ಅಪ್ಪ ಸಿದ್ದು ಅನುಪಸ್ಥಿತಿಯಲ್ಲಿ ಮಗ ಯತೀಂದ್ರರ ದರ್ಬಾರು!

ಮೈಸೂರು, ಏಪ್ರಿಲ್ 21: ತಮ್ಮ ತಂದೆಯ ಅನುಪಸ್ಥಿತಿಯಲ್ಲಿ ಸರ್ಕಾರಿ ಅಧಿಕಾರಿಗಳ ಸಭೆ ನಡೆಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಅವರು ವಿವಾದಕ್ಕೀಡಾಗಿದ್ದಾರೆ.

ಮೈಸೂರಿನ ಸಿದ್ದರಾಮಯ್ಯ ಅವರ ನಿವಾಸದಲ್ಲಿ ನಾನಾ ಇಲಾಖೆಯ ಅಧಿಕಾರಿಗಳ ಸಭೆಯನ್ನು ಅವರು ನಡೆಸಿರುವುದು ಹಲವರ ಟೀಕೆಗೆ ಕಾರಣವಾಗಿದೆ.[ಸಿದ್ದರಾಮಯ್ಯ- ಅಂಬರೀಷ್ ಭೇಟಿಯ ಹಿಂದಿನ ಗುಟ್ಟೇನು?]

CM's son chairs meeting leads to controversy

ಸಿದ್ದರಾಮಯ್ಯ ಅವರು, ಶುಕ್ರವಾರ ಉಡುಪಿ ಜಿಲ್ಲೆಯ ಬಾರ್ಕೂರಿಗೆ ಭೇಟಿ ನೀಡಿದ್ದರು. ಹಾಗಾಗಿ, ಅವರು ಬೆಂಗಳೂರಿನಲ್ಲಿರಲಿಲ್ಲ. ಆದ್ದರಿಂದ ಯತೀಂದ್ರ ಅವರೇ ಸಭೆಯ ನೇತೃತ್ವ ವಹಿಸಿದ್ದರೆಂದು ಹೇಳಲಾಗಿದೆ.[ಸಿದ್ದರಾಮಯ್ಯ ಪುತ್ರ ಯತೀಂದ್ರರ 'ಮ್ಯಾಟ್ರಿಕ್ಸ್' ಹಿನ್ನಲೆ ಏನು?]

ಯಾವುದೇ ಸಾಂವಿಧಾನಿಕ ಹುದ್ದೆ ಅಥವಾ ಅಧಿಕಾರ ಇಲ್ಲದಿದ್ದರೂ, ಕೇವಲ ತಮ್ಮ ತಂದೆಯ ಅನುಪಸ್ಥಿತಿ ಇದೆ ಎಂಬ ಕಾರಣಕ್ಕೆ ಸಭೆಯ ನೇತೃತ್ವ ವಹಿಸಿರುವುದು ಸರಿಯೇ ಎಂಬ ಪ್ರಶ್ನೆ ರಾಜಕೀಯ ವಲಯದಿಂದ ಕೇಳಿಬರುತ್ತಿದೆ.[ಸಿದ್ದರಾಮಯ್ಯ ರಾಜಕೀಯ ನಿವೃತ್ತರಾಗಲ್ಲ: ಡಾ ಯತೀಂದ್ರ ಸಂದರ್ಶನ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+