ಮೈಸೂರಲ್ಲಿ ಜನಮನ ಸೆಳೆದ ಛಾಯಾಚಿತ್ರ ಪ್ರದರ್ಶನಕ್ಕೆ ಸಿಎಂ ಚಾಲನೆ
ಮೈಸೂರು, ಸೆಪ್ಟೆಂಬರ್ 11: ಮೈಸೂರು ನಗರ ಪತ್ರಿಕಾ ಛಾಯಾಗ್ರಾಹಕರ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಮಂಗಳವಾರ ಮೈಸೂರಿನಲ್ಲಿ ಆಯೋಜಿಸಿದ್ದ ಛಾಯಾಚಿತ್ರ ಪ್ರದರ್ಶನ- 2018 ಕಾರ್ಯಕ್ರಮವನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಸುಮಾರು 20 ವರ್ಷ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ ಹಾಗೂ 60 ವರ್ಷ ವಯೋಮಾನ ಹೊಂದಿದ ಪತ್ರಕರ್ತರಿಗೆ ಅಗತ್ಯ ಸವಲತ್ತುಗಳನ್ನು ಸರ್ಕಾರದ ವತಿಯಿಂದ ಕೊಡುವ ಬಗ್ಗೆ ಸದ್ಯದಲ್ಲೇ ಗಮನ ಹರಿಸಲಾಗುವುದು ಎಂದರು.

ಸಂಕಷ್ಟದಲ್ಲಿರುವ ಪತ್ರಕರ್ತರ ಜೀವನ ಉತ್ತಮಗೊಳಿಸುವ ರೀತಿಯಲ್ಲಿ ಕಾರ್ಯಕ್ರಮ ಕೊಡಬೇಕಾಗಿದೆ ಎಂದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಹಾಗೂ ಛಾಯಾಚಿತ್ರಗಳಿಗೆ ಜೀವ ತುಂಬುತ್ತಿದ್ದ ಪತ್ರಿಕಾ ಛಾಯಾಗ್ರಾಹಕ ಟಿ.ಎಸ್. ಸತ್ಯನ್ ಅವರು ಮೈಸೂರಿನವರು ಎಂಬುದು ಹೆಮ್ಮೆಯ ವಿಷಯ, ಪತ್ರಿಕಾ ಛಾಯಾಗ್ರಾಹಕರು ಭಾವನಾತ್ಮಕ ಜೀವಿಗಳು. ರಮಣೀಯವಾದ ಸ್ಥಳಗಳು, ಅರಣ್ಯ ಮುಂತಾದ ಸ್ಥಳಗಳಲ್ಲಿ ಅಪರೂಪದ ಕ್ಷಣಗಳನ್ನು ವನ್ಯಜೀವಿಗಳನ್ನು ಕ್ಯಾಮರಾದಲ್ಲಿ ಸೆರೆ ಹಿಡಿಯುವುದು ವಿಶೇಷ
ನೂರಾರು ಪದಗಳಲ್ಲಿ ಹೇಳಬೇಕಾದನ್ನು ಒಂದು ಛಾಯಾಚಿತ್ರ ಹೇಳುತ್ತದೆ. ದೂರದರ್ಶನ ಹೆಚ್ಚು ಜನಪ್ರಿಯಗೊಳ್ಳುವ ಮುನ್ನವೇ ಪತ್ರಿಕಾ ಛಾಯಾಗ್ರಹಣ ಹೆಚ್ಚು ಜನಪ್ರಿಯಗೊಂಡಿತ್ತು. ಈಗಲೂ ಅಷ್ಟೇ ಪ್ರಾಮುಖ್ಯತೆ ಹೊಂದಿದೆ ಎಂದರು.

ಸಮಾರಂಭದಲ್ಲಿ ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಟಿ. ದೇವೇಗೌಡ, ಪ್ರವಾಸೋದ್ಯಮ ಸಚಿವರಾದ ಸಾ ರಾ ಮಹೇಶ್, ಹಿರಿಯ ಪತ್ರಕರ್ತ ಕೆ. ಶಿವಕುಮಾರ್, ಉದ್ಯಮಿ ಪಿ.ವಿ. ಗಿರಿ, ಪತ್ರಿಕಾ ಛಾಯಾಗ್ರಾಹಕ ಪ್ರಗತಿ ಗೋಪಾಲಕೃಷ್ಣ, ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಉಪಸ್ಥಿತರಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications