ಸರಳ ದಸರಾ ಉದ್ಘಾಟನೆಗೆ ಸಿದ್ಧವಾದ ಚಾಮುಂಡಿ ಬೆಟ್ಟ
ಮೈಸೂರು, ಅಕ್ಟೋಬರ್ 16: ಮೈಸೂರು ದಸರಾ ಇತಿಹಾಸದಲ್ಲಿಯೇ ಎಲ್ಲರೂ ನೆನಪಿಟ್ಟುಕೊಳ್ಳುವಂತಹ ಪರಿಸ್ಥಿತಿ ಈ ಬಾರಿ ಒದಗಿ ಬಂದಿದೆ. ಸರಳ ಮತ್ತು ಸಾಂಪ್ರದಾಯಿಕ ದಸರಾವನ್ನು ಆಚರಿಸುವುದು ಅನಿವಾರ್ಯವಾಗಿರುವುದರಿಂದ ಮೈಸೂರಿನಲ್ಲಿ ದಸರಾ ರಂಗು ಕಾಣಿಸುತ್ತಿಲ್ಲ.
ಹಿಂದಿನ ಕಾಲದಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯದಂತೆ ದಸರಾ ಆಚರಣೆಗೆ ಅಕ್ಟೋಬರ್ 17ರಂದು ಚಾಲನೆ ನೀಡಲಾಗುತ್ತಿದ್ದು, ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ.
ಶನಿವಾರ ಬೆಳಿಗ್ಗೆ 7.45ರಿಂದ 8.15ರೊಳಗೆ ಸಲ್ಲುವ ಶುಭ ಮುಹೂರ್ತದಲ್ಲಿ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಯ ಅಗ್ರಪೂಜೆಯೊಡನೆ ಹತ್ತು ದಿನಗಳ ದಸರಾ ಕಾರ್ಯಕ್ರಮ ಆರಂಭವಾಗಲಿದ್ದು, ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಹಿರಿಯ ಪ್ರಾಧ್ಯಾಪಕ ಮತ್ತು ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಸಚಿವರು, ಗಣ್ಯರ ಉಪಸ್ಥಿತಿಯಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಅಗ್ರ ಪೂಜೆ ಸಲ್ಲಿಸಿ ಚಾಲನೆ ನೀಡಲಿದ್ದಾರೆ.

ದಸರಾ ಉದ್ಘಾಟನೆಗೆ ಮುನ್ನ ಮುಖ್ಯಮಂತ್ರಿಗಳೊಂದಿಗೆ ಬೆಟ್ಟಕ್ಕೆ ಆಗಮಿಸುವ ಡಾ.ಮಂಜುನಾಥ್ ಅವರು ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಆ ನಂತರ ದೇವಸ್ಥಾನದ ಪಕ್ಕದಲ್ಲೇ ನಿರ್ಮಿಸಿರುವ ವಿಶೇಷ ವೇದಿಕೆಯಲ್ಲಿ, ಬೆಳ್ಳಿರಥದಲ್ಲಿ ಅಲಂಕರಿಸಿರುವ ಚಾಮುಂಡೇಶ್ವರಿಗೆ ಪುಷ್ಪಾರ್ಚನೆಗೈದು ದಸರಾ ಆಚರಣೆಗೆ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಪ್ರಹ್ಲಾದ ಜೋಶಿ, ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ.ಕಾರಜೋಳ, ಲಕ್ಷ್ಮಣ ಸಂಗಪ್ಪ ಸವದಿ, ಸಚಿವರಾದ ಎಸ್.ಟಿ.ಸೋಮಶೇಖರ್, ಸಿ.ಟಿ.ರವಿ, ಕೋಟ ಶ್ರೀನಿವಾಸ ಪೂಜಾರಿ, ಮೇಯರ್ ತಸ್ನೀಂ, ಜಿ.ಪಂ ಅಧ್ಯಕ್ಷೆ ಬಿ.ಸಿ.ಪರಿಮಳ ಶ್ಯಾಂ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಆದರೆ ಇದೇ ವೇಳೆ ದಸರಾ ಉದ್ಘಾಟನೆ ಹೊರತುಪಡಿಸಿ ಬೇರೆ ಯಾವುದೇ ಕಾರ್ಯಕ್ರಮಗಳಿರುವುದಿಲ್ಲ. ಉದ್ಘಾಟನಾ ಕಾರ್ಯಕ್ರಮವನ್ನು 200 ಜನರಿಗೆ ಮಿತಿಗೊಳಿಸಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋವಿಡ್ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಫಲಿತಾಂಶ ಇರುವ ವ್ಯಕ್ತಿಗಳಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗಿದೆ. ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಮುಂಡಿ ಬೆಟ್ಟದಲ್ಲಿ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಇದೇ ಸಂದರ್ಭ, ಕೊರೊನಾ ವಿರುದ್ಧ ಹಗಲಿರುಳೆನ್ನದೆ ಅವಿರತವಾಗಿ ಶ್ರಮಿಸಿರುವ ಕೊರೊನಾ ವಾರಿಯರ್ ಗಳಾದ ಎಚ್ ಎಚ್ ಎಂಬಿಜಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಟಿ.ಆರ್.ನವೀನ್, ಜಿಲ್ಲಾ ಆಸ್ಪತ್ರೆಯ ಹಿರಿಯ ಶೂಶ್ರೂಷಾಧಿಕಾರಿ ರುಕ್ಮಿಣಿ, ಪೊಲೀಸ್ ಕಾನ್ ಸ್ಟೆಬಲ್ ಪಿ.ಕುಮಾರ, ಪಾಲಿಕೆ ಪೌರಕಾರ್ಮಿಕೆ ಮರಗಮ್ಮ, ನಂಜನಗೂಡು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ನೂರ್ ಜಾನ್, ಸಮಾಜ ಸೇವಕ ಆಯೂಬ್ ಅಹಮದ್ ಅವರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ. ಅತ್ತ ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆಯೇ ಇತ್ತ ಅರಮನೆಯಲ್ಲಿ ಖಾಸಗಿ ದರ್ಬಾರ್ ಗೆ ಚಾಲನೆ ದೊರೆಯಲಿದೆ.
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications