ಶೀಘ್ರದಲ್ಲಿ ಸಂಪುಟ ವಿಸ್ತರಣೆಯಾಗಲಿದೆ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಮೈಸೂರು, ಜೂನ್ 24 : ಗೃಹ ಸಚಿವ ಸ್ಥಾನಕ್ಕೆ ಜಿ. ಪರಮೇಶ್ವರ್ ನೀಡಿರುವ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ರವಾನೆ ಮಾಡಲಾಗಿದ್ದು, ಅದು ಅಂಗೀಕಾರವಾಗಲಿದೆ. ಶೀಘ್ರವೇ ಸಂಪುಟ ವಿಸ್ತರಣೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ ಸಿದ್ದರಾಮಯ್ಯ, ''ಸಂಪುಟದಲ್ಲಿ ಮೂರು ಸ್ಥಾನ ಖಾಲಿಯಿದೆ. ಹೀಗಾಗಿ ಸಧ್ಯದಲ್ಲೇ ಸಂಪುಟ ವಿಸ್ತರಣೆ ಮಾಡಲಾಗುತ್ತದೆ. ಆದರೆ ಯಾವಾಗ, ಹೇಗೆ ಎಂಬುದನ್ನ ಇನ್ನೂ ಚರ್ಚಿಸಿಲ್ಲ'' ಎಂದು ತಿಳಿಸಿದರು. ''ರೈತರ ಸಾಲಮನ್ನಾ ವಿಚಾರ ಸಂಬಂಧ ಇಂದು ಆದೇಶ ಹೊರ ಬೀಳಲಿದೆ. ಜೂನ್ 20ರವರಗೆ ತೆಗೆದುಕೊಂಡಿರುವ ಎಲ್ಲ ಸಾಲ ಮನ್ನಾವಾಗಲಿದೆ. ಇನ್ನು ರಾಜ್ಯದಲ್ಲಿ ಮುಂಗಾರು ಕೊರತೆ ಇದ್ದು, ಮುಂದಿನ ದಿನಗಳಲ್ಲಿ ಮೋಡ ಬಿತ್ತನೆ ಮಾಡಲಾಗುವುದು'' ಎಂದು ಹೇಳಿದರು.

ಎಲ್ಲರಿಗೂ ತಿಳಿದಿದೆ: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತಮ್ಮ ವಿರುದ್ಧ ಕುಟುಂಬ ರಾಜಕಾರಣದ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಯಾವುದು ಅಪ್ಪ ಮಕ್ಕಳ ಪಕ್ಷ ಅಂತ ಎಲ್ಲರಿಗೂ ತಿಳಿದಿದೆ. ನಮ್ಮಮನೆಯಲ್ಲಿ ಎಷ್ಟು ಜನ ಶಾಸಕರಾಗಿದ್ದಾರೆ. ದೇವೇಗೌಡರ ಮನೆಯಲ್ಲಿ ಎಷ್ಟು ಮಂದಿ ಶಾಸಕರಾಗಿದ್ದಾರೆ ಎಂದು ಪ್ರಶ್ನಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಿರುದ್ದ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ''ಬಿಎಸ್ ವೈ ಒಬ್ಬ ಸುಳ್ಳುಗಾರ. ಅವರ ಹೇಳಿಕೆಗಳಿಗೆ ಉತ್ತರ ಕೊಡುತ್ತಾ ಕೂರಲು ಸಾಧ್ಯವಿಲ್ಲ'' ಎಂದು ಕಿಡಿ ಕಾರಿದರು.

ಆರೋಗ್ಯಾಧಿಕಾರಿಗಳೊಂದಿಗೆ ಸಭೆ: ಮೈಸೂರಿನಲ್ಲಿ ಡೆಂಗ್ಯೂ, ವೈರಲ್ ಜ್ವರ ಹೆಚ್ಚಿದ ಹಿನ್ನೆಲೆ ಆರೋಗ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದರು. ಮೈಸೂರಿನಲ್ಲಿ ಕಳೆದ ಕೆಲವು ದಿನಗಳಿಂದ ಡೆಂಗ್ಯೂ ಕಾಣಿಸಿಕೊಂಡಿದ್ದು ಆರು ಮಂದಿ ಮೃತಪಟ್ಟಿದ್ದಾರೆ. ಅಷ್ಟೇ ಅಲ್ಲದೇ ನಗರದಲ್ಲಿ ವೈರಲ್ ಫೀವರ್ ಹೆಚ್ಚುತ್ತಿದೆ. ಈ ಕುರಿತು ವೈದ್ಯಾಧಿಕಾರಿಗಳ ಸಭೆ ನಡೆಸಿದ ಸಿದ್ದರಾಮಯ್ಯ ಮಾಹಿತಿ ಪಡೆದರು.
ಸ್ವಾಮಿ ವಿವೇಕಾನಂದ ಸ್ಮಾರಕ ನಿರ್ಮಾಣಕ್ಕೆ ಸ್ಥಳ ನೀಡಲು ಕೇಂದ್ರ, ರಾಜ್ಯ ಸರ್ಕಾರ, ಜಿಲ್ಲಾಡಳಿತ ಶ್ರೀರಾಮಕೃಷ್ಣಾಶ್ರಮಕ್ಕೆ ಹಕ್ಕು ನೀಡಿದೆ.ಆದರೆ ಶಿಕ್ಷಣ ಇಲಾಖೆ ಈ ಆದೇಶಕ್ಕೆ ವಿರುದ್ಧವಾಗಿ ಎನ್.ಟಿ.ಎಂ. ಶಾಲೆ ಕಾರ್ಯನಿರ್ವಹಿಸಲು ಮುಂದಾಗಿತ್ತು. ವಿವೇಕಾನಂದ ಸ್ಮಾರಕಕ್ಕೆ ಸಹಕರಿಸಿ ಎಂದು ಸಾಹಿತಿ ಸಿಪಿಕೆ, ವಕೀಲ ಅರುಣ್ ಕುಮಾರ್ ಹಾಗೂ ರಾಮಕೃಷ್ಣಾಶ್ರಮದ ಸ್ವಾಮೀಜಿ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿ ಮನವಿ ಸಲ್ಲಿಸಿದರು.

ಇದೇ ವೇಳೆ ಪೌರಕಾರ್ಮಿಕರನ್ನು ಖಾಯಂಗೊಳಿಸಿದ್ದಕ್ಕೆ ಪೌರಕಾರ್ಮಿಕರು ಮುಖ್ಯಮಂತ್ರಿಗಳನ್ನು ಅಭಿನಂದಿಸಿ ಹಾರ ಹಾಕಿ ಸನ್ಮಾನಿಸಿದರು. . ಸಿದ್ದರಾಮಯ್ಯ ಅವರು ಮೈಸೂರಿಗೆ ಆಗಮಿಸಿರುವ ವಿಷಯ ತಿಳಿದ ಸಾರ್ವಜನಿಕರು ತಮ್ಮ ಅಹವಾಹಲುಗಳನ್ನು ಸಲ್ಲಿಸಲು ನಗರದ ಟಿ.ಕೆ. ಬಡಾವಣೆಯಲ್ಲಿರುವ ಸಿಎಂ ನಿವಾಸದ ಎದುರು ಬೆಳಿಗ್ಗೆಯಿಂದಲೇ ನೂರಾರು ಮಂದಿ ಸಾರ್ವಜನಿಕರು ಜಮಾಯಿಸಿದ್ದರು.
-
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications