೊಲೀಸರ ಮೇಲೆ ದ್ವೇಷ ಕಾರುತ್ತಲೇ ಇದ್ದ ವೀರಪ್ಪನ್ 1992ರ ಮೇ 19ರಂದು ಹನೂರು ತಾಲ್ಲೂಕಿನ ರಾಮಾಪುರ ಪೊಲೀಸ್ ಠಾಣೆಯ ಮೇಲೆ ಏಕಾಏಕಿ ದಾಳಿ ನಡೆಸಿ ಐವರು ಪೊಲೀಸ್ ಸಿಬ್ಬಂದಿಯನ್ನು ಹತ್ಯೆ ಮಾಡಿದ್ದ.
ಅದೇ ವರ್ಷ ಆಗಸ್ಟ್ 14ರಂದು ಮೀಣ್ಯಂ ಬಳಿ ಹೊಂಚು ಹಾಕಿ ಕುಳಿತು, ಅಂಬಾಸಿಡರ್ ಕಾರಿನಲ್ಲಿ ಬರುತ್ತಿದ್ದ ಎಸ್ಪಿ ಹರಿಕೃಷ್ಣ, ಪೊಲೀಸ್ ಅಧಿಕಾರಿ ಶಕೀಲ್ ಅಹಮದ್ ಹಾಗೂ ಇತರ ಪೊಲೀಸ್ ಸಿಬ್ಬಂದಿ ಮೇಲೆ ಗುಂಡಿನ ಮಳೆಗೆರದು, ಏಳು ಜನರನ್ನು ಹತ್ಯೆ ಮಾಡಿ ಕ್ರೌರ್ಯ ಮೆರೆದಿದ್ದ.

ನೆಲಬಾಂಬ್ ಸ್ಫೋಟ
1993ರ ಏಪ್ರಿಲ್ 9ರಂದು ಪೊಲೀಸ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಎರಡು ವಾಹನಗಳನ್ನು ಮಹದೇಶ್ವರ ಬೆಟ್ಟದ ವ್ಯಾಪ್ತಿಯ ಪಾಲಾರ್ ರಸ್ತೆಯಲ್ಲಿ ನೆಲಬಾಂಬ್ ಹುದಗಿಸಿಟ್ಟು ಸ್ಫೋಟಿಸಿದ್ದ ವೀರಪ್ಪನ್. ಈ ಭೀಕರ ದುರಂತದಲ್ಲಿ 22 ಮಂದಿ ಜೀವ ತೆತ್ತಿದ್ದರು.

ಐವರು ಸಾವು
1991-93ರ ನಡುವಿನ ಅವಧಿಯಲ್ಲಿ, ತನ್ನ ಪತ್ನಿಯನ್ನು ತಮಿಳುನಾಡು ಪೊಲೀಸರಿಗೆ ಒಪ್ಪಿಸಿದ ಕಾರಣಕ್ಕೆ ಚಾಮರಾಜನಗರ ತಾಲ್ಲೂಕಿನ ಪುಣಜನೂರಿನಲ್ಲಿ ಐವರು ನಾಗರಿಕರನ್ನು ದಾರುಣವಾಗಿ ಕೊಂದು ರಣಕೇಕೆ ಹಾಕಿದ್ದ.

ನೆನೆಯುತ್ತಿರುವುದು ವಿಪರ್ಯಾಸವೇ!
ನಮ್ಮ ರಾಜ್ಯದವರು ಹಾಗೂ ತಮಿಳುನಾಡಿನವರು ಸೇರಿದಂತೆ ವೀರಪ್ಪನ್ ಒಟ್ಟು 114 ಜನರನ್ನು ಹತ್ಯೆ ಮಾಡಿದ್ದ. ಪೊಲೀಸರು, ಅರಣ್ಯ ಅಧಿಕಾರಿಗಳು ಹಾಗೂ ತನ್ನ ಬಗ್ಗೆ ಮಾಹಿತಿ ನೀಡುತ್ತಿರುವವರ ಮೇಲೆ ಸದಾ ಹಗೆ ಸಾಧಿಸುತ್ತಿದ್ದ ವೀರಪ್ಪನ್ ಅವರನ್ನು ನಿರ್ದಾಕ್ಷಿಣ್ಯವಾಗಿ ಹತ್ಯೆ ಮಾಡುವ ಮೂಲಕ ಸ್ಥಳೀಯರಲ್ಲಿ ಭಯ ಬಿತ್ತಿದ್ದರು ಎನ್ನುತ್ತಾರೆ. ಒಟ್ಟಾರೆ ಈ ದುರಂತದ ನಡುವೆ ಇಲ್ಲಿನ ಜನರು ನರಹಂತಕನನ್ನು ನೆನೆಯುತ್ತಿರುವುದು ವಿಪರ್ಯಾಸವೇ ಸರಿ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications