ವಿಜಯ್ ಪ್ರಕಾಶ್ ಹಾಡಿಗೆ ಭಾವುಕರಾಗಿ ಕಣ್ಣೀರು ಹಾಕಿದ ಕುಮಾರಸ್ವಾಮಿ
Recommended Video

ಮೈಸೂರು, ಅಕ್ಟೋಬರ್ 13: ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಭಾವುಕ ಹೃದಯ ತುಂಬಿ ಬಂದು ನಿನ್ನೆ ಕಾರ್ಯಕ್ರಮವೊಂದರಲ್ಲಿ ಕಣ್ಣೀರು ಹಾಕಿದ್ದಾರೆ.
ಹೌದು, ನಿನ್ನೆ ಮೈಸೂರಿನ ದಸರಾದ 'ಯುವ ದಸರಾ' ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕುಮಾರಸ್ವಾಮಿ ಅವರು, ಹಾಡೊಂದನ್ನು ಕೇಳಿ ಭಾವುಕರಾಗಿ ಕಣ್ಣೀರು ಹಾಕಿದರು.
ನಡೆದದ್ದು ಇಷ್ಟು, ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು ವೇದಿಕೆ ಮೇಲೆ 'ಒಳಿತು ಮಾಡು ಮನುಸಾ, ನೀ ಇರೋದು ಮೂರು ದಿವಸ' ಹಾಡು ಹಾಡಿದರು. ಇದು ಕುಮಾರಸ್ವಾಮಿ ಅವರ ಮನಸ್ಸು ತಾಗಿತು.

ಹಾಡು ಮುಗಿಯುತ್ತಿದ್ದಂತೆ ಕುಮಾರಸ್ವಾಮಿ ಅವರು, ಹಾಡನ್ನು ಮತ್ತೊಮ್ಮೆ ಹಾಡುವಂತೆ ವಿಜಯ್ಪ್ರಕಾಶ್ ಅವರಲ್ಲಿ ಮನವಿ ಮಾಡಿಕೊಂಡರು. ಅಂತೆಯೇ ವಿಜಯ್ ಪ್ರಕಾಶ್ ಅವರು ತಮ್ಮ ಸುಶ್ರಾವ್ಯ ಕಂಠದಿಂದ ಮತ್ತೊಮ್ಮೆ ಭಾವಪೂರ್ಣವಾಗಿ ಹಾಡು ಹಾಡಿದರು.
ಹಾಡು ಕೇಳುತ್ತಾ, ಕೇಳುತ್ತಾ ಸಿಎಂ ಕುಮಾರಸ್ವಾಮಿ ಅವರ ಕಣ್ಣಾಲಿಗಳು ಒದ್ದೆಯಾದವು. ಹಾಡು ಮುಗಿಯುವಷ್ಟರಲ್ಲಿ ಹಲವು ಬಾರಿ ಅವರು ಕಣ್ಣೀರು ಒರೆಸುಕೊಂಡರು. ವೇದಿಕೆ ಮೇಲಿದ್ದ ದೊಡ್ಡ ಪರದೆಯ ಮೇಲೆ ಕುಮಾರಸ್ವಾಮಿ ಅವರು ಕಣ್ಣೀರು ಒರೆಸಿಕೊಳ್ಳುತ್ತಿರುವ ದೃಶ್ಯಗಳು ಕಾಣುತ್ತಿತ್ತು.
ಕುಮಾರಸ್ವಾಮಿ ಅವರು ಭಾವುಕರಾಗಿರುವುದು ಇದೇ ಮೊದಲೇನಲ್ಲ, ಕೆಲವು ದಿನಗಳ ಹಿಂದೆ ಪಕ್ಷದ ಕಾರ್ಯಕ್ರಮವೊಂದರಲ್ಲಿ 'ನಾನು ನೆಮ್ಮದಿಯಿಂದ ಸಿಎಂ ಕುರ್ಚಿಯ ಮೇಲೆ ಕೂತಿಲ್ಲ' ಎಂದು ಹೇಳಿ ಕಣ್ಣೀರು ಒರೆಸಿಕೊಂಡಿದ್ದರು ಇದು ವಿವಾದಕ್ಕೂ ಕಾರಣವಾಗಿತ್ತು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications