ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಕ್ಕಿಜ್ವರ ತಡೆಗೆ ಮೈಸೂರು ಮೃಗಾಲಯದಲ್ಲಿ ರಾಸಾಯನಿಕ ಸಿಂಪಡಣೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮಾರ್ಚ್ 19: ಮೈಸೂರು ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಇಂದಿನಿಂದ ರಾಸಾಯನಿಕ ಔಷಧಿ ಸಿಂಪಡಿಸಲಾಗುತ್ತಿದೆ.

ಮೈಸೂರು ಜಿಲ್ಲೆಯಲ್ಲಿ ಹಕ್ಕಿಜ್ವರ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮೃಗಾಲಯದ ಅಧಿಕಾರಿಗಳು ಈ ಮುನ್ನೆಚ್ಚರಿಕಾ ಕ್ರಮವನ್ನು ತೆಗೆದುಕೊಂಡಿದ್ದು, ಪಕ್ಷಿಗಳ ಹಿಕ್ಕೆಯನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಸದ್ಯ ಮೃಗಾಲಯಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದ್ದು, ಒಳಗಿರುವ ಪ್ರಾಣಿ ಪಕ್ಷಿಗಳ ಸುರಕ್ಷತೆಗಾಗಿ ವೈರಾಣುಗಳನ್ನು ನಾಶ ಮಾಡುವ ರಾಸಾಯನಿಕಗಳನ್ನು ಸಿಂಪಡಿಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

Chemical Spraying At The Mysuru Zoo For The Prevention of Bird Flu

ಮೃಗಾಲಯದ ಮುಖ್ಯ ದ್ವಾರದಿಂದ ಆವರಣದ ರಸ್ತೆಗಳವರೆಗೆ, ಪಕ್ಷಿಗಳ ಗೂಡುಗಳ ಸುತ್ತ ಹಾಗೂ ಮೃಗಾಲಯದ ಆವರಣದ ಕೊಳಗಳ ಸುತ್ತ ವೈರಾಣು ನಾಶದ ರಾಸಾಯನಿಕ ದ್ರಾವಣದ ಔಷಧಿ ಸಿಂಪಡಿಸಲಾಗಿದ್ದು, ಹಕ್ಕಿಜ್ವರ ಮೃಗಾಲಯದ ಯಾವುದೇ ಪ್ರಾಣಿ, ಪಕ್ಷಿಗಳಿಗೆ ಬರದಂತೆ ಎಲ್ಲ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

English summary
Chemical medicine is being sprayed at the Sri Chamarajendra Zoo in Mysuru today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X