ಸೋಲಿನಿಂದ ಹೊರಬರಲು ಗ್ರಾಮವಾಸ್ತವ್ಯ- ಶಾಸಕ ನಾಗೇಂದ್ರ ವ್ಯಂಗ್ಯ
ಮೈಸೂರು, ಜೂನ್ 10 : ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಲೋಕಸಭಾ ಚುನಾವಣೆಯ ಸೋಲಿನಿಂದ ಹೊರಬರಲು ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ ಎಂದು ಶಾಸಕ ನಾಗೇಂದ್ರ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಕ್ಕೆ ಬಂದು ಒಂದು ವರ್ಷದ ನಂತರ ಮುಖ್ಯಮಂತ್ರಿಯವರು ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ. ಹಾಗೆ ಮಾಡುವುದೇ ಇದ್ದರೆ ಒಂದು ವರ್ಷದ ಹಿಂದೆಯೇ ಮಾಡಬಹುದಾಗಿತ್ತು ಎಂದು ಹೇಳಿದರು.
ಒಂದು ವೇಳೆ ಗ್ರಾಮ ವಾಸ್ತವ್ಯ ಮಾಡುವುದೇ ಆದರೆ ಬೇರೆಲ್ಲೋ ವಾಸ್ತವ್ಯ ಮಾಡುವ ಬದಲು ಮೈಸೂರಿನ ಪಾರಂಪರಿಕ ಕಟ್ಟಡ ದೇವರಾಜ ಮಾರುಕಟ್ಟೆಯಲ್ಲಿ ವಾಸ್ತವ್ಯ ಮಾಡಲಿ. ಮಾರುಕಟ್ಟೆಗೆ ತನ್ನದೇ ಆದ ಪಾರಂಪರಿಕತೆ ಇದೆ. ಅಲ್ಲಿನ ಸಮಸ್ಯೆ ಅರಿಯಲು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಒಂದು ದಿನ ವಾಸ್ತವ್ಯ ಹೂಡಲಿ. ಅವರೊಂದಿಗೆ ನಾನೂ ಇರುತ್ತೇನೆ. ಆ ನಂತರವಾದರೂ ಮಾರುಕಟ್ಟೆ ಅಭಿವೃದ್ಧಿಗೆ ಮುಂದಾಗಲಿ ಎಂದು ಸಲಹೆ ನೀಡಿದ್ದಾರೆ.
ಪಾರಂಪರಿಕ ನಗರಿ ಮೈಸೂರು ವಿಶ್ವದಲ್ಲೇ ಹೆಸರು ಮಾಡಿದೆ. ಆದರೆ, ಇಲ್ಲಿನ ಹಲವು ಪಾರಂಪರಿಕ ಕಟ್ಟಡಗಳು ಸೂಕ್ತ ನಿರ್ವಹಣೆಯಿಲ್ಲದೆ ಕುಸಿದು ಬೀಳುತ್ತಿವೆ. ಇಂತಹ ಕಟ್ಟಡಗಳ ಸಂರಕ್ಷಣೆಯತ್ತ ಮುಖ್ಯಮಂತ್ರಿ ಮೊದಲು ಗಮನ ಹರಿಸಲಿ ಎಂದರು.

ಮಂಡ್ಯದಲ್ಲಿ ಸಚಿವ ಡಿ. ಸಿ ತಮ್ಮಣ್ಣ ಅವರು ಜನರ ವಿರುದ್ಧ ಆಡಿರುವ ಮಾತುಗಳಿಗೆ ಪ್ರತಿಕ್ರಿಯಿಸಿ, ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವಂಥದ್ದು. ಜನಪ್ರತಿನಿಧಿಯಾಗುವ ಮುನ್ನ ಅಧಿಕಾರಿಯಾಗಿದ್ದ ತಮ್ಮಣ್ಣ ಅವರಿಗೆ ಸಾಕಷ್ಟು ರಾಜಕೀಯ ಅನುಭವವಿದೆ. ಅವರು ಈ ರೀತಿ ಮಾತನಾಡಬಾರದು ಎಂದಿದ್ದಾರೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications