ಆಷಾಢ ಶುಕ್ರವಾರ ಚಾಮುಂಡೇಶ್ವರಿ ದರ್ಶನಕ್ಕೆ ಮಾರ್ಗಸೂಚಿ
ಮೈಸೂರು, ಜೂನ್ 30: ಆಷಾಢ ಮಾಸದ ಆಷಾಢ ಶುಕ್ರವಾರ ಹಾಗೂ ತಾಯಿ ವರ್ಧಂತಿಯ ದಿನ ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ಸಾವಿರಾರು ಭಕ್ತಾಧಿಗಳು ಆಗಮಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಪೂರ್ವ ಸಿದ್ಧತೆಯ ಕಾರ್ಯಗಳ ಬಗ್ಗೆ ಶಾಸಕರಾದ ಎಸ್. ಎ. ರಾಮದಾಸ್ ಪ್ರಗತಿ ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿದ ಶಾಸಕ ರಾಮದಾಸ್, "ಜುಲೈ ತಿಂಗಳಾದ್ಯಂತ ಅಂದರೆ ದಿನಾಂಕ 1 ರಿಂದ ಜುಲೈ 28 ರ ತನಕ ಆಷಾಢ ಮಾಸದಲ್ಲಿ ಬರುವ ಶುಕ್ರವಾರ ಮತ್ತು ತಾಯಿ ವರ್ಧಂತಿಯ ದಿನಗಳಲ್ಲಿ ಸಾವಿರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕೈಗೊಳ್ಳಬೇಕಾದ ಕಾರ್ಯಗಳ ವೀಕ್ಷಣೆ ಮತ್ತು ಪ್ರಗತಿ ಪರಿಶೀಲನೆ ನಡೆಸಲಾಯಿತು" ಎಂದರು.
"ಭೇಟಿಯ ಸಂದರ್ಭದಲ್ಲಿ ಪೊಲೀಸರು, ಸಂಚಾರಿ ಪೊಲೀಸರು, ನಗರ ಪಾಲಿಕೆ, ಯುಜಿಡಿ, ವಾಣಿವಿಲಾಸ ನೀರು ಸರಬರಾಜು, ಅಭಿವೃದ್ಧಿ ಪ್ರಾಧಿಕಾರ, ಆರೋಗ್ಯ ಇಲಾಖೆ ಹೀಗೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು" ಎಂದು ತಿಳಿಸಿದರು.

"ಎಲ್ಲಾ ಕಡೆ ಸಿಸಿಟಿವಿ ಅಳವಡಿಕೆ ಹಾಗೂ ಬರುವ ಭಕ್ತಾಧಿಗಳಿಗೆ ಯಾವುದೇ ತೊಂದರೆಯಾಗದೆ ನೇರವಾಗಿ ದರ್ಶನ ಮಾಡಲು ಅನುಕೂಲಕರವಾಗುವಂತೆ ಹಾಗೂ ಎಲ್ಇಡಿ ಪರದೆ ಮೂಲಕ ದರ್ಶನಕ್ಕೆ ಅವಕಾಶ ಕಲ್ಪಿಸಿ ಕೊಡುವುದು ಸೇರಿದಂತೆ, ವಿವಿಧ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು" ಎಂದು ಹೇಳಿದರು.
"ಮೂರು ವಿಧವಾದ ಸರತಿ ಸಾಲುಗಳನ್ನು ಮಾಡಲಾಗಿದ್ದು ಉಚಿತವಾಗಿ ದರ್ಶನ ಪಡೆಯಲು, ರೂಪಾಯಿ 50ರ ಟಿಕೆಟ್ ಮೂಲಕ ದರ್ಶನ ಪಡೆಯಲು, ಹಾಗೂ 300 ಟಿಕೆಟ್ನಲ್ಲಿ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ"ಎಂದು ಎಸ್. ಎ. ರಾಮದಾಸ್ ವಿವರಿಸಿದರು.

