ಮೋದಿ ದುಡ್ಡಿನಲ್ಲಿ ಸಿದ್ರಾಮಣ್ಣನ ಜಾತ್ರೆ: ಪ್ರತಾಪ್ ಸಿಂಹ ವ್ಯಂಗ್ಯ
ಮೈಸೂರು, ಜುಲೈ 14 : ಕೇಂದ್ರ ಸರಕಾರದ ಯೋಜನೆಯನ್ನು ಬಳಸಿಕೊಂಡು, ತಮ್ಮ ಹೆಸರಿನಲ್ಲಿ ಸಿದ್ದರಾಮಯ್ಯ ಜಾತ್ರೆ ನಡೆಸುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.
ಇಲ್ಲಿನ ಜಲದರ್ಶಿನಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ರಿಂಗ್ ರಸ್ತೆಗೆ ಕೇಂದ್ರ ಹೆಚ್ಚು ಅನುದಾನ ಕೊಟ್ಟಿದೆ. ಆದರೆ ನಮಗೆ ಮಾಹಿತಿ ಇಲ್ಲದೆ ಸಿಎಂ ಉದ್ಘಾಟನೆ ಮಾಡಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರಿಗೆ ಹೇಳಿದ್ದೇನೆ ಎಂದರು. ಅವರು ಕೇಂದ್ರದ ಸ್ಪೀಕರ್ ಗಮನಕ್ಕೆ ತರಲು ಹೇಳಿದ್ದಾರೆ. ಅಲ್ಲಿ ಹಕ್ಕುಚ್ಯುತಿ ಮಂಡಿಸೋಣ ಎಂದರು.

ನರ್ಮ್ ಯೋಜನೆಯ ಮನೆಗಳಿಗೆ ಕೇಂದ್ರದಿಂದ ಶೇ 80 ಅನುದಾನ ಇದ್ದರೂ ಕೇಂದ್ರ ಸಚಿವರಿಂದ ಉದ್ಘಾಟನೆ ಮಾಡಿಸದೆ, ಸಿಎಂ ಉದ್ಘಾಟನೆ ಮಾಡಲು ಹೊರಟಿದ್ದಾರೆ. ಇದರ ಬಗ್ಗೆ ಜಿಲ್ಲಾಧಿಕಾರಿಗಳನ್ನು ಕೇಳಿದರೆ ಅವರು ನಮ್ಮ ಗಮನಕ್ಕೆ ಬಂದಿಲ್ಲ ಎನ್ನುತ್ತಿದ್ದಾರೆ ಎಂದು ಹೇಳಿದರು.
ರಾಜ್ಯ ಸರಕಾರವು ಕೇಂದ್ರದ ಯೋಜನೆಗಳನ್ನು ಹೈಜಾಕ್ ಮಾಡುತ್ತಿದೆ. ಇದರ ಬಗ್ಗೆ ಮುಖ್ಯಮಂತ್ರಿ ಕಚೇರಿಗೆ ಕೂಡ ಸಂದೇಶ ಕಳಿಸಿದ್ದೇನೆ, ಇನ್ನೂ ಪ್ರತಿಕ್ರಿಯೆ ಬಂದಿಲ್ಲ. ಅನುದಾನಗಳ ಬಗ್ಗೆ ಗೊತ್ತಿದ್ದರೂ ಯಾಕೆ ಕೇಂದ್ರ ಯೋಜನೆಯನ್ನು ಹೈಜಾಕ್ ಮಾಡುತ್ತಿದ್ದೀರಾ ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.
ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ ಎಂಬಂತೆ, ಮೋದಿ ದುಡ್ಡು ಸಿದ್ದರಾಮಣ್ಣನ ಜಾತ್ರೆ ಎಂಬಂತಾಗಿದೆ. ಇನ್ನು ಮುಂದೆ ಇದು ಹೀಗೆಯೇ ಮುಂದುವರೆದಲ್ಲಿ ಬಿಜೆಪಿ ಕಾರ್ಯಕರ್ತರು ಉದ್ಘಾಟನೆ ಸಮಾರಂಭದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ, ಪ್ರತಿಭಟನೆ ನಡೆಸುತ್ತಾರೆ ಎಂದು ಸಂಸದ ಪ್ರತಾಪ್ ಸಿಂಹ ಎಚ್ಚರಿಸಿದರು
ನಾಲ್ಕು ವರ್ಷಗಳಲ್ಲಿ ಸಿದ್ದರಾಮಯ್ಯ ಅವರು ಮೈಸೂರು ಭಾಗವನ್ನು ಅಭಿವೃದ್ಧಿ ಮಾಡುತ್ತಾರೆ ಎಂದು ಜನ ಆಸೆ ಹೊಂದಿದ್ದರು. ಉಳಿದಿರುವ ದಿನಗಳಲ್ಲಾದರೂ ಅದನ್ನು ನೆರವೇರಿಸುತ್ತಾರೆ ಎಂಬ ಭರವಸೆ ಇದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ












Click it and Unblock the Notifications