Get Updates
Get notified of breaking news, exclusive insights, and must-see stories!

ಮೈಸೂರಿನಲ್ಲಿ ಇನ್ನು ಜೀವಂತವಿದೆ ಬಾಲ್ಯ ವಿವಾಹ: ಪ್ರಕರಣ ದಾಖಲು

ಮೈಸೂರು, ಏಪ್ರಿಲ್ 22: ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದ ಹೊರವಲಯದ ದೇವಾಲಯವೊಂದರಲ್ಲಿ ಬಾಲ್ಯವಿವಾಹ ನಡೆದಿರುವ ಕುರಿತು ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕವಿತಾ ಅವರು ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಬಾಲ್ಯ ವಿವಾಹಕ್ಕೊಳಗಾಗಿದ್ದ ಬಾಲಕಿಯನ್ನು ರಕ್ಷಿಸಿ ಪಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಮಲ್ಲೇಶ ನಾಯಕ ಎಂಬುವವರ ಪುತ್ರ ರವಿಕುಮಾರ್ (24) ಎಂಬಾತನಿಗೆ 17 ವರ್ಷ ವಯಸ್ಸಿನ ಯುವತಿಯ ಜೊತೆ ಏ.19 ರಂದು ಹಲ್ಲರೆ ಗ್ರಾಮದ ಎತ್ತಮ್ಮನ ದೇವಸ್ಥಾನದಲ್ಲಿ ಅರ್ಚಕರ ಸಮ್ಮುಖದಲ್ಲಿ ಬಾಲ್ಯವಿವಾಹ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ .

 Child Marriage Alive In Mysuru

ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕವಿತಾ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಾಲ್ಯವಿವಾಹಕ್ಕೊಳಗಾಗಿದ್ದ ಯುವತಿಯನ್ನು ರಕ್ಷಿಸಿ ರವಿಕುಮಾರ್ ಹಾಗೂ ದೇವಸ್ಥಾನದ ಅರ್ಚಕ ಸೇರಿ ಇತರರ ಪತ್ತೆಗೆ ಮುಂದಾಗಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+