"ಕ್ಯೂನಲ್ಲಿ ನಿಂತು ಬರುವ ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆಯನ್ನು ಸರತಿ ಸಾಲಿನ ಸ್ಥಳದಲ್ಲಿಯೇ ಇ-ಟಾಯಲೆಟ್ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ. ದೇವರ ದರ್ಶನ ಪಡೆದ ಭಕ್ತಾದಿಗಳಿಗೆ ಪ್ರತಿಯೊಬ್ಬರಿಗೂ ಕುಂಕುಮ ಹಾಗೂ ಪ್ರಸಾದ ನೀಡಲು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ" ಎಂದು ರಾಮದಾಸ್ ಹೇಳಿದರು.
ಎರಡು ರೀತಿಯ ಪ್ರಸಾದ; ದರ್ಶನ ಪಡೆದು ಹೊರ ಬರುವ ಭಕ್ತಾದಿಗಳಿಗೆ ಎರಡು ರೀತಿಯ ಪ್ರಸಾದ ವಿತರಣೆ ಮಾಡಲು ದೇವಾಲಯದ ಆಡಳಿತ ಮಂಡಳಿ ನಿರ್ಧರಿಸಿದೆ. ಒಂದು ದೊನ್ನೆಯ ಮೂಲಕ ಪ್ರಸಾದ, ಮತ್ತೊಂದು ಕುಳಿತು ಬಾಳೆ ಎಲೆಯಲ್ಲಿ ಒಂದೇ ಸಮಯದಲ್ಲಿ 1,000 ಜನಕ್ಕೆ ಊಟ ಪ್ರಸಾದ ನೀಡುವಂತಹ ಕಾರ್ಯಕ್ಕೆ ದೇವಾಲಯ ಸಜ್ಜಾಗಿದೆ. ಪ್ರಸಾದ ಸೇವಿಸಿ ನಂತರ ಬಾಳೆ ಎಲೆ, ನೀರು ಲೋಟ, ಇತರೆ ತ್ಯಾಜ್ಯಗಳನ್ನು ನಗರಪಾಲಿಕೆ ಆರೋಗ್ಯ ಅಧಿಕಾರಿಗಳು ಟ್ರ್ಯಾಕ್ಟರ್ ಮೂಲಕ ವಿಲೇವಾರಿ ಮಾಡಲಿದ್ದಾರೆ.
ಭಕ್ತಾದಿಗಳಿಗೆ ತಮ್ಮ ಖಾಸಗಿ ವಾಹನಗಳ ಮೂಲಕ ಚಾಮುಂಡಿಬೆಟ್ಟಕ್ಕೆ ತೆರಳಲು ಅವಕಾಶ ಇಲ್ಲದ ಕಾರಣ ಉಚಿತವಾಗಿ ಬಸ್ ವ್ಯವಸ್ಥೆಯನ್ನು ತಿ. ನರಸೀಪುರ ರಸ್ತೆ ಹಾಗೂ ಎಂ. ಜಿ. ರಸ್ತೆಯ ಜಂಕ್ಷನ್ನಲ್ಲಿ ಇರುವ ಮೈದಾನ ಲಲಿತ ಮಹಲ್ ಹೊಟೇಲಿನ ಪಕ್ಕದಲ್ಲಿರುವ ಮೈದಾನದಲ್ಲಿ ಕಲ್ಪಿಸಲಾಗಿರುತ್ತದೆ. ಭಕ್ತಾದಿಗಳಿಗೆ ಹಾಗೂ ಎರಡು ಡೋಸ್ ಲಸಿಕೆ ಕಡ್ಡಾಯವಾಗಿದ್ದು ಇಲ್ಲದಿದ್ದಲ್ಲಿ ಕೋವಿಡ್ ಪರೀಕ್ಷೆಯ 72 ಗಂಟೆ ಒಳಗಿನ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯವಾಗಿರುತ್ತದೆ.
Recommended Video
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications