ಮೈಸೂರಿಗರಿಗೆ ಉಚಿತ ಶೌಚಾಲಯ ನಿರ್ಮಿಸಿಕೊಟ್ಟ ಚಂಢೀಗಡದ ಯುವತಿ
ಮೈಸೂರು,ಜೂನ್ 16: ಸಮಾಜಸೇವೆ ಅಂದರೆ ಸಾಕು ನಮ್ಮ ಯುವಕರು ನಮಗೆ ಟೈಂ ಎಲ್ಲಿದೇ ಎಂದು ಮಾರು ದೂರ ಓಡುವವರೇ ಹೆಚ್ಚು. ಆದರೆ ಇಲ್ಲೊಬ್ಬ ಯುವತಿ ಇವರೆಲ್ಲರನ್ನು ಮೀರಿಸುವ ಸಾಧನೆ ಮಾಡಿ, ಹಳ್ಳಿ ಜನರ ಮನ ಗೆದ್ದಿದ್ದಾಳೆ. ಮೈಸೂರಿನ ಕುಗ್ರಾಮದಲ್ಲಿ ಚಂಡೀಗಢದ ಯುವತಿಯೋರ್ವಳು 70ಶೌಚಾಲಯಗಳನ್ನು ನಿರ್ಮಿಸಿ ಗ್ರಾಮದ ಜನತೆಗೆ ಸಹಾಯ ಮಾಡಿದ್ದಾಳೆ.
ನರಸೀಪುರ ತಾಲೂಕು ಬನ್ನೂರು ಹೋಬಳಿಯ ಬಿ.ಸಿ ಹಳ್ಳಿಯಲ್ಲಿ ಚಂಡೀಗಢ ಮೂಲದ ಯುವತಿ ಉಸ್ಮಾ ಗೋಸ್ವಾಮಿ ಶೌಚಾಲಯಗಳನ್ನು ನಿರ್ಮಿಸಿದ್ದು, ಈಕೆ ದೆಹಲಿ ವಿಶ್ವವಿದ್ಯಾನಿಲಯದ ಸಮಾಜ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾಳೆ. ಯುಪಿಎಸ್ಸಿ ಮಾಡಬೇಕೆನ್ನುವ ಗುರಿ ಹೊಂದಿರುವ ಉಸ್ಮಾ ಅವರಿಗೆ ಗ್ರಾಮಗಳಲ್ಲಿ ವಾಸ ಮಾಡುವ ಜನರಿಗೆ ಸಹಾಯ ಮಾಡುವ ಉದ್ದೇಶವಿದೆಯಂತೆ.

ಎಸ್ ಬಿ ಐ ಯೂತ್ ಫಾರ್ ಇಂಡಿಯಾ ಫೆಲೋಶಿಪ್ ಈಕೆಯನ್ನು ಆಡಳಿತ ವಲಯದಲ್ಲಿ ಕಾರ್ಯ ಮಾಡಲು ಪ್ರೇರೇಪಿಸಿದೆಯಂತೆ. 2016 ರ ಆಗಸ್ಟ್ 19ರಿಂದ ಮೈಸೂರಿನ ಹಲವು ಹಳ್ಳಿಗಳಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವ ಉಸ್ಮಾ ಸರ್ಕಾರದ ಸೌಲಭ್ಯಗಳನ್ನು ತಿಳಿದುಕೊಂಡು ಜನರಿಗೆ ತಲುಪಿಸುತ್ತಿದ್ದಾರೆ.
ಪ್ಯಾರಲೀಗಲ್ ಕ್ಲಿನಿಕ್ ತೆರೆದು ಸಣ್ಣ ಪುಟ್ಟ ಸಮಸ್ಯೆಗಳಿಗೆ ಪರಿಹಾರ ನೀಡುತ್ತಿದ್ದಾರೆ. ಪ್ರತಿಯೊಬ್ಬರು ಶೌಚಾಲಯವನ್ನು ನಿರ್ಮಿಸಬೇಕೆಂದು ಕರೆ ನೀಡುತ್ತಿರುವ ಈ ಯುವತಿಗೆ ಆ ಭಾಗದ ಜನರು ತುಂಬಾ ವಿಶ್ವಾಸವನ್ನು ತೋರಿಸುತ್ತಿದ್ದಾರೆ.
ಒಟ್ಟಾರೆ ಇಂತಹ ಯುವತಿಯನ್ನು ನೋಡಿಯಾದರೂ ನಮ್ಮ ಯುವಪೀಳಿಗೆ ಕಲಿಯುವ ಅನಿವಾರ್ಯತೆಇದೆ
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications