ಚಾಮುಂಡಿ ಬೆಟ್ಟಕ್ಕೆ ನೀಡುತ್ತಿದ್ದ ವಾಹನ ಪಾಸ್ ರದ್ದು, ಕಾರಣ?
ಮೈಸೂರು, ಜುಲೈ 11: ದುರುಪಯೋಗಗೊಳ್ಳುತ್ತಿದೆ ಎಂಬ ಕಾರಣದಿಂದ ಆಷಾಡ ಶುಕ್ರವಾರಗಳಂದು ಚಾಮುಂಡಿ ಬೆಟ್ಟಕ್ಕೆ ನೀಡಲಾಗುತ್ತಿದ್ದ ವಾಹನ ಪಾಸ್ಗಳನ್ನು ಪೊಲೀಸ್ ಇಲಾಖೆ ರದ್ದುಗೊಳಿಸಿದೆ.
ಆಷಾಢ ಶುಕ್ರವಾರ ಹಾಗೂ ಚಾಮುಂಡೇಶ್ವರಿ ದೇವಿಯ ವರ್ಧಂತಿಯಂದು ಬೆಟ್ಟಕ್ಕೆ ವಾಹನ ಸಂಚಾರವನ್ನು ನಿರ್ಬಂಧಿಸಿದ್ದು, ಕೆಲವು ತುರ್ತು ಅವಶ್ಯಕತೆಗಳಿಗೆ ಅನುಗುಣವಾಗಿ ಮಾತ್ರ ಚಾಮುಂಡಿ ಬೆಟ್ಟಕ್ಕೆ ತೆರಳಲು ಪೊಲೀಸ್ ಆಯುಕ್ತರವರ ಕಚೇರಿಯಿಂದ ವಾಹನ ಪಾಸ್ಗಳನ್ನು ನೀಡಲಾಗುತ್ತಿತ್ತು.
ಆದರೆ ಈ ಪಾಸ್ಗಳಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಖಾಸಗಿ ವಾಹನಗಳ ದರ್ಬಾರ್ ಹೆಚ್ಚಾಗುತ್ತಿತ್ತು. ವಾಹನ ದಟ್ಟಣೆಯು ಕೂಡ ಹೆಚ್ಚಾಗಿತ್ತು. ಆದರೆ ಚಾಮುಂಡಿ ಬೆಟ್ಟದಲ್ಲಿ ಸಾರ್ವಜನಿಕರಿಗೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಸುಗಮ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಚಾಮುಂಡಿ ಬೆಟ್ಟಕ್ಕೆ ಸಂಚರಿಸುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಮುಂದೆ ಬರುವ ಆಷಾಡ ಶುಕ್ರವಾರಗಳಾದ ಜುಲೈ 15, 20 ಮತ್ತು 22 ರಂದು ಬೆಟ್ಟಕ್ಕೆ ತೆರಳಲು ಪೊಲೀಸ್ ಆಯುಕ್ತರ ಕಚೇರಿಯಿಂದ ಯಾವುದೇ ರೀತಿಯ ವಾಹನದ ಪಾಸ್ ನೀಡಲಾಗುವುದಿಲ್ಲ. ಈ ಹಿಂದೆ ನೀಡಲಾಗುತ್ತಿದ್ದ ವಾಹನ ಪಾಸ್ ವ್ಯವಸ್ಥೆಯನ್ನು ರದ್ದುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಸೋಮವಾರ ತಿಳಿಸಿದ್ದಾರೆ.
ಸಾರ್ವಜನಿಕರು ಮುಂದಿನ ಆಷಾಡ ಶುಕ್ರವಾರಗಳು ಮತ್ತು ಚಾಮುಂಡೇಶ್ವರಿ ದೇವಿಯ ವರ್ಧಂತಿ ದಿನಗಳಂದು ನಗರ ಸಾರಿಗೆ ಅಥವಾ ದೇವಸ್ಥಾನದ ಆಡಳಿತ ಮಂಡಳಿ ವ್ಯವಸ್ಥೆ ಮಾಡಿರುವ ಉಚಿತ ಕೆ. ಎಸ್. ಆರ್. ಟಿ. ಸಿ. ಬಸ್ಗಳಲ್ಲಿ ಚಾಮುಂಡಿ ಬೆಟ್ಟಕ್ಕೆ ಪ್ರಯಾಣಿಸಿ, ದೇವಸ್ಥಾನದಲ್ಲಿ ನಿರ್ಧಿಷ್ಠ ಪಡಿಸಿರುವ ಸರತಿ ಸಾಲುಗಳಲ್ಲಿ ತೆರಳಿ ದೇವರ ದರ್ಶನವನ್ನು ಪಡೆಯಬೇಕೆಂದು ಮನವಿ ಮಾಡಿದ್ದಾರೆ.
ಜುಲೈ 20ರಂದು ನಡೆಯುವ ವರ್ಧಂತಿಗೂ ಕೂಡ ಪಾಸ್ ಕೊಡದಿರಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಅಂದೂ ಕೂಡ ಭಕ್ತಾದಿಗಳು ಬಸ್ಗಳಲ್ಲೇ ತೆರಳಲು ಸೂಚಿಸಲಾಗಿದೆ. ಕಳೆದ 2 ವರ್ಷಗಳಿಂದ ಕೊರೊನಾ ಕಾರಣದಿಂದ ಆಷಾಢ ಮಾಸದ ವಿಶೇಷ ಪೂಜೆಗೆ ಭಕ್ತರಿಲ್ಲದೆ ದೇವಸ್ಥಾನ ಬಣಗುಡುತ್ತಿತ್ತು.
ಈ ಬಾರಿ ಅವಶ್ಯಕತೆ ಭಕ್ತಾದಿಗಳಿಗೆ ನಾಡದೇವತೆ ಮಹಿಷಾಸುರ ಮರ್ದಿನಿ ಚಾಮುಂಡೇಶ್ವರಿ ತಾಯಿಗೆ ಆಷಾಢ ಮಾಸದಲ್ಲಿ ವಿಶೇಷ ಪೂಜೆಗೆ ಆಗಮಿಸುವ ಭಕ್ತರು ಕಡ್ಡಾಯವಾಗಿ ಕೊರೊನಾ 2ನೇ ಡೋಸ್ ಪಡೆದಿರುವ ಜೊತೆಗೆ ನೆಗೆಟಿವ್ ವರದಿಯ ಪ್ರತಿ ಕಡ್ಡಾಯ ತರಬೇಕಿದೆ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ












Click it and Unblock the Notifications