ಮೊಮೊ ಗೇಮ್: ಪೋಷಕರಿಗೆ ಎಚ್ಚರಿಕೆ ನೀಡಿದ ಸಾರ್ವಜನಿಕ ಶಿಕ್ಷಣ ಇಲಾಖೆ
ಮೈಸೂರು, ನವೆಂಬರ್. 22:ಮಕ್ಕಳ ಹಾಗೂ ಯುವ ಸಮೂಹದ ಜೀವದೊಂದಿಗೆ ಚೆಲ್ಲಾಟವಾಡುತ್ತಿದ್ದ ಬ್ಲೂ ವ್ಹೇಲ್ ಗೇಮ್ ನಂತರ ಶಾಲಾ ಮಕ್ಕಳನ್ನು ಸೆಳೆಯುತ್ತಿರುವ ಹಾಗೂ ಪ್ರಾಣಾಪಾಯಕ್ಕೆ ದೂಡುತ್ತಿರುವ ಇಂಟರ್ ನೆಟ್ ಗೇಮ್ ಮೊಮೊ ಬಗ್ಗೆ ಇದೀಗ ಪೋಷಕರಲ್ಲಿ ಆತಂಕ ಮನೆಮಾಡಿದೆ.
ಮೊಮೊ ಎಂಬ ಅಂತರ್ಜಾಲ ಆಟ ಆಡುವ ಮೂಲಕ ಹದಿಹರೆಯದ ಮಕ್ಕಳು ಪ್ರಾಣಾಪಾಯಕ್ಕೆ ಒಳಗಾಗುತ್ತಿದ್ದಾರೆ ಎಂಬ ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಇತ್ತೀಚೆಗೆ ಸುತ್ತೋಲೆ ಹೊರಡಿಸಿ ಅನಾರೋಗ್ಯಕರ ಅಂತರ್ಜಾಲ ಆಟದಲ್ಲಿ ವಿದ್ಯಾರ್ಥಿಗಳು ಸಿಲುಕಿ ಕೊಳ್ಳದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ.
ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮೊಮೊ ಆಟದ ವ್ಯಾಮೋಹಕ್ಕೆ ಒಳಗಾಗದಂತೆ ಶಾಲೆಯ ಮುಖ್ಯಸ್ಥರು, ಪಾಲಕರು, ಪೋಷಕರು ಎಚ್ಚರ ವಹಿಸಬೇಕು ಎಂದು ಇಲಾಖೆ ಖಡಕ್ ಆದೇಶ ನೀಡಿದೆ.

ಶಾಲೆಗಳಲ್ಲಿ ನಿತ್ಯ ಅರಿವು
ಮೊಮೊ ಸಹಿತವಾಗಿ ಅಂತರ್ಜಾಲದ ಅಪಾಯಕಾರಿ ಆಟ ಮತ್ತು ವೆಬ್ ಸೈಟ್ ಬಳಕೆ ಕುರಿತು ಶಾಲೆಗಳಲ್ಲಿ ಪ್ರತಿದಿನ ಮಕ್ಕಳಿಗೆ ತರಗತಿ ಆರಂಭಕ್ಕೂ ಮೊದಲು 10ರಿಂದ 15 ನಿಮಿಷ ಮುಖ್ಯ ಶಿಕ್ಷಕರು ಸಹಿತವಾಗಿ ಸಹ ಶಿಕ್ಷಕರು ಅರಿವು ಮೂಡಿಸಬೇಕು. ಇಂಟರ್ ನೆಟ್ ಬ್ರೌಸಿಂಗ್ ಕೇಂದ್ರಗಳಲ್ಲಿ ಮೊಮೊ ಗೇಮ್ ಆಡಲು ಮಕ್ಕಳಿಗೆ ಅವಕಾಶ ನೀಡಬಾರದು ಎಂದು ಸೂಚಿಸಲಾಗಿದೆ.
ಈ ಸಂಬಂಧ ಯಾವುದೇ ಪ್ರಕರಣ ಅಥವಾ ಪಾಲಕ, ಪೋಷಕರಿಂದ ದೂರು ಬಂದರೆ ಗಂಭೀರವಾಗಿ ಪರಿಗಣಿಸಬೇಕು. ಶಾಲೆಗಳಲ್ಲಿ ಮಕ್ಕಳ ವರ್ತನೆಯ ಬಗ್ಗೆಯೂ ವಿಶೇಷ ನಿಗಾ ವಹಿಸಬೇಕು ಎಂದು ನಿರ್ದೇಶಿಸಲಾಗಿದೆ. ಅಲ್ಲದೇ ಮಕ್ಕಳಲ್ಲಿ ಅರಿವು ಮೂಡಿಸಲು ಶಾಲಾ ಶಿಕ್ಷಕರಿಗೆ ಮತ್ತು ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಆದೇಶ ನೀಡಿದೆ.
ಈ ಅಪಾಯಕಾರಿ ಕ್ರೀಡೆಗೆ ಒಳಗಾಗದಂತೆ ತಡೆಯುವ ನಿಟ್ಟಿನಲ್ಲಿ ಸಮಾಜದ ವಿವಿಧ ಸ್ತರಗಳಲ್ಲಿ ಅರಿವು ಮೂಡಿಸಬೇಕು. ಮಕ್ಕಳಿಗೆ ಈ ಸೈಟ್ ಉಪಯೋಗಿಸಲು ಅವಕಾಶ ನೀಡ ಕೂಡದು ಎಂದು ಸಂಬಂಧ ಪಟ್ಟ ಪೊಲೀಸ್ ಠಾಣೆಯ ಮೂಲಕ ಇಂಟರ್ ನೆಟ್ ಬ್ರೌಸಿಂಗ್ ಕೇಂದ್ರಕ್ಕೆ ಆದೇಶ ನೀಡುವ ಜವಾಬ್ದಾರಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ವಹಿಸಲಾಗಿದೆ.
ಮೋಮೊ ಗೇಮ್ ಮಕ್ಕಳಿಗೆ ಸಿಗದಂತೆ ಮಾಡಲು ಜಿಲ್ಲಾಡಳಿತದ ಸಹಕಾರ ಪಡೆದು ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಇಲಾಖೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ತುರ್ತು ಅಗತ್ಯ ಕ್ರಮ ವಹಿಸಬೇಕು. ಮಕ್ಕಳು ಮೊಮೊ ಗೇಮ್ ಗೆ ಅಂಟಿಕೊಳ್ಳದಂತೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ಇಲಾಖೆ ನಿರ್ದೇಶಿಸಿದೆ.
-
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications