ಭಾಷೆಯ ಬಳಕೆ ಉತ್ತೇಜಿಸಲು ಸಿಐಐಎಲ್ ಜೊತೆ ಕೂ ಆ್ಯಪ್ ಒಪ್ಪಂದ
ಮೈಸೂರು, ಡಿ.6: ಸಾಮಾಜಿಕ ಜಾಲತಾಣಗಳ ದುರುಪಯೋಗ ತಡೆಯಲು ಮತ್ತು ಭಾಷೆಯ ಸದ್ಭಳಕೆಯನ್ನು ಉತ್ತೇಜಿಸಲು ಮೈಸೂರಿನಲ್ಲಿರುವ ಕೇಂದ್ರೀಯ ಭಾರತೀಯ ಭಾಷೆಗಳ ಸಂಸ್ಥೆ (CIIL) ಭಾರತದ ಬಹುಭಾಷಾ ಮೈಕ್ರೋ ಬ್ಲಾಗಿಂಗ್ ವೇದಿಕೆ 'ಕೂ'ನ ಮಾತೃಸಂಸ್ಥೆ ಬಾಂಬಿನೇಟ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ಜೊತೆ ಒಪ್ಪಂದ (MoU) ಮಾಡಿಕೊಂಡಿದೆ.
ಭಾರತೀಯ ಭಾಷೆಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದ ಸ್ಥಾಪಿಸಿರುವ ಕೇಂದ್ರೀಯ ಭಾರತೀಯ ಭಾಷೆಗಳ ಸಂಸ್ಥೆಯು ಕೂ ಆ್ಯಪ್ನಲ್ಲಿ ಕಂಟೆಂಟ್ ನಿರ್ವಹಣೆಯ ನೀತಿ ನಿಯಮ ಮತ್ತು ಬಳಕೆದಾರರ ಸುರಕ್ಷತೆಯನ್ನು ಹೆಚ್ಚಿಸುವ ಕೆಲಸ ನಿರ್ವಹಿಸಲಿದೆ. ಬಳಕೆದಾರರಿಗೆ ಆನ್ಲೈನ್ ಬೆದರಿಕೆ, ನಿಂದನೆಗಳನ್ನು ತಡೆಯಲು ಮತ್ತು ಪಾರದರ್ಶಕತೆಯನ್ನು ಹೆಚ್ಚಿಸುವತ್ತ ಕೇಂದ್ರೀಯ ಭಾಷಾ ಭಾರತೀಯ ಸಂಸ್ಥೆ ಗಮನಹರಿಸಲಿದೆ.
ಈ ಸಹಭಾಗಿತ್ವದ ಮೂಲಕ ಸಂವಿಧಾನದದ 8ನೇ ಶೆಡ್ಯೂಲ್ನಲ್ಲಿ ನಮೂದಿಸಿರುವ 22 ಭಾಷೆಗಳಲ್ಲಿನ ಸೂಕ್ಷ್ಮ ಅಥವಾ ಆಕ್ಷೇಪಾರ್ಹ ಪದಗಳು, ಪದಗುಚ್ಛಗಳು ಮತ್ತು ಸಂಕ್ಷಿಪ್ತ ಪದಗಳನ್ನು ಕೇಂದ್ರೀಯ ಭಾರತೀಯ ಭಾಷೆಗಳ ಸಂಸ್ಥೆಯು ಪಟ್ಟಿ ಮಾಡಲಿದೆ. ಇದಕ್ಕಾಗಿ ಕೂ ಸಂಬಂಧಿತ ದತ್ತಾಂಶಗಳನ್ನು ಮತ್ತು ತಾಂತ್ರಿಕ ಸಹಕಾರವನ್ನು ಒದಗಿಸಲಿದೆ. ಈ ಒಪ್ಪಂದವು ಎರಡು ವರ್ಷಗಳವರೆಗೆ ಅಸ್ತಿತ್ವದಲ್ಲಿರಲಿದ್ದು ಸಾಮಾಜಿಕ ಮಾಧ್ಯಮದಲ್ಲಿ ಭಾರತೀಯ ಭಾಷೆಗಳ ಜವಾಬ್ದಾರಿಯುತ ಬಳಕೆಯನ್ನು ಅಭಿವೃದ್ಧಿಪಡಿಸಲಿದೆ. ಮತ್ತು ಕೂ ಬಳಕೆದಾರರಿಗೆ ಸುರಕ್ಷಿತ ವಾತಾವರಣವನ್ನು ಆನ್ಲೈನ್ ಜಗತ್ತಿನಲ್ಲಿ ಕಟ್ಟಿಕೊಡಲಿದೆ.

ಕೂ ಆ್ಯಪ್ ಮತ್ತು ಕೇಂದ್ರೀಯ ಭಾರತೀಯ ಭಾಷೆಗಳ ಸಂಸ್ಥೆಯ ಈ ಸಹಭಾಗಿತ್ವವು ಭಾರತೀಯ ಭಾಷೆಗಳಲ್ಲಿನ ಆಕ್ಷೇಪಾರ್ಹ, ಅಗೌರವಯುತ ಮತ್ತು ಅವಹೇಳನಕಾರಿ ಪದಗಳ, ಅಭಿವ್ಯಕ್ತಿಯ ಪಟ್ಟಿಯನ್ನು ರೂಪಿಸಲಿದೆ. ಜೊತೆಗೆ ಭಾರತೀಯ ಭಾಷೆಗಳಲ್ಲಿ ಬಳಕೆದಾರರು ಹಂಚುವ ವಿಷಯಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಲು ಅನುವು ಮಾಡಿಕೊಡಲಿದೆ. ಈವರೆಗೆ ಭಾರತೀಯ ಭಾಷೆಗಳಲ್ಲಿ ಇಂತಹ ಯಾವುದೇ ಪ್ರಯತ್ನಗಳೂ ನಡೆದಿಲ್ಲ ಎಂಬುದು ಉಲ್ಲೇಖಾರ್ಹ ವಿಷಯವಾಗಿದೆ.
ಸಂವಹನದ ಗುಣಮಟ್ಟ ಹೆಚ್ಚಳ
ಈ ಒಪ್ಪಂದವನ್ನು ಸ್ವಾಗತಿಸಿ ಹರ್ಷ ವ್ಯಕ್ತಪಡಿಸಿರುವ ಕೇಂದ್ರೀಯ ಭಾರತೀಯ ಭಾಷೆಗಳ ಸಂಸ್ಥೆಯ ನಿರ್ದೇಶಕ ಪ್ರೊ. ಶೈಲೇಂದ್ರ ಮೋಹನ್, ಕೂ ಆ್ಯಪ್ನಲ್ಲಿ ಸಂವಹನ ನಡೆಸಲು ದೊರೆತಿರುವ ಅವಕಾಶವು ಭಾರತೀಯ ಭಾಷೆಗಳ ಬಳಕೆದಾರರಿಗೆ ಸಂವಿಧಾನಬದ್ಧ ಸಮಾನತೆ ಮತ್ತು ಅಭಿವ್ಯಕ್ತಿಯ ಹಕ್ಕುಗಳನ್ನು ಒದಗಿಸಿಕೊಟ್ಟಿದೆ. ಸಾಮಾಜಿಕ ಜಾಲತಾಣಗಳಲ್ಲಿ, ಮುಖ್ಯವಾಗಿ 'ಕೂ'ನಲ್ಲಿ ನಡೆಯುವ ಸಂವಹನದ ಗುಣಮಟ್ಟವನ್ನು ಹೆಚ್ಚಿಸುವ ಪ್ರಯತ್ನವಾಗಿದೆ. ಜೊತೆಗೆ ಆಕ್ಷೇಪಾರ್ಹ ಭಾಷೆಯ ಬಳಕೆ ಮತ್ತು ನಿಂದನೆಯನ್ನು ತಡೆಯುವ ಪ್ರಯತ್ನವಾಗಿದೆ ಎಂದು ತಿಳಿಸಿದು.

ಸಾಮಾಜಿಕ ಜಾಲತಾಣಗಳನ್ನು ಸುರಕ್ಷಿತವಾಗಿ ಇರಿಸಬೇಕಿದೆ. ಈ ನಿಟ್ಟಿನಲ್ಲಿ 'ಕೂ' ನಡೆಸುತ್ತಿರುವ ಪ್ರಯತ್ನ ಗಮನಾರ್ಹ. ಹೀಗಾಗಿ ಕೇಂದ್ರೀಯ ಭಾರತೀಯ ಭಾಷೆಗಳ ಸಂಸ್ಥೆಯು ಸಾಮಾಜಿಕ ಜಾಲತಾಣವನ್ನು ಶುದ್ಧಗೊಳಿಸುವ ಕೂ ಪ್ರಯತ್ನಕ್ಕೆ ಕೈಜೋಡಿಸಿದೆ ಎಂದು ತಿಳಿಸಿದರು.
ಬಳಕೆದಾರರ ಸುರಕ್ಷತೆಗೆ ಒತ್ತು:
ಈ ಬೆಳವಣಿಗೆಯ ಕುರಿತು ಪ್ರತಿಕ್ರಿಯಿಸಿದ ಕೂ ಸಹ ಸಂಸ್ಥಾಪಕ ಮತ್ತು ಸಿಇಒ ಅಪ್ರಮೇಯ ರಾಧಾಕೃಷ್ಣ, ಭಾರತದ ಬಹುಭಾಷೆಗಳಲ್ಲಿ ಸಂವಹನ ನಡೆಸುವ ಮತ್ತು ಸಂಪರ್ಕಿಸುವ ನೆರವು ನೀಡುವ ಕೂ ಈ ಒಪ್ಪಂದದ ಮೂಲಕ ತನ್ನ ಬಳಕೆದಾರರ ಸುರಕ್ಷತೆಯನ್ನು ಹೆಚ್ಚಿಸಲಿದೆ. ಬಳಕೆದಾರರು ಭಾಷೆಗಳ ವೈಶಿಷ್ಟ್ಯದ ಜೊತೆಗೆ 'ಕೂ'ನಲ್ಲಿ ಸಂವಹನ ನಡೆಸಲು ನಾವು ಬಯಸುತ್ತೇವೆ. ಅಂತರ್ಜಾಲ ಜಗತ್ತನ್ನು ಇನ್ನಷ್ಟು ಸುರಕ್ಷಿತ, ನಂಬಿಕೆ ಮತ್ತು ವಿಶ್ವಾಸಾರ್ಹಗೊಳಿಸಲು ಕೇಂದ್ರೀಯ ಭಾರತೀಯ ಭಾಷೆಗಳ ಸಂಸ್ಥೆಯ ಜೊತೆ ಕೈಜೋಡಿಸಿರುವುದು ಅತ್ಯಂತ ಖುಷಿಯ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.
ಭಾರತೀಯ ಭಾಷೆಗಳಲ್ಲಿ ಸ್ವಯಂ ಅಭಿವ್ಯಕ್ತಿಗೆ ಅವಕಾಶ ಒದಗಿಸುವ ಕೂ ಸದ್ಯ 9 ಭಾಷೆಗಳಲ್ಲಿ ಸೇವೆ ಒದಗಿಸುತ್ತಿದೆ. ಅಲ್ಲದೇ 22 ಭಾಷೆಗಳಲ್ಲಿ ತನ್ನ ಸೇವೆಯನ್ನು ವಿಸ್ತರಿಸುವ ಯೋಜನೆಯನ್ನು ಹಾಕಿಕೊಂಡಿದೆ. CIIL ಜೊತೆಗಿನ ಈ ಸಹಯೋಗದ ಮೂಲಕ, ಕೂ ಅಪ್ಲಿಕೇಶನ್ ಸ್ಥಳೀಯ ಭಾಷೆಗಳಲ್ಲಿ ಬಳಸಲಾಗುವ ಪದಗಳ ತರ್ಕ, ವ್ಯಾಕರಣ ಮತ್ತು ಆಯಾ ಸಂದರ್ಭದ ಪದಬಳಕೆಯ ಸೂಕ್ಷ್ಮಗಳ ಕುರಿತು ತಿಳಿವಳಿಕೆಯನ್ನು ಪ್ರಚುರಪಡಿಸುತ್ತದೆ. ಹೆಚ್ಚಿನದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರತೀಯ ಭಾಷೆಗಳಲ್ಲಿ ಇಂಟರ್ನೆಟ್ ಬಳಕೆದಾರರಿಗೆ ಸುರಕ್ಷಿತ ವಾತಾವರಣವನ್ನು ನಿರ್ಮಿಸಲಿದೆ. ಹಾಗೂ ಮೈಕ್ರೋ ಬ್ಲಾಗಿಂಗ್ ವೇದಿಕೆಯಲ್ಲಿ ಸಮರ್ಪಕ ಕಂಟೆಂಟ್ ನಿರ್ವಹಣೆಯ ಮೂಲಕ ಜನರು ಉತ್ತಮ ಕಂಟೆಂಟ್ಗಳಲ್ಲಿ ಎಂಗೇಜ್ ಆಗುವಂತೆ ಮಾಡಲಿದೆ.
Recommended Video
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ












Click it and Unblock the Notifications