ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜುಲೈ 20ರಂದು ಚಾಮುಂಡಿ ಬೆಟ್ಟದಲ್ಲಿ ದೇವರ ದರ್ಶನವಿಲ್ಲ

|
Google Oneindia Kannada News

ಮೈಸೂರು, ಜುಲೈ 16 : ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಯಲು ಜುಲೈ 20ರಂದು ಚಾಮುಂಡಿಬೆಟ್ಟದಲ್ಲಿ ದೇವರ ದರ್ಶನವನ್ನು ರದ್ದುಗೊಳಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು ಸೋಕಿತರ ಸಂಖ್ಯೆ 1320ಕ್ಕೆ ಏರಿಕೆಯಾಗಿದೆ.

Recommended Video

Oxford Covid Vaccine ಮಾನವ ಪ್ರಯೋಗದ ಪಲಿತಾಂಶ ಇಂದು | Oneindia Kannada

ಗುರುವಾರ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಜುಲೈ 20 ರಂದು ಚಾಮುಂಡಿಬೆಟ್ಟದಲ್ಲಿ ದೇವರ ದರ್ಶನವನ್ನು ರದ್ದುಪಡಿಸಲಾಗಿದೆ. ಆಷಾಢ ಶುಕ್ರವಾರ, ಪ್ರತಿ ಶನಿವಾರ ಮತ್ತು ಭಾನುವಾರಗಳಂದು ಹೇರಲಾಗಿದ್ದ ನಿಷೇಧವೂ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ಮೈಸೂರು ನಗರದಲ್ಲಿ ಎಲ್ಲಾ ಟೀ ಅಂಗಡಿಗಳು ಬಂದ್ ಮೈಸೂರು ನಗರದಲ್ಲಿ ಎಲ್ಲಾ ಟೀ ಅಂಗಡಿಗಳು ಬಂದ್

ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷೇಧವಿರುವ ದಿನಗಳಂದು ಗ್ರಾಮಸ್ಥರ ವಾಹನ ಹಾಗೂ ತುರ್ತು ಸೇವಾ ವಾಹನಗಳನ್ನು ಹೊರತುಪಡಿಸಿ, ಸಾರ್ವಜನಿಕರ ವಾಹನ ಮತ್ತು ಖಾಸಗಿ ವಾಹನಗಳು ಸಂಚಾರ ನಡೆಸುವಂತಿಲ್ಲ.

ಮೈಸೂರು: MSIL ಮದ್ಯದಂಗಡಿ ತೆರೆಯಲು ಸ್ಥಳೀಯರ ವಿರೋಧಮೈಸೂರು: MSIL ಮದ್ಯದಂಗಡಿ ತೆರೆಯಲು ಸ್ಥಳೀಯರ ವಿರೋಧ

Chamundeshwari Temple Close For Devotes On July 20

ಚಾಮುಂಡಿಬೆಟ್ಟ ಹಾಗೂ ಉತ್ತನಹಳ್ಳಿ ದೇವಾಲಯದ ಪ್ರದೇಶದಲ್ಲಿ ದೇವಾಲಯದ ವತಿಯಿಂದ ಹಾಗೂ ದಾನಿಗಳಿಂದ ಪ್ರಸಾದ ತಯಾರಿಸುವುದು ಹಾಗೂ ವಿತರಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

 ಮೈಸೂರು ಲಾಕ್ ಡೌನ್ ಕುರಿತು ಸಿಎಂಗೆ ಸಾರಾ ಮಹೇಶ್ ಪತ್ರ ಮೈಸೂರು ಲಾಕ್ ಡೌನ್ ಕುರಿತು ಸಿಎಂಗೆ ಸಾರಾ ಮಹೇಶ್ ಪತ್ರ

ಮೈಸೂರು ನಗರದಲ್ಲಿ ಕೊರೊನಾ ವೈರಸ್ ಸೋಂಕಿನ ತಡೆಗೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನಗರದ ಟೀ ಅಂಗಡಿಗಳಲ್ಲಿ ಮತ್ತು ಫುಟ್‌ಪಾತ್‌ನ ಟೀ ವ್ಯಾಪಾರಿ ಸ್ಥಳಗಳಲ್ಲಿ ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಅನಗತ್ಯವಾಗಿ ಗುಂಪು ಸೇರುತ್ತಿರುವುದು ಬೆಳಕಿಗೆ ಬಂದಿದೆ. ಆದ್ದರಿಂದ, ಎಲ್ಲಾ ಟೀ ಅಂಗಡಿಗಳನ್ನು ಮುಚ್ಚಲು ಮಹಾನಗರ ಪಾಲಿಕೆ ಆದೇಶ ನೀಡಿದೆ.

English summary
Abhiram G. Sankar deputy commissioner of Mysuru banned devotes entry for Chamundeshwari temple on July 20, 2020. Saturday and Sunday also devotes entry banned for temple.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X