ಮೈಸೂರಿನಲ್ಲಿ ಜೆಡಿಎಸ್ ಮುಖಂಡರೊಂದಿಗೆ ಎಚ್ಡಿಕೆ ದಿಢೀರ್ ಸಭೆ
ಮೈಸೂರು, ಮೇ 18: ಮೈತ್ರಿ ಸರ್ಕಾರದಲ್ಲಿ ಸರಿಹೋಗದಿದ್ದರೆ ಸರ್ಕಾರ ವಿಸರ್ಜಸಿ ಎಂಬುದಾಗಿ ತಿಳಿಸಿದ್ದ ಜೆಡಿಎಸ್ ಮುಖಂಡ ಬಸವರಾಜ್ ಹೊರಟ್ಟಿ ಹೇಳಿಕೆ ಹಿನ್ನೆಲೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಮ್ಮ ಆಪ್ತರ ಜತೆ ಮೈಸೂರಿನಲ್ಲಿ ಸಭೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಮೈಸೂರಿನ ಖಾಸಗಿ ಹೋಟೆಲ್ಗೆ ಮಧ್ಯಾಹ್ನದ ನಂತರ ಬಂದ ಸಿಎಂ ಕುಮಾರಸ್ವಾಮಿ ಮುಖಂಡರೊಂದಿಗೆ ಸಭೆ ನಡೆಸುತ್ತಿದ್ದು, ಸಭೆಯಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ರೇಷ್ಮೆ ಸಚಿವ ಸಾ.ರಾ.ಮಹೇಶ್ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದಾರೆ.
ಸಭೆ ಅತ್ಯಂತ ಮಹತ್ವದ್ದು ಎನ್ನಲಾಗಿದ್ದು, ಮೈತ್ರಿ ಸರ್ಕಾರದ ಸಾಧಕ, ಬಾಧಕ, ಚುನಾವಣೆ ಫಲಿತಾಂಶ ಮತ್ತು ಅದರ ನಂತರದ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಜೊತೆಗೆ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಹಿರಿಯ ಮುಖಂಡರನ್ನು ನಿಯಂತ್ರಿಸುವ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ.

ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ್ದ ಬಸವರಾಜ್ ಹೊರಟ್ಟಿ, ಮೈತ್ರಿ ಸರ್ಕಾರವನ್ನು ವಿಸರ್ಜನೆ ಮಾಡಿ, ಚುನಾವಣೆಗೆ ಹೋಗುವುದು ಒಳ್ಳೆಯದು ಎಂದು ಹೇಳಿದ್ದರು.
ಈ ಹೇಳಿಕೆ ಸದ್ಯ ತೆನೆ ಹೊತ್ತ ಪಕ್ಷದಲ್ಲಿ ಸಂಚಲನ ಮೂಡಿಸಿದ್ದು, ಸಿಎಂ ಹೆಚ್.ಡಿ ಕುಮಾರಸ್ವಾಮಿ ದಿಢೀರ್ ಮೈಸೂರಿಗೆ ಆಗಮಿಸಿ ಸಭೆ ನಡೆಸುತ್ತಿದ್ದಾರೆ. ಅಲ್ಲದೇ ಬಸವರಾಜ್ ಹೊರಟ್ಟಿ ಮಾತುಗಳಿಂದ ಆಗಬಹುದಾದ ಪರಿಣಾಮಗಳ ಕುರಿತು ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications