ಬಲವಂತವಾಗಿ ಗಣಪತಿ ಚಂದಾ ವಸೂಲಿ ಮಾಡಿದರೆ 3 ವರುಷ ಜೈಲು
ಮೈಸೂರು, ಸೆಪ್ಟೆಂಬರ್ 10: ಗೌರಿ, ಗಣೇಶ ಹಬ್ಬದ ವೇಳೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವವರು ಆಯಾ ಬಡಾವಣೆ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಅನುಮತಿ ಪಡೆಯುವುದು ಕಡ್ಡಾಯ ಎಂದು ನಗರ ಪೊಲೀಸ್ ಆಯುಕ್ತ ಡಾ.ಎ.ಸುಬಮಣ್ಯೇಶ್ವರರಾವ್ ತಿಳಿಸಿದ್ದಾರೆ.
ಗಣಪತಿ ಪ್ರತಿಷ್ಠಾಪನೆ ಮಾಡುವವರು ಪೇಪರ್ ಮೌಲ್ಡ್, ಪ್ಲಾಸ್ಟರ್ ಆಫ್ ಪ್ಯಾರೀಸ್ ನಿಂದ ತಯಾರಿಸಿದ ಗಣಪತಿಯನ್ನು ಕೂರಿಸಬಾರದು . ನಗರಪಾಲಿಕೆ ಸೂಚನೆ ಮೇರೆಗೆ ಸೀಸ ಮುಕ್ತ ಬಣ್ಣವಿರುವ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು. ಬಲವಂತವಾಗಿ ಚಂದಾ ವಸೂಲಿ ಮಾಡುವುದನ್ನು ನಿಷೇಧಿಸಲಾಗಿದೆ.
ಬಲವಂತವಾಗಿ ಚಂದಾ ವಸೂಲಿ ಮಾಡಿದರೆ ಮೂರು ವರ್ಷಗಳ ಸಜೆ, ದಂಡ ವಿಧಿಸಬಹುದಾಗಿರುತ್ತದೆ. ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವವರು ಪ್ರತಿಷ್ಠಾಪನೆ ಸ್ಥಳ, ವಿಸರ್ಜಿಸುವ ಸ್ಥಳ, ಮತ್ತು ಮೆರವಣಿಗೆ ಮಾರ್ಗ ಹಾಗೂ ಇತರೆ ವಿಷಯಗಳ ಬಗ್ಗೆ ಪೂರ್ಣ ಮಾಹಿತಿಯೊಂದಿಗೆ ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಅರ್ಜಿ ನೀಡಿ, ಪೂರ್ವಾನುಮತಿ ಪಡೆಯಬೇಕು.

ಸಾರ್ವಜನಿಕರು ಹಾಗೂ ವಾಹನ ಸಂಚಾರಕ್ಕೆ ಅಡಚಣೆಯಾಗದಂತೆ ಪ್ರತಿಷ್ಠಾಪನೆ ಸ್ಥಳವನ್ನು ಆಯ್ಕೆ ಮಾಡಬೇಕು. ರಸ್ತೆಯಲ್ಲಿ ಶಾಮಿಯಾನ ಹಾಕಬಾರದು. ಸಾರ್ವಜನಿಕ ಸ್ಥಳವಾಗಿದ್ದಲ್ಲಿ ನಗರಪಾಲಿಕೆಯಿಂದ ಪಡೆದಿರುವ ಅನುಮತಿ ಪತ್ರವನ್ನು ಲಗತ್ತಿಸಬೇಕು.
ವಿದ್ಯುತ್ ಅಳವಡಿಸುವ ಬಗ್ಗೆ ಸೆಸ್ಕ್ ನಿಂದ ಅನುಮತಿ ಪಡೆದಿರಬೇಕು. ಧ್ವನಿವರ್ಧಕ ಅಳವಡಿಸುವವರು ಬೆಳಗ್ಗೆ 6ರಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಡಿಮೆ ಧ್ವನಿಯಲ್ಲಿ ಉಪಯೋಗಿಸಬೇಕು ಎಂದು ತಿಳಿಸಿದ್ದಾರೆ.
ಮನರಂಜನಾ ಕಾರ್ಯಕ್ರಮಗಳನ್ನು ರಾತ್ರಿ 10 ಗಂಟೆ ಒಳಗೆ ಮುಗಿಸಬೇಕು. ಯಾವುದೇ ಲಾಟರಿ, ಪ್ರವೇಶ ಶುಲ್ಕ ಅಥವಾ ಇನ್ನಿತರೆ ಬಹುಮಾನದ ಯೋಜನೆಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ.
ವ್ಯವಸ್ಥಾಪಕರು ಗಣಪತಿ ಪ್ರತಿಷ್ಠಾಪನೆ ಸ್ಥಳದಲ್ಲಿ ರಕ್ಷಣೆಗಾಗಿ ತಮ್ಮ ಸಂಘದ ಜನರನ್ನು ನೇಮಿಸಿ ಸೂಕ್ತ ಉಸ್ತುವಾರಿಯನ್ನು ನೋಡಿ ಕೊಳ್ಳುವುದಲ್ಲದೇ ವಿಸರ್ಜನಾ ಸ್ಥಳದಲ್ಲಿ ಮುಂಜಾಗ್ರತಾ ಕ್ರಮವಾಗಿ ನುರಿತ ಈಜುಗಾರರು ಇರುವಂತೆ ವ್ಯವಸ್ಥೆ ಮಾಡಿ ಅಹಿತಕರ ಘಟನೆಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು.
ಜೊತೆಗೆ ಹತ್ತಿರದ ಪೊಲೀಸ್ ಠಾಣೆ ಯೊಂದಿಗೆ ಸಂಪರ್ಕವನ್ನು ಇಟ್ಟುಕೊಳ್ಳಬೇಕು. ಗಣಪತಿ ವಿಸರ್ಜನೆಯನ್ನು ಬಾವಿ, ಕೆರೆ, ನದಿಯಲ್ಲಿ ಮಾಡದೆ ಬಕೆಟ್ ನಲ್ಲಿ ವಿಸರ್ಜಿಸಬೇಕು ಅಥವಾ ಮೈಸೂರು ಮಹಾನಗರ ಪಾಲಿಕೆಯವರು ಗಣಪತಿ ವಿಸರ್ಜನೆಗಾಗಿ ನಿಗದಿಪಡಿಸಿರುವ ಸ್ಥಳಗಳ ಬಗ್ಗೆ ಪತಿಕಾ ಪ್ರಕಟಣೆಯಲ್ಲಿ ಪ್ರಕಟಿಸುವ ಮಾಹಿತಿ ಮುಂಚಿತವಾಗಿ ಪಡೆದುಕೊಂಡು ಗಣಪತಿ ವಿಸರ್ಜಿಸಿ, ಪರಿಸರ ಮಾಲಿನ್ಯ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications