ಯು.ಆರ್.ರಾವ್ ಆತ್ಮಕ್ಕೆ ಶಾಂತಿ ಸಿಗಲಿ: ಸಿದ್ದರಾಮಯ್ಯ
ಸುಪ್ರಸಿದ್ಧ ಬಾಹ್ಯಾಕಾಶ ವಿಜ್ಞಾನಿ ಪ್ರೊ ಯು ಆರ್ ರಾವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ನಾಲ್ಕು ದಶಕಗಳ ಹಿಂದೆಯೇ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅವಧಿಯಲ್ಲಿ ಭಾರತದ ಪ್ರಪ್ರಥಮ ಉಪಗ್ರಹ ಆರ್ಯಭಟ, ಭಾಸ್ಕರ, ಆಪಲ್, ರೋಹಿಣಿ ಹಾಗೂ ಬಹು-ಉದ್ದೇಶಿತ ಇನ್ಸ್ಯಾಟ್ ಸರಣಿಯ ಉಪಗ್ರಹಗಳನ್ನು ಒಳಗೊಂಡಂತೆ 18 ಉಪಗ್ರಹಗಳ ಉಡಾವಣೆಯ ರೂವಾರಿಯಾಗಿ ಭಾರತೀಯ ಸಂವಹನ, ದೂರ ಸಂವೇದಿ ಹಾಗೂ ಹವಾಮಾನ ಸೇವೆಗಳಲ್ಲಿ ಕ್ರಾಂತಿಕಾರಕ ಬದಲಾಣೆ ತಂದ ಕೀರ್ತಿ ಡಾ ಉಡುಪಿ ರಾಮಚಂದ್ರ ರಾವ್ ಅವರದು.

ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶದಲ್ಲಿರುವ ವ್ಯಕ್ತಿಯೊಡನೆ ಮೂರು ನಿಮಿಷಗಳ ಸಂಭಾಷಣೆ ನಡೆಸಲು ಟ್ರಂಕ್ ಕಾಲ್ ಬುಕ್ ಮಾಡಿ ಮೂರು ತಾಸುಗಳು ಕಾಯಬೇಕಾಗಿದ್ದ ಕಾಲವಿತ್ತು. ಅಂತಹ ಸಂದರ್ಭದಲ್ಲಿ ಒಮ್ಮೆಲೆ ದೇಶಾದ್ಯಂತ ನೇರ ದೂರ ಸಂಪರ್ಕ ಕಲ್ಪಿಸುವ (ಸ್ಟ್ರೇಟ್ ಟ್ರಂಕ್ ಡಯಲಿಂಗ್ ) ಜಾಲದ ವಿಸ್ತರಣೆಯಾದದ್ದು ಸಂವಹನ ಉಪಗ್ರಹದ ಉಡಾವಣೆಯಿಂದ ! ರಾಷ್ಟ್ರದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರ ಎಲ್ಲೆಡೆ ಹಾಗೂ ಎಲ್ಲೆಲ್ಲೂ ಆವರಿಸಲು ಪ್ರೊ ಯು ಆರ್ ರಾವ್ ಅವರ ದೂರದೃಷ್ಟಿ ಕಾರಣ ಎಂಬುದನ್ನು ನಾವಿಂದು ಸ್ಮರಿಸಬೇಕು.
ಪ್ರೊ ಯು ಆರ್ ರಾವ್ ಅವರಿಗೆ ಲಭಿಸಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಪದ್ಮಭೂಷಣ ಹಾಗೂ ಪದ್ಮವಿಭೂಷಣ ಪ್ರಶಸ್ತಿ ಒಳಗೊಂಡಂತೆ ಅನೇಕ ಪ್ರಶಸ್ತಿ-ಪುರಸ್ಕಾರಗಳು, ಗೌರವ ಡಾಕ್ಟರೇಟ್ಗಳು ಹಾಗೂ ಪ್ರತಿಷ್ಠಿತ ಪದಕಗಳು ಆಗಸದೆತ್ತರದ ಅವರ ಅಪಾರ ಸಾಧನೆಯನ್ನು ಬಿಂಬಿಸುತ್ತವೆ.
ನಾನು ಅವರೊಡನೆ ಹಲವು ಬಾರಿ ವೇದಿಕೆಯನ್ನು ಹಂಚಿಕೊಂಡಾಗ ಅವರಲ್ಲಿನ ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಗಳನ್ನು ಗಮನಿಸಿದ್ದೇನೆ. ಭಾರತದ ಬಾಹ್ಯಾಕಾಶ ಲೋಕದಲ್ಲಿ ಬಹು ದೊಡ್ಡ ಶಕ್ತಿಯಾಗಿ ಬೆಳೆದಿದ್ದ ಇಂತಹ ಮೇರು ವ್ಯಕ್ತಿ ಇದೀಗ ನಮ್ಮೊಡನೆ ಇಲ್ಲ ಎಂಬುದನ್ನು ನಂಬಲು ಸಾಧ್ಯವಿಲ್ಲ. ಭಾರತದ ಸುಪುತ್ರ ಹಾಗೂ ಹೆಮ್ಮೆಯ ಕನ್ನಡಿಗ ಪ್ರೊ ಯು ಆರ್ ರಾವ್ ಅವರ ಗಮನಾರ್ಹ ಸಾಧನೆಗಳು ಸದಾ ನಮ್ಮೊಡನೆ ಇರುವಾಗ ನಾವು ಅವರನ್ನು ಮರೆಯಲು ಹೇಗೆ ಸಾಧ್ಯ?
ಪ್ರೊ.ರಾವ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯಿಂದ ಉಂಟಾದ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ನಮ್ಮೆಲ್ಲರಿಗೂ ಕರುಣಿಸಲಿ ಎಂದು ಸಿದ್ದರಾಮಯ್ಯ ಅವರು ತಮ್ಮ ಸಂದೇಶದಲ್ಲಿ ಬಣ್ಣಿಸಿದ್ದಾರೆ.
-
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ











Click it and Unblock the Notifications