ಭೂ ಹಗರಣ ಸಂಬಂಧ ಸಿಐಡಿಯಿಂದ ಮುತ್ತಪ್ಪ ರೈ ವಿಚಾರಣೆ
ಬೆಂಗಳೂರು, ನವೆಂಬರ್ 15:ಮೈಸೂರಿನ ದಿವಂಗತ ಎಡ್ವಿನ್ ವಾನ್ ಇಂಗೆನ್ ಅವರಿಗೆ ಸೇರಿದ 500 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಮಂಗಳವಾರ ಹಲವಾರು ಸಾಕ್ಷಿಗಳ ವಿಚಾರಣೆ ನಡೆಸಿದೆ.
ವಿಚಾರಣೆ ನಡೆಸಿದ ಸಾಕ್ಷಿಗಳಲ್ಲಿ ಮಾಜಿ ಭೂಗತ ದೊರೆ ಮುತ್ತಪ್ಪ ರೈ ಕೂಡಾ ಸೇರಿದ್ದಾರೆ.

ಇಂಗೆನ್ ಆಸ್ತಿಯ ಒಂದು ಭಾಗವನ್ನು ಪ್ರಸಿದ್ಧ ರಿಯಲ್ ಎಸ್ಟೇಟ್ ಸಂಸ್ಥೆಯೊಂದಕ್ಕೆ ಮಾರಾಟ ಮಾಡಿದ ಸಂಬಂಧ ಚೆಕ್ ನಲ್ಲಿ ಪಡೆಯಲಾದ ನ್ಯಾಯಸಮ್ಮತ ಕಮಿಷನ್ ಗೆ ಸಂಬಂಧಿಸಿದಂತೆ ಮುತ್ತಪ್ಪ ರೈ ಅವರನ್ನು ಪ್ರಶ್ನಿಸಲಾಗಿದೆ.
ಈ ಹಿಂದೆ ಮಾರ್ಚ್ 2, 2013ರಲ್ಲಿ ಇಂಗನ್ ಮೈಸೂರು ಟರ್ಫ್ ಕ್ಲಬ್ ನ ಕುದುರೆ ತರಬೇತುದಾರ ಮೈಖೆಲ್ ಫ್ಲಾಯ್ಡ್ ಈಶ್ವರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಅದಾದ ಮರುದಿನ ಇಂಗನ್ ತಮ್ಮ 101ನೇ ವಯಸ್ಸಿನಲ್ಲಿ ಸಾವನ್ನಪ್ಪಿದ್ದರು.
ತಾನು ಇಂಗನ್ ದತ್ತು ಪುತ್ರ ಮತ್ತು ಅವರ ಆಸ್ತಿಗೆ ವಾರಸುದಾರ ಎಂದು ಈಶ್ವರ್ ಹೇಳಿಕೊಂಡು ಅವರ ಆಸ್ತಿ ಮಾರಾಟ ಮಾಡಿದ್ದರು. ಈ ಸಂಬಂಧ ದಾಖಲಾಗಿದ್ದ ಎಫ್ಐಆರ್ ರನ್ನು ಹೈಕೋರ್ಟ್ ಆಗಸ್ಟ್ 1ರಂದು ರದ್ದುಗೊಳಿಸಿತ್ತು.
ಇದರ ವಿರುದ್ಧ ಇಂಗನ್ ಸೋದರ ಸೊಸೆ ಸುಪ್ರಿಂ ಕೋರ್ಟಗ ನಲ್ಲಿ ದಾವೆ ಹೂಡಿದ್ದರು. ಇದರ ವಿಚಾರಣೆ ನಡೆಸಿದ ಸುಪ್ರಿಂ ಕೋರ್ಟ್ ಕರ್ನಾಟಕ ಹೈಕೋರ್ಟ್ ತೀರ್ಮಾನವನ್ನು ರದ್ದುಗೊಳಿಸಿತ್ತು. ಮಾತ್ರವಲ್ಲ ಸಿಐಡಿಯಿಂದ ಈ ಪ್ರಕರಣದ ತನಿಖೆ ನಡೆಸುವಂತೆ ಸೂಚಿಸಿತ್ತು. ಮತ್ತು 60 ದಿನಗಳಲ್ಲಿ ವರದಿ ಸಲ್ಲಿಸುವಂತೆಯೂ ಸೂಚಿಸಿತ್ತು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications