ಮೈಸೂರಿನಲ್ಲಿ ಜಾರಿಗೆ ಬರಲಿಗೆ ಪೇ ಅಂಡ್ ಪಾರ್ಕ್
ಮೈಸೂರು, ಮೇ 6 : ಕೆಲವು ತಿಂಗಳ ಹಿಂದೆ ಬೆಂಗಳೂರು ನಗರದಲ್ಲಿ ಸದ್ದು ಮಾಡಿದ್ದ ಪೇ ಅಂಡ್ ಪಾರ್ಕ್ ವ್ಯವಸ್ಥೆ ಸಾಂಸ್ಕೃತಿಕ ನಗರ ಮೈಸೂರಿಗೂ ಕಾಲಿಡುವ ಸಾಧ್ಯತೆ ಇದೆ. ನಗರ ಪೊಲೀಸ್ ಆಯುಕ್ತ ಎಂ.ಎ.ಸಲೀಂ ನಗರದಲ್ಲಿ ಪೇ ಅಂಡ್ ಪಾರ್ಕ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದ ಹೇಳಿದ್ದಾರೆ.
ಸೋಮವಾರ ಮೈಸೂರಿನಲ್ಲಿ ಮಾತನಾಡಿದ ಸಲೀಂ ರಾಜ್ಯ ಸರ್ಕಾರ ಪ್ರಮುಖ ನಗರಗಳಲ್ಲಿ ಪೇ ಅಂಡ್ ಪಾರ್ಕ್ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸುತ್ತಿದ್ದು. ಆ ನಗರಗಳಲ್ಲಿ ಮೈಸೂರು ಸೇರಿದೆ. ಆದ್ದರಿಂದ ಶೀಘ್ರದಲ್ಲೇ ನಗರದಲ್ಲಿ ಪೇ ಅಂಡ್ ಪಾರ್ಕ್ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮೈಸೂರು ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿದೆ. ಪೇ ಅಂಡ್ ಪಾರ್ಕ್ ವ್ಯವಸ್ಥೆ ಜಾರಿಗೆ ತಂದರೆ ನಗರದಲ್ಲಿ ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸುವುದು ಕಡಿಮೆಯಾಗುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಸ್ವತಃ ಆಯುಕ್ತರೇ ಪೇ ಅಂಡ್ ಪಾರ್ಕ್ ಬಗ್ಗೆ ಹೇಳಿರುವುದರಿಂದ ಮೈಸೂರಿನ ಜನರು ಪಾರ್ಕಿಂಗ್ ಶುಲ್ಕ ಕಟ್ಟಲು ಸಿದ್ಧವಾಗಬೇಕಾಗಿದೆ. [ಬೆಂಗಳೂರು ಪಾರ್ಕಿಂಗ್ ವ್ಯವಸ್ಥೆ ಸರಿಪಡಿಸಿ]
ನಗರದ ಜನರು ಸೈಕಲ್ ಉಪಯೋಗಿಸುವುದಿಲ್ಲ. ಎಲ್ಲರೂ ಕಾರು ಅಥವ ಬೈಕ್ ಕೊಂಡುಕೊಳ್ಳುತ್ತಾರೆ. ಸಾರ್ವಜನಿಕ ಸಾರಿಗೆಗಳನ್ನು ಉಪಯೋಗಿಸುವುದಿಲ್ಲ, ಆದ್ದರಿಂದ ನಗರಗಳಲ್ಲಿ ಸಂಚಾರದ ಸಮಸ್ಯೆ ಉಂಟಾಗುತ್ತಿದೆ ಎಂದು ಸಲೀಂ ವಿಶ್ಲೇಷಿಸಿದರು.
ಕೆಲವು ತಿಂಗಳ ಹಿಂದೆ ಬೆಂಗಳೂರಿನಲ್ಲಿ ಪೇ ಅಂಡ್ ಪಾರ್ಕ್ ವ್ಯವಸ್ಥೆಯನ್ನು ಜಾರಿಗೆ ತರಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಿದ್ಧತೆ ನಡೆಸಿತ್ತು. ಆದರೆ, ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯ ಪ್ರಸ್ತಾವನೆಯನ್ನು ಕೈಬಿಡಲಾಗಿತ್ತು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications