ಸಿಎಂ ವಿರುದ್ಧ ವೃಥಾ ಆರೋಪಕ್ಕೆ ಸಚಿವ ಮಹದೇವಪ್ಪ ಖಂಡನೆ
ಮೈಸೂರು, ಅಕ್ಟೋಬರ್ 12 : ಸಿಎಂ ವಿರುದ್ಧ ಡಿನೋಟಿಫಿಕೇಷನ್ ಆರೋಪ ವಿಚಾರ, ಮುಖ್ಯಮಂತ್ರಿಯಾದಿಯಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದರು.
83ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಹಿನ್ನಲೆಯಲ್ಲಿ ಇಂದು ಸಮ್ಮೇಳನದ ಲಾಂಛನ ಬಿಡುಗಡೆ ಮತ್ತು ಕಾರ್ಯಾಲಯ ಉದ್ಘಾಟನೆಗೆ ಮೊದಲು ಮಾಧ್ಯಮದೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯರ ವಿರುದ್ಧ ಬಿಜೆಪಿಯ ಮಾಜಿ ಸಚಿವ ಬಿ.ಜೆ.ಪುಟ್ಟಸ್ವಾಮಿ ರಾಜಕೀಯ ಷಡ್ಯಂತ್ರ ರಚಿಸಿದ್ದಾರೆ. ಸಿಎಂ ಸರಳ ಸಜ್ಜನಿಕೆಯ ವ್ಯಕ್ತಿ ವಿನಾಕಾರಣ ಭ್ರಷ್ಟಾಚಾರದ ಆರೋಪ ಮಾಡಲಾಗುತ್ತಿದೆ. ಸಿಎಂ ಇದುವರೆಗೂ ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಮಳೆ ಹಾನಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ಮಳೆ ನಿಂತ ನಂತರ ಎಲ್ಲ ನಗರದ ರಸ್ತೆಯ ಗುಂಡಿಗಳನ್ನು ಮುಚ್ಚಲಿದ್ದೇವೆ ಎಂದರು. ಶ್ರೀನಿವಾಸ್ ಪ್ರಸಾದ್ ಗೆ ಟಾಂಗ್ ನೀಡಿದ ಅವರು ಚುನಾವಣೆಯಲ್ಲಿ ಸೋಲಿಸಲು ಗೆಲ್ಲಿಸಲು ಇವರ್ಯಾರು? ಇವರ ಶಕ್ತಿ ಕಳೆದ ಚುನಾವಣೆಯಲ್ಲಿ ಜನರಿಗೆ ತಿಳಿದಿದೆ. ಮುಂಬರುವ ಚುನಾವಣೆಯಲ್ಲಿ ಜನರು ನಮ್ಮನ್ನು ಬೆಂಬಲಿಸುವ ವಿಶ್ವಾಸವಿದೆ ಎಂದರು.
ಬಿಜೆಪಿ ಯವರು ಸೋಲುವ ಭೀತಿಯಲ್ಲಿ ಆಧಾರರಹಿತ ಆರೋಪ ಮಾಡ್ತಿದ್ದಾರೆ. ಡಾ ಯತೀಂದ್ರ ಸಿದ್ದರಾಮಯ್ಯ ವಿರುದ್ಧದ ಆರೋಪಕ್ಕೆ ಯಾವುದೇ ಹುರುಳಿಲ್ಲ ಎಂದರು. ಸಿದ್ದರಾಮಯ್ಯ ವಿರುದ್ಧ ಶ್ರೀನಿವಾಸ್ ಪ್ರಸಾದ್ ,ಜಿ ಟಿ ಡಿ ಹಾಗೂ ವಿಶ್ವನಾಥ್ ಒಂದಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಹಿಂದೆಯಿಂದಲೂ ಇದೇ ರೀತಿ ನಡೆದುಕೊಂಡು ಬಂದಿದೆ, ಚಾಮುಂಡೇಶ್ವರಿ ಬೈ ಎಲೆಕ್ಷನ್ ನಲ್ಲಿ ಎಲ್ಲಾ ದುಷ್ಟಶಕ್ತಿಗಳು ಸೇರಿ ಸಿದ್ದರಾಮಯ್ಯನವರನ್ನು ಸೋಲಿಸಲು ನಿಂತಿದ್ದರು. ಆದರೆ ಕ್ಷೇತ್ರದ ಜನತೆ ಅವರ ಕೈ ಹಿಡಿದಿದೆ. ಈ ಭಾರಿಯೂ ಕೂಡ ಜನ ಸಿದ್ದರಾಮಯ್ಯ ಕೈ ಹಿಡಿಯಲಿದ್ದಾರೆ ಎಂದರು.
-
ಕರ್ನಾಟಕದಲ್ಲಿ ಜೀವ ಬಲಿ ಪಡೆಯುತ್ತಿರುವ ಖಾಸಗಿ ಬಸ್ಗಳು: 6 ವರ್ಷಗಳಲ್ಲಿ 3,823 ಅಪಘಾತ ಪ್ರಕರಣಗಳು ವರದಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications