ಮೈಸೂರಿನಲ್ಲಿ ಇಂದಿನಿಂದ ಮೋಡ ಬಿತ್ತನೆ ಕಾರ್ಯ ಆರಂಭ
ಮೈಸೂರು, ಜುಲೈ 26: ಮೈಸೂರಿನಲ್ಲಿ ಗುರುವಾರದಿಂದ ಮೋಡ ಬಿತ್ತನೆ ಕಾರ್ಯ ಆರಂಭಗೊಂಡಿದೆ. ಮೋಡ ಬಿತ್ತನೆ ಯೋಜನೆಗಾಗಿ ಈಗಾಗಲೇ ಬೆಂಗಳೂರಿನಿಂದ ಒಂದು ವಿಮಾನ ಮೈಸೂರಿಗೆ ಬಂದಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಈ ಭಾಗದಲ್ಲಿ 90 ದಿನಗಳ ಕಾಲ ಮೋಡ ಬಿತ್ತನೆ ಕಾರ್ಯ ಮುಂದುವರಿಯಲಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ಅವರು 2019-20, 2020-21ನೇ ವರ್ಷವನ್ನು ಗಮನದಲ್ಲಿಟ್ಟುಕೊಂಡು ವೈಮಾನಿಕ ಮೋಡ ಬಿತ್ತನೆ ಕೈಗೊಂಡಿದ್ದರು. ಎರಡು ವರ್ಷಗಳ ಗುತ್ತಿಗೆಯನ್ನು ಖಾಸಗಿ ಸಂಸ್ಥೆಗೆ ನೀಡಲಾಗಿತ್ತು. ಅಲ್ಲದೇ ಜೂನ್ ಅಂತ್ಯದಲ್ಲಿ ಬಿತ್ತನೆ ಮಾಡಲು ತೀರ್ಮಾನಿಸಿದ್ದು, ಈಗಾಗಲೇ ತಡವಾಗಿದೆ. ಹಾಗಾಗಿ ಇಂದಿನಿಂದ ಎರಡು ವಿಮಾನಗಳನ್ನು ಬಳಸಿ ಮೈಸೂರು ಹಾಗೂ ಹುಬ್ಬಳ್ಳಿ ನಗರವನ್ನು ಕೇಂದ್ರವಾಗಿಟ್ಟುಕೊಂಡು ವೈಮಾನಿಕ ಬಿತ್ತನೆ ಕಾರ್ಯವನ್ನು ಆರಂಭಿಸಲಾಗಿದೆ.

ಎರಡು ವರ್ಷಗಳ ವೈಮಾನಿಕ ಮೋಡ ಬಿತ್ತನೆಗೆ ರಾಜ್ಯ ಸರ್ಕಾರ 45 ಕೋಟಿ ರೂಪಾಯಿ ಅನುದಾನ ನೀಡಿದೆ. ಬೆಂಗಳೂರು ಎಚ್ಎಎಲ್ ವಿಮಾನ ನಿಲ್ದಾಣದಿಂದ ಹಾರಿದ ಎರಡು ವಿಮಾನಗಳು ಪ್ರಾಯೋಗಿಕವಾಗಿ ಮೋಡ ಬಿತ್ತನೆ ಮಾಡಿ ಪರಿಶೀಲನೆ ನಡೆಸಿವೆ. ಒಂದು ವಿಮಾನ ಕನಕಪುರದ ಕಡೆಗೆ ಹಾಗೂ ಮತ್ತೊಂದು ಕೋಲಾರದ ಕಡೆಗೆ ಮೋಡ ಬಿತ್ತನೆ ಕಾರ್ಯವನ್ನು ಯಶಸ್ವಿಯಾಗಿ ಮಾಡಿವೆ. 2017ರಲ್ಲಿ ಮೋಡ ಬಿತ್ತನೆ ಮಾಡಿದಾಗ ಸಾಧಾರಣ ಮಳೆ ಶೇ.28 ಹೆಚ್ಚಾಗಿತ್ತು. ಮೈಸೂರು ಜಿಲ್ಲೆಯಲ್ಲಿ ವೈಮಾನಿಕ ಮೋಡ ಬಿತ್ತನೆಯ ನಂತರ ಉತ್ತಮ ಮಳೆಯಾಗುತ್ತದೆ ಎಂಬ ನಿರೀಕ್ಷೆ ಇರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ












Click it and Unblock the Notifications