ಮೈಸೂರು ವಿವಿ ಕುಲಪತಿಗೆ ಮೋಸ: ಸೈಟ್ ವಿಚಾರದಲ್ಲಿ ವಂಚನೆ
ಮೈಸೂರು, ಜೂನ್ 20: ಮೈಸೂರು ವಿಶ್ವವಿದ್ಯಾನಿಲಯದ ಉದ್ಯೋಗಿಗಳ ಗೃಹ ನಿರ್ಮಾಣ ಸಹಕಾರ ಸಂಘದಿಂದ ಕುಲಪತಿಗೆ ವಂಚನೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಹೇಮಂತ್ ಕುಮಾರ್ ಮೋಸ ಆಗಿರುವ ಬಗ್ಗೆ ಆರೋಪ ಮಾಡಿದ್ದಾರೆ.
ಸಹಕಾರ ಸಂಘ ನಿವೇಶನ ನೀಡುವುದಾಗಿ ಹಣ ಕಟ್ಟಿಸಿಕೊಂಡು ವಿವಿ.ಉದ್ಯೋಗಿಗಳಲ್ಲದವರಿಗೆ ಸೈಟ್ ನೀಡಿದೆ. ಆದರೆ, ಸಹಕಾರ ಸಂಘದ ಅಧ್ಯಕ್ಷರಿಂದ ಐದಾರು ಕೋಟಿ ಹಣ ವಂಚನೆ ಆರೋಪ ಕೇಳಿಬಂದಿದೆ. ಹಾಲಿ ಹಾಗೂ ಮಾಜಿ ಅಧ್ಯಕ್ಷರ ತಿಕ್ಕಾಟಕ್ಕೆ ವಿವಿ ಉದ್ಯೋಗಿಗಳು ನಿವೇಶನ ಕಳೆದುಕೊಂಡಿದ್ದಾರೆ.
ವಿವಿ ಕುಲಪತಿ, ಕುಲಸಚಿವ ಸೇರಿದಂತೆ ವಿವಿಧ ವಿಭಾಗಗಳ ಐನೂರಕ್ಕೂ ಹೆಚ್ಚು ಉದ್ಯೋಗಿಗಳಿಗೆ ನಿವೇಶನ ನೀಡದೆ ವಂಚನೆ ಮಾಡಲಾಗಿದೆಯಂತೆ. ನಿವೇಶನದ ಮಾರುಕಟ್ಟೆ ಬೆಲೆ 25-30 ಲಕ್ಷ ರೂಪಾಯಿ, ಸಕ್ರಿಯ ಸದಸ್ಯರಲ್ಲದ ಸಹ ಸದಸ್ಯರಿಗೆ ನೀಡಿದ್ದು 6-8 ಲಕ್ಷ ರೂಪಾಯಿಗಳು. ಚುನಾವಣೆ ನೀತಿ ಸಂಹಿತೆ ಇದ್ದರೂ, 3 ಜನರಿಗೆ ಆಡಳಿತ ಮಂಡಳಿ ನಿವೇಶನ ರಿಜಿಸ್ಟರ್ ಮಾಡಿತ್ತು.

ಆಡಳಿತ ಮಂಡಳಿ ಸಹಕಾರ ನೀತಿ ನಿಯಮಗಳನ್ನ ಗಾಳಿಗೆ ತೂರಿ, ಮಾರುಕಟ್ಟೆ ಬೆಲೆಗಿಂತ ಕನಿಷ್ಠ ಬೆಲೆಗೆ ನೋಂದಣಿ ಮಾಡಿದೆ. ಸಂಘದ ಸದಸ್ಯರಲ್ಲದ 19 ಜನರಿಗೆ ಆಡಳಿತ ಮಂಡಳಿ ನಿವೇಶನ ಮಾರಾಟ ಮಾಡಿದೆ. ಕುಲಪತಿ, ಕುಲಸಚಿವರು ಸೇರಿದಂತೆ ಲಕ್ಷ ಲಕ್ಷ ಹಣ ಕಟ್ಟಿರುವ ಐನೂರಕ್ಕೂ ಹೆಚ್ಚು ಉದ್ಯೋಗಿಳಿಗೆ ನಿವೇಶನ ನೀಡದೆ ವಂಚಿಸಿದೆ.
ನಾನೊಬ್ಬ ಸಾಮಾನ್ಯ ಸದಸ್ಯ, ನಾನು ಸಹ ನಿವೇಶನಕ್ಕಾಗಿ ನಾಲ್ಕು ಕಂತುಗಳಲ್ಲಿ ಹಣ ಕಟ್ಟಿದ್ದೇನೆ. 2006 -07 ರಲ್ಲೇ ನಾನು ಸಹಕಾರ ಸಂಘದ ಸದಸ್ಯನಾಗಿದ್ದೇನೆ. ಸದಸ್ಯರಲ್ಲದವರಿಗೆ ನಿವೇಶನ ನೀಡಿರುವುದು ಎಷ್ಟರ ಮಟ್ಟಿಗೆ ಸರಿ? ವಿ.ಸಿ ಪ್ರಶ್ನೆ ಮಾಡಿದ್ದಾರೆ.
ಸದಸ್ಯರು ದೂರು ನೀಡಿದರೆ, ಕಾನೂನು ಸಲಹೆ ಪಡೆದು ಕ್ರಮಕೈಗೊಳ್ಳುತ್ತೇನೆ ಎಂದು ಕುಲಪತಿ ಪ್ರೊ.ಹೇಮಂತ್ ಕುಮಾರ್ ಹೇಳಿಕೆ ನೀಡಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications