ಬಿಜೆಪಿ ಸ್ವಾರ್ಥ ರಾಜಕೀಯಕ್ಕೆ ಬಡವರ ಮಕ್ಕಳು ಬಲಿ: ಎಚ್‌ಡಿಕೆ

ಮೈಸೂರು, ಜುಲೈ. 28: ಹಿಂದುತ್ವದ ಹೆಸರಿನಲ್ಲಿ ರಾಜಕೀಯ ಶಕ್ತಿ ವೃದ್ಧಿ ಮಾಡಿಕೊಳ್ಳುವ ಹೋರಾಟದಲ್ಲಿ ರಾಜಕಾರಣಿಗಳ ಮಕ್ಕಳು ಬಲಿಯಾಗುತ್ತಿಲ್ಲ. ಬದಲಿಗೆ ಅಮಾಯಕರ, ಬಡವರ ಮಕ್ಕಳು ಅಮಾನುಷವಾಗಿ ಬಲಿಯಾಗುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಕೆ.ಆರ್.ನಗರದಲ್ಲಿ ಡಾ.ಅಂಬೇಡ್ಕರ್ ಭವನಕ್ಕೆ ಶಂಕುಸ್ಥಾಪನೆ ನೆರೆವೇರಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಆಡಳಿತಲ್ಲಿ ಕಾರ್ಪೋರೇಟ್ ಕಂಪನಿಗಳು ಲಕ್ಷಾಂತರ ಕೋಟಿ ಕುಳಗಳಾಗುತ್ತಿವೆ. ಒಬ್ಬ ಕಾರ್ಪೋರೇಟ್ ವ್ಯಕ್ತಿಯ ಒಂದು ದಿನದ ಆದಾಯ 1 ಸಾವಿರದ 348 ಕೋಟಿ ರೂಪಾಯಿಗಳಾಗಿದೆ ಎಂದು ಉದ್ಯಮಿ ಗೌತಮ್‌ ಅದಾಯನಿಯ ಹೆಸರೇಳದೇ ಉಲ್ಲೇಖಿಸಿದ ಅವರು ಬಿಜೆಪಿ ಸರ್ಕಾರ ಧನಿಕರ ಪರ ನೀತಿಯನ್ನು ಹೊಂದಿದೆ. ಆದರೆ ದೇಶದಲ್ಲಿ ಕೋಟ್ಯಂತರ ಜನರು ಸ್ವಾತಂತ್ರ್ಯ ಬಂದು 75 ವರ್ಷವಾದ ಹೊತ್ತಿನಲ್ಲೂ ತುತ್ತು ಅನ್ನಕ್ಕೂ ಸಂಕಷ್ಟಪಡುತ್ತಿದ್ದಾರೆ ಎಂದು ಮರುಗಿದರು.

ಹಿಂದುತ್ವದ ಹೆಸರಿನಲ್ಲಿ ರಾಜಕೀಯ ಶಕ್ತಿ ವೃದ್ಧಿ ಮಾಡಿಕೊಳ್ಳಲು ಬಗೆಬಗೆಯ ಹೋರಾಟಗಳನ್ನು ರೂಪಿಸುತ್ತಾರೆ. ಒಬ್ಬರ ಮೇಲೆ ಇನ್ನೊಬ್ಬರನ್ನು ಎತ್ತಿ ಕಟ್ಟುತ್ತಾರೆ. ಜಾತಿ, ಧರ್ಮಗಳ ನಡುವೆ ಸಂಘರ್ಷ ತರುತ್ತಾರೆ. ಆದರೆ ಈ ಹೋರಾಟದಲ್ಲಿ ರಾಜಕಾರಣಿಗಳ ಮಕ್ಕಳು, ಉಳ್ಳವರ ಮಕ್ಕಳು ಬಲಿಯಾಗುತ್ತಿಲ್ಲ. ಬದಲಿಗೆ ಅಮಾಯಕರ ಮಕ್ಕಳು ಬಲಿಯಾಗುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಬೆಳ್ಳಾರೆಯಲ್ಲಿ ಪ್ರವೀಣ್ ಎಂಬ ಯುವಕನ ಹತ್ಯೆಯಾಗಿದ್ದು, ಆತನ ಅಗಲಿಕೆಯಿಂದ ಅವರ ಇಡೀ ಕುಟುಂಬ ಈಗ ಬೀದಿಗೆ ಬಂದಿದೆ ಎಂದು ಕುಮಾರಸ್ವಾಮಿ ನೋವಿನಿಂದ ನುಡಿದರು.

ಹಣ ಕೊಡದಿದ್ದರೆ ಯಾವ ಕೆಲಸವೂ ಆಗುತ್ತಿಲ್ಲ

ಹಣ ಕೊಡದಿದ್ದರೆ ಯಾವ ಕೆಲಸವೂ ಆಗುತ್ತಿಲ್ಲ

ಈ ಸರ್ಕಾರದಲ್ಲಿ ಹಣ ಕೊಡದಿದ್ದರೆ ಯಾವ ಕೆಲಸವೂ ಆಗುತ್ತಿಲ್ಲ. ತೋಟಗಾರಿಕೆ ಇಲಾಖೆಯಲ್ಲಿ ಸಬ್ಸಿಡಿ ಪಡೆಯಲು 8.5 ಪರ್ಸೆಂಟ್ ಕಮಿಷನ್ ಕೊಡಬೇಕು. ತೋಟಗಾರಿಕೆ ಇಲಾಖೆಯ ಸಬ್ಸಿಡಿಗೆ ಸರ್ಕಾರ 500 ಕೋಟಿ ರೂ. ಮೀಸಲಿಟ್ಟಿದ್ದು, ಕಮಿಷನ್ ಹಣವೇ 45 ಕೋಟಿ ರೂ. ಆಗಲಿದೆ. ಹೀಗೆ ಲೂಟಿ ಮಾಡುವ ಎರಡು ರಾಷ್ಟ್ರೀಯ ಪಕ್ಷಗಳು ಚುನಾವಣೆಯಲ್ಲಿ ಒಂದು ಮತಕ್ಕೆ 2 ಸಾವಿರ ರೂ. ಕೊಟ್ಟು ಮತ ಖರೀದಿ ಮಾಡುತ್ತವೆ ಎಂದು ಆರೋಪಿಸಿದರು.

ಜನರು ಎಚ್ಚೆತ್ತುಕೊಳ್ಳಬೇಕು

ಜನರು ಎಚ್ಚೆತ್ತುಕೊಳ್ಳಬೇಕು

ಇಂಥ ಅನೈತಿಕ ಮಾರ್ಗದಲ್ಲಿ ಅಧಿಕಾರಕ್ಕೆ ಬಂದು ಮತ್ತೆ ಲೂಟಿಗಿಳಿಯುತ್ತಾರೆ. ಈ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕು. ಇಲ್ಲವೆಂದರೆ ಇನ್ನು ನೂರು ವರ್ಷವಾದರೂ ಕೆಳ ವರ್ಗದವರು ಆರ್ಥಿಕವಾಗಿ, ರಾಜಕೀಯವಾಗಿ ಸಬಲರಾಗಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು.

ಹಿಂದುಳಿದ ವರ್ಗದವರು ಸಬಲರಾಗುತ್ತಿಲ್ಲ

ಹಿಂದುಳಿದ ವರ್ಗದವರು ಸಬಲರಾಗುತ್ತಿಲ್ಲ

ಅರ್ಹರಿಗೆ ಮೀಸಲಾತಿ ದೊರೆಯುತ್ತಿಲ್ಲ. ಇದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರು ಆರ್ಥಿಕ ಹಾಗೂ ರಾಜಕೀಯವಾಗಿ ಬಲ ಹೊಂದಲು ಸಾಧ್ಯವಾಗುತ್ತಿಲ್ಲ. ಬಿಜೆಪಿ ಸರ್ಕಾರ ಪ್ರತಿ ವಿಚಾರದಲ್ಲಿ ಹಣ ಲೂಟಿ ಮಾಡುವುದನ್ನೇ ನೋಡುತ್ತಿದೆಯೇ ಹೊರತು, ಜನ ಪರ ಕಾಳಜಿ ನೋಡುತ್ತಿಲ್ಲ ಎಂದು ಇದೇ ವೇಳೆ ಕುಮಾರಸ್ವಾಮಿ ಅವರು ಆರೋಪಿಸಿದರು.

ಮಾಜಿ ಸಚಿವ ಸಾ.ರಾ.ಮಹೇಶ್ ಉಪಸ್ಥಿತಿ

ಮಾಜಿ ಸಚಿವ ಸಾ.ರಾ.ಮಹೇಶ್ ಉಪಸ್ಥಿತಿ

ಕೆ.ಆರ್.ನಗರ ಪಟ್ಟಣದ ಹಾಸನ- ಮೈಸೂರು ಮುಖ್ಯರಸ್ತೆಯ ತೋಪಮ್ಮ ದೇವಸ್ಥಾನದ ಬಳಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನಕ್ಕೆ ಇದೇ ವೇಳೆ ಮಾಜಿ ಮುಖ್ಯಮಂತ್ರಿಗಳು ಅಡಿಗಲ್ಲು ಹಾಕಿದರು. ಮಾಜಿ ಸಚಿವ ಸಾ.ರಾ.ಮಹೇಶ್ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜೇಗೌಡ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+