Chamundi Hill: ಮೈಸೂರು ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣದ ಅಗತ್ಯವಿಲ್ಲ: ಸಂಸದ ಪ್ರತಾಪ್ ಸಿಂಹ ಹೀಗೆ ಹೇಳಿದ್ದೇಕೆ?
ಮೈಸೂರು, ಡಿಸೆಂಬರ್, 29: ಇನ್ನು ತುಂಬಾ ದಿನಗಳಿಂದ ಮೈಸೂರು ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಮಾಡಬೇಕು ಎನ್ನುವ ಕೂಗುಗಳು ಎದ್ದಿದ್ದವು, ಮತ್ತೊಂದೆಡೆ ಇದಕ್ಕೆ ವಿರೋಧಗಳು ಕೂಡ ವ್ಯಕ್ತವಾಗಿದ್ದವು. ಇತ್ತೀಚೆಗಷ್ಟೇ ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಾಣ ಮಾಡಲು ನಾವು ಸಿದ್ಧರಿದ್ದೇವೆ. ಆದರೆ ಪರಿಸರವಾದಿಗಳು ಸೇರಿದಂತೆ ಯಾರೂ ಅಡ್ಡಿಪಡಿಸಬಾರರು ಅಂತಾ ಸಿಎಂ ಸಿದ್ದರಾಮಯ್ಯ ಕೇಳಿಕೊಂಡಿದ್ದರು. ಆದರೆ ಇದೀಗ ಇದಕ್ಕೆ ಸಂಸದ ಪ್ರತಾಪ್ ಸಿಂಹ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.
ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣದ ಅಗತ್ಯವಿಲ್ಲ. ನಂದಿ ಬೆಟ್ಟಕ್ಕೆ ಬೇಕಾದರೆ ರೋಪ್ ವೇ ನಿರ್ಮಾಣ ಮಾಡಿಕೊಳ್ಳಲಿ. ಈ ಹಿಂದೆಯೇ ಶಾಸಕ ಜಿ.ಟಿ.ದೇವೆಗೌಡ ಹಾಗೂ ನಾವೆಲ್ಲರೂ ಸೇರಿ ಸಭೆ ನಡೆಸಿ ಇದರ ಬಗ್ಗೆ ತೀರ್ಮಾನ ಕೈಗೊಂಡಿದ್ದೇವೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಮಾಡಲು ನಮ್ಮ ವಿರೋಧ ಇದೆ. ಚಾಮುಂಡಿ ಬೆಟ್ಟ ಪ್ರೇಕ್ಷಣೀಯ ಸ್ಥಳವಲ್ಲ, ಅದು ಧಾರ್ಮಿಕ ತಾಣವಾಗಿದೆ. ಚಾಮುಂಡಿ ಬೆಟ್ಟಕ್ಕೆ ಭಕ್ತಿ ಭಾವದಿಂದ ಹೋಗಬೇಕು. ಚಾಮುಂಡಿ ಬೆಟ್ಟ ರೋಪ್ ವೇನಲ್ಲಿ ಹೋಗಿ ನೋಡುವಂತಹ ಸ್ಥಳವಲ್ಲ. ಆದ್ದರಿಂದ ರೋಪ್ ವೇ ಅನ್ನು ನಾವು ವಿರೋಧಿಸುತ್ತೇವೆ ಎಂದು ಹೇಳಿದ್ದಾರೆ.
ಇನ್ನು ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಉದ್ಘಾಟನೆ ಆಗಲಿದೆ. ಅಂದು ಮೈಸೂರು-ಕೊಡಗು ಜಿಲ್ಲೆಯ ಎಲ್ಲಾ ದೇಗುಲಗಳಲ್ಲೂ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಲಿವೆ ಎಂದರು. ಮತ್ತೊಂದೆಡೆ ಬೆಂಗಳೂರು- ಮೈಸೂರು ಹೇವೇ ನಿರ್ಮಾಣ ಕ್ರೆಡಿಟ್ ವಾರ್ಗಳು ನಡೆಯುತ್ತಲೇ ಇವೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಂಸದ ಪ್ರತಾಪ್ ಸಿಂಹ ಅವರು, ಹೆದ್ದಾರಿ ಮಾಡಿಸಿದ್ದು ನಾನೇ. ನಿರ್ಮಾಣಕ್ಕೆ 8,500 ಕೋಟಿ ರೂಪಾಯಿ ವೆಚ್ಚ ಆಗಿದೆ. ಇದಕ್ಕೆ ರಾಜ್ಯ ಸರ್ಕಾರ ಎಂಟೂವರೆ ರೂಪಾಯಿ ಕೂಡ ನೀಡಿಲ್ಲ. ಹೈವೇ ನಿರ್ಮಿಸಿದ್ದು ಕೇಂದ್ರ ಸರ್ಕಾರ. ಹೈವೇ ಉದ್ಘಾಟನೆ ಮಾಡಿದ್ದು ಪ್ರಧಾನಿ ನರೇಂದ್ರ ಮೋದಿ. ಬೇಕಾದರೆ ಹೈವೇಯಲ್ಲಿ ಓಡಾಡುವವರನ್ನು ಕೇಳಿದರೂ, ರಸ್ತೆಯನ್ನು ಯಾರು ಮಾಡಿಸಿದ್ದಾರೆ ಅಂತಾ ಹೇಳುತ್ತಾರೆ ಎಂದರು.
ಹಾಗೆಯೇ ಮೈಸೂರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಲಾಗುತ್ತದೆ. ಇದಕ್ಕಾಗಿ ಹುಯಿಲಾಳು ಬಳಿ 26 ಹೆಕ್ಟೇರ್ ಜಾಗ ಗುರುತಿಸಲಾಗಿದೆ. ಇದಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿ ಅನುಮೋದನೆ ನೀಡಿದರೆ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ಅವರು ತಿಳಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications