ಸಿಎಂ ತವರು ವರುಣಾದಲ್ಲಿ 'ಮನೆಮನೆಗೆ ಕಾಂಗ್ರೆಸ್'ನಲ್ಲಿ ಮಕ್ಕಳದ್ದೇ ಆಟ
ಮೈಸೂರು, ಅಕ್ಟೋಬರ್ 30: ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿರುವ ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಕಾಟಾಚಾರಕ್ಕೆ ಎಂಬಂತೆ ನಡೆಯುತ್ತಿದೆ. ಕೆಲವೆಡೆ ಕೈಪಿಡಿ ಹಂಚಲು ಮಕ್ಕಳನ್ನು ಬಳಸಿಕೊಳ್ಳುತ್ತಿರುವುದು ಕಂಡು ಬಂದಿದೆ.
ಚುನಾವಣೆ ಹತ್ತಿರವಾಗುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರು ಸಿಎಂ ತವರಲ್ಲಿ ಕಾಂಗ್ರೆಸ್ ಬಾವುಟವನ್ನು ಹಾರಿಸಲೇ ಬೇಕೆಂಬ ಹಠಕ್ಕೆ ಬಿದ್ದಿದ್ದು, ಇದೀಗ ಗ್ರಾಪಂ ಸದಸ್ಯರಿಂದ ಹಿಡಿದು ಶಾಸಕರ ತನಕ ಹಳ್ಳಿಗೆ ತೆರಳಿ ಸರ್ಕಾರದ ಸಾಧನೆಗಳ ಕೈಪಿಡಿಯನ್ನು ಮನೆಮನೆಗೆ ತಲುಪಿಸುತ್ತಿದ್ದಾರೆ.

ಕೆಲವು ಹಳ್ಳಿಗಳ ಮನೆಮನೆಗೆ ತೆರಳುತ್ತಿರುವ ಕೆಲವರು ನಾಯಕರು ಒಂದಷ್ಟು ಕೈಪಿಡಿಯನ್ನು ವಿತರಿಸಿ ಬರುತ್ತಿದ್ದಾರೆ. ಹೆಚ್ಚಿನ ಕೈಪಿಡಿಗಳು ಮಕ್ಕಳ ಕೈಸೇರುತ್ತಿದ್ದು, ಅವರು ಅದನ್ನು ಹಿಡಿದು ಫೋಟೋಗಳಿಗೆ ಫೋಸ್ ನೀಡುತ್ತಿರುವುದು ಅಚ್ಚರಿ ಮೂಡಿಸುತ್ತಿದೆ.
ಮುಖ್ಯಮಂತ್ರಿಗಳ ಕ್ಷೇತ್ರ ವರುಣಾದಲ್ಲಿ ಕಾಂಗ್ರೆಸ್ನ ವತಿಯಿಂದ ಮನೆಮನೆಗೆ ಭೇಟಿ ಕಾರ್ಯಕ್ರಮ ಬಿರುಸಿನಿಂದ ಸಾಗುತ್ತಿದ್ದು, ಸರ್ಕಾರದ ಸಾಧನೆಗಳ ಕೈಪಿಡಿ ಮನೆಮನೆಗೆ ತಲುಪುತ್ತಿದೆ.
ನಂಜನಗೂಡು ತಾಲೂಕು ವರುಣಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮದಲ್ಲಿ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಎಪಿಎಂಸಿ ಸದಸ್ಯೆ ಲಕ್ಷ್ಮಮ್ಮರವರು ಚಾಲನೆ ನೀಡಿದ್ದು, ಸರ್ಕಾರದ ಸಾಧನೆಯ ಕೈಪಿಡಿಯನ್ನು ಜನರಿಗೆ ಹಂಚುವ ಮೂಲಕ ಕಾಂಗ್ರೆಸ್ನ್ನು ಬೆಂಬಲಿಸುವಂತೆ ಮನವಿ ಮಾಡಿಕೊಂಡರು.
ಆದರೆ ಈ ಕಾರ್ಯಕ್ರಮದಲ್ಲಿ ವಯಸ್ಕರಿಗಿಂತ ಮಕ್ಕಳೇ ಇದ್ದದ್ದು ಅಚ್ಚರಿ ಮೂಡಿಸಿದೆ. ಮಕ್ಕಳೆಲ್ಲ ಕೈಪಿಡಿಯನ್ನು ಹಿಡಿದುಕೊಂಡು ಕೇಕೆ ಹಾಕುತ್ತಿದ್ದದ್ದು ಕಂಡು ಬಂದಿದೆ. ಇಷ್ಟಕ್ಕೂ ಮಕ್ಕಳಿಗೆ ಕೈಪಿಡಿಕೊಟ್ಟು ಫೋಟೋ ತೆಗೆಸಿಕೊಳ್ಳುವ ದರ್ದು ಮುಖಂಡರಿಗೇಕೆ ಬಂತು? ಎಂಬುದೇ ಅಚ್ಚರಿಯ ಪ್ರಶ್ನೆಯಾಗಿದೆ.
ಇನ್ನು ಮುಂದೆಯಾದರೂ ರಾಜಕಾರಣಿಗಳು ಪಕ್ಷದ ಚಟುವಟಿಕೆಗೆ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಲ್ಲಿಸಲಿ.
-
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications