ಮೈಸೂರು: ಬರಿಗೈನಲ್ಲೇ ಒಳಚರಂಡಿ ಸ್ವಚ್ಛಗೊಳಿಸಿದ ಪೌರಕಾರ್ಮಿಕ
ಮೈಸೂರು, ಸೆಪ್ಟೆಂಬರ್ 6: ಇತ್ತೀಚೆಗಷ್ಟೇ ಮೈಸೂರಿನಲ್ಲಿ ಮ್ಯಾನ್ ಹೋಲ್ ಗೆ ಇಳಿಸಿ ಪೌರಕಾರ್ಮಿಕರಿಂದ ಸ್ವಚ್ಛಗೊಳಿಸಿದ ಪ್ರಕರಣ ನಡೆದ ಬೆನ್ನಲ್ಲಿಯೇ ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಪೌರ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಯಾವುದೇ ಭದ್ರತೆಯ ವ್ಯವಸ್ಥೆ ಕಲ್ಪಿಸದೆ ಒಳಚರಂಡಿಯನ್ನು ಬರಿಗೈನಿಂದಲೇ ಸ್ವಚ್ಛಗೊಳಿಸುವ ಕಾರ್ಯ ನಡೆಯುತ್ತಲೇ ಇದೆ. ಇದು ಅಮಾನವೀಯತೆಯ ಜ್ವಲಂತ ನಿದರ್ಶನವಾಗಿದ್ದು, ಸಾಂಸ್ಕೃತಿಕ ನಗರಿಯ ಜನತೆಯನ್ನು ತಲೆ ತಗ್ಗಿಸುವಂತೆ ಮಾಡಿದೆ.

ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಜೆ.ಪಿ.ನಗರದ ಅಕ್ಕಮಹಾದೇವಿ ರಸ್ತೆಯಲ್ಲಿ ಮಂಗಳವಾರ ರಾತ್ರಿ ಸುರಿದ ಮಳೆಯಿಂದಾಗಿ ತುಂಬಿಕೊಂಡಿದ್ದ ಒಳಚರಂಡಿಯನ್ನು ಸ್ವಚ್ಛಗೊಳಿಸಲು ಪೌರಕಾರ್ಮಿಕ ಶ್ರೀನಿವಾಸ್ ಎನ್ನುವರನ್ನು ಚರಂಡಿಗೆ ಇಳಿಸಲಾಗಿದೆ.
ಆದರೆ ಅವರಿಗೆ ಯಾವುದೇ ಮುಂಜಾಗ್ರತವಾಗಿ ಗ್ಲೌಸ್ ಏನನ್ನೂ ನೀಡದೇ ಪೌರಕಾರ್ಮಿಕ ಶ್ರೀನಿವಾಸ್ ಅವರನ್ನು ಒಳಚರಂಡಿಗೆ ಇಳಿಸಲಾಗಿದೆ.
ಕಾರ್ಪೋರೇಶನ್ ಇನ್ಸಪೆಕ್ಟರ್ ಶಿವಕುಮಾರ್ ಎಂಬವರು ಒಳಚರಂಡಿ ಸ್ವಚ್ಛಗೊಳಿಸಲು ಹೇಳಿದ್ದು, ಶ್ರೀನಿವಾಸ್ ಅವರಿಗೆ ಪಾಲಿಕೆಯ ವತಿಯಿಂದ ಆರೋಗ್ಯದ ಹಿತದೃಷ್ಟಿಯಿಂದ ಯಾವುದೇ ಕಾಳಜಿ ವಹಿಸುವಂಥಹ ಸಾಮಗ್ರಿಗಳನ್ನು ನೀಡಿಲ್ಲ.
ಅವರೂ ಎಲ್ಲರಂತೆ ಮನುಷ್ಯರು. ಮಾನವೀಯ ನೆಲೆಯಲ್ಲಾದರೂ ಅವರಿಗೆ ಕೈಗೆ ಧರಿಸಲು ಗ್ಲೌಸ್ ಗಳನ್ನು ನೀಡಬಹುದಾಗಿತ್ತು ಎಂಬ ಮಾತುಗಳು ಕೇಳಿ ಬಂದಿದೆ.
ಈ ಹಿಂದೆ ಚಾಮುಂಡಿ ಬೆಟ್ಟದ ಗ್ರಾಮಪಂಚಾಯತಿ ವ್ಯಾಪ್ತಿಗೆ ಸೇರಿದ ಮ್ಯಾನ್ ಹೋಲ್ ನಲ್ಲಿ ಪೌರಕಾರ್ಮಿಕನೋರ್ವನನ್ನು ಇಳಿಸಿ ಸ್ವಚ್ಛಗೊಳಿಸಲಾಗಿತ್ತು. ಆ ಘಟನೆ ಮಾಸುವ ಮುನ್ನವೇ ಪಾಲಿಕೆಯ ವ್ಯಾಪ್ತಿಯಲ್ಲಿಯೇ ಇಂಥಹ ಅಮಾನವೀಯ ಘಟನೆ ನಡೆದಿರುವುದು ವಿಪರ್ಯಾಸ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications