ವಿಜಯ್ ಪ್ರಕಾಶ್ ಹಾಡಿಗೆ ಭಾವುಕರಾಗಿ ಕಣ್ಣೀರು ಹಾಕಿದ ಕುಮಾರಸ್ವಾಮಿ
Recommended Video

ಮೈಸೂರು, ಅಕ್ಟೋಬರ್ 13: ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಭಾವುಕ ಹೃದಯ ತುಂಬಿ ಬಂದು ನಿನ್ನೆ ಕಾರ್ಯಕ್ರಮವೊಂದರಲ್ಲಿ ಕಣ್ಣೀರು ಹಾಕಿದ್ದಾರೆ.
ಹೌದು, ನಿನ್ನೆ ಮೈಸೂರಿನ ದಸರಾದ 'ಯುವ ದಸರಾ' ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕುಮಾರಸ್ವಾಮಿ ಅವರು, ಹಾಡೊಂದನ್ನು ಕೇಳಿ ಭಾವುಕರಾಗಿ ಕಣ್ಣೀರು ಹಾಕಿದರು.
ನಡೆದದ್ದು ಇಷ್ಟು, ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು ವೇದಿಕೆ ಮೇಲೆ 'ಒಳಿತು ಮಾಡು ಮನುಸಾ, ನೀ ಇರೋದು ಮೂರು ದಿವಸ' ಹಾಡು ಹಾಡಿದರು. ಇದು ಕುಮಾರಸ್ವಾಮಿ ಅವರ ಮನಸ್ಸು ತಾಗಿತು.

ಹಾಡು ಮುಗಿಯುತ್ತಿದ್ದಂತೆ ಕುಮಾರಸ್ವಾಮಿ ಅವರು, ಹಾಡನ್ನು ಮತ್ತೊಮ್ಮೆ ಹಾಡುವಂತೆ ವಿಜಯ್ಪ್ರಕಾಶ್ ಅವರಲ್ಲಿ ಮನವಿ ಮಾಡಿಕೊಂಡರು. ಅಂತೆಯೇ ವಿಜಯ್ ಪ್ರಕಾಶ್ ಅವರು ತಮ್ಮ ಸುಶ್ರಾವ್ಯ ಕಂಠದಿಂದ ಮತ್ತೊಮ್ಮೆ ಭಾವಪೂರ್ಣವಾಗಿ ಹಾಡು ಹಾಡಿದರು.
ಹಾಡು ಕೇಳುತ್ತಾ, ಕೇಳುತ್ತಾ ಸಿಎಂ ಕುಮಾರಸ್ವಾಮಿ ಅವರ ಕಣ್ಣಾಲಿಗಳು ಒದ್ದೆಯಾದವು. ಹಾಡು ಮುಗಿಯುವಷ್ಟರಲ್ಲಿ ಹಲವು ಬಾರಿ ಅವರು ಕಣ್ಣೀರು ಒರೆಸುಕೊಂಡರು. ವೇದಿಕೆ ಮೇಲಿದ್ದ ದೊಡ್ಡ ಪರದೆಯ ಮೇಲೆ ಕುಮಾರಸ್ವಾಮಿ ಅವರು ಕಣ್ಣೀರು ಒರೆಸಿಕೊಳ್ಳುತ್ತಿರುವ ದೃಶ್ಯಗಳು ಕಾಣುತ್ತಿತ್ತು.
ಕುಮಾರಸ್ವಾಮಿ ಅವರು ಭಾವುಕರಾಗಿರುವುದು ಇದೇ ಮೊದಲೇನಲ್ಲ, ಕೆಲವು ದಿನಗಳ ಹಿಂದೆ ಪಕ್ಷದ ಕಾರ್ಯಕ್ರಮವೊಂದರಲ್ಲಿ 'ನಾನು ನೆಮ್ಮದಿಯಿಂದ ಸಿಎಂ ಕುರ್ಚಿಯ ಮೇಲೆ ಕೂತಿಲ್ಲ' ಎಂದು ಹೇಳಿ ಕಣ್ಣೀರು ಒರೆಸಿಕೊಂಡಿದ್ದರು ಇದು ವಿವಾದಕ್ಕೂ ಕಾರಣವಾಗಿತ್ತು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications