ಸಿದ್ದರಾಮಯ್ಯ ಉಪಕಾರ ಸ್ಮರಣೆ ಇಲ್ಲದ ದುರಹಂಕಾರದ ಮನುಷ್ಯ: ಶ್ರೀನಿವಾಸ್ ಪ್ರಸಾದ್
ಮೈಸೂರು, ನವೆಂಬರ್ 14 : ಒಂದು ಕಾಲದಲ್ಲಿ ಅಂಗಲಾಚಿಕೊಂಡು ನನ್ನ ಮನೆಗೆ ಬಂದಿದ್ದ ಸಿದ್ದರಾಮಯ್ಯ ಇದೀಗ ದರ್ಪದಿಂದ ವರ್ತಿಸುತ್ತಿದ್ದಾರೆ ಎಂದು ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್ ಹರಿಹಾಯ್ದರು.
ಕೆ.ಆರ್.ನಗರದಲ್ಲಿ ನಡೆದ ತಾಲೂಕು ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ಬಿಜೆಪಿ ಮುಖಂಡ ಹೊಸಹಳ್ಳಿವೆಂಕಟೇಶ್ ಬೆಂಬಲಿಗರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಾಮುಂಡೇಶ್ವರಿ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸುವ ಏಕೈಕ ಉದ