"ಕನ್ನಡಕ್ಕಾಗಿ ತುಂಗಭದ್ರಾ ನದಿಗೆ ಹಾರಿದ್ದರು ಚಿದಾನಂದ ಮೂರ್ತಿ"
ಮೈಸೂರು, ಜನವರಿ 14: "ಕನ್ನಡಕ್ಕಾಗಿ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದ ಡಾ.ಎಂ.ಚಿದಾನಂದ ಮೂರ್ತಿ ಅವರು ಕನ್ನಡಕ್ಕಾಗಿ ನದಿಗೆ ಹಾರಿದ್ದರು" ಎಂದು ಮೈಸೂರು ವಿಶ್ವವಿದ್ಯಾಲಯದ ಪ್ರಸಾರಾಂಗ ನಿರ್ದೇಶಕ ಡಾ.ಎಂ.ಜಿ.ಮಂಜುನಾಥ್ ಹೇಳಿದ್ದಾರೆ.
ಜ್ಞಾನಬುತ್ತಿ ವತಿಯಿಂದ ಲಕ್ಷ್ಮೀಪುರಂ ಸರಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ನಿನ್ನೆ ಆಯೋಜಿಸಿದ್ದ "ಡಾ.ಎಂ.ಚಿದಾನಂದ ಮೂರ್ತಿ ಅವರ ನುಡಿ ನಮನ" ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
"ಕನ್ನಡ, ಕನ್ನಡಿಗ ಮತ್ತು ಕರ್ನಾಟಕಕ್ಕಾಗಿ ಜೀವನದುದ್ದಕ್ಕೂ ಹೋರಾಟ ನಡೆಸಿದ ಚಿಮೂ ಕಾವೇರಿ ನೀರು ಮತ್ತು ಬೆಂಗಳೂರಿನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ವಿಚಾರದಲ್ಲಿ ಸದಾ ಹೋರಾಟಕ್ಕೆ ಸಿದ್ಧರಿರುತ್ತಿದ್ದರು. ಕನ್ನಡಿಗರಿಗೆ ಹಾಗೂ ಕನ್ನಡಕ್ಕೆ ಅನ್ಯಾಯವಾದರೆ ಅವರು ಸಹಿಸುತ್ತಿರಲಿಲ್ಲ. ಕನ್ನಡದ ಉಳಿವಿಗಾಗಿ ಬೆಂಗಳೂರಿನಿಂದ ಹಂಪಿಯವರೆಗೆ ಪಾದಯಾತ್ರೆ ನಡೆಸಿದ ಸಂದರ್ಭ ಕನ್ನಡ ಉಳಿಯಬೇಕೆಂದು ತುಂಗಾ-ಭದ್ರ ನದಿಗೆ ಹಾರಿದ್ದರು. ಅದೃಷ್ಟದಿಂದ ಅವರು ಬದುಕುಳಿದರು. ಈ ಮೂಲಕ ಅವರು ಕನ್ನಡಕ್ಕಾಗಿ ಆತ್ಮ ಅರ್ಪಿಸಿಕೊಂಡಿದ್ದರು" ಎಂದು ಚಿಮೂ ಹೋರಾಟದ ಹಾದಿಯನ್ನು ಸ್ಮರಿಸಿದರು.

"ಚಿಮೂ ಅವರು ಯಾವುದೇ ಹುದ್ದೆ, ಅಧಿಕಾರಕ್ಕೆ ಆಸೆಪಟ್ಟವರಲ್ಲ. ಅವರು ಮನಸ್ಸು ಮಾಡಿದ್ದರೆ, ಹಂಪಿ ಕನ್ನಡ ವಿಶ್ವವಿದ್ಯಾಲಯ ಸ್ಥಾಪನೆಗೆ ಕಾರಣರಾದ ಚಿಮೂ ಪ್ರಥಮ ಕುಲಪತಿಯಾಗಬಹುದಿತ್ತು. ಮನೆ ಬಾಗಿಲಿಗೆ ಎಂಎಲ್ ಸಿ ಅವಕಾಶ ಬಂದಾಗ ನಯವಾಗಿ ತಿರಸ್ಕರಿಸಿದರು. ಅಧಿಕಾರದ ಹಿಂದೆ ಬೀಳದೆ ಕನ್ನಡದ ಏಳಿಗೆಗಾಗಿ ನಿಷ್ಠೆಯಿಂದ ದುಡಿದರು" ಎಂದರು.
"ಚಿಮೂ ಕನ್ನಡಕ್ಕಾಗಿ ಹೋರಾಟ ನಡೆಸುವ ಸಂದರ್ಭ, ನಮಗೆಲ್ಲ ಮಹಾರಾಷ್ಟ್ರದ ಬಾಳೆ ಠಾಕ್ರೆ ಆದರ್ಶವಾಗಬೇಕೆಂದು ಹೇಳುತ್ತಿದ್ದರು. ಠಾಕ್ರೆ ಮಹಾರಾಷ್ಟ್ರದ ಜನತೆಗಾಗಿ ದುಡಿಯುತ್ತಿರುವ ಮಾದರಿಯಲ್ಲೇ ನಾವೆಲ್ಲ ಕನ್ನಡಕ್ಕಾಗಿ ದುಡಿಯಬೇಕೆಂದು ಹೇಳುತ್ತಿದ್ದರು" ಎಂದು ನೆನಪಿಸಿಕೊಂಡರು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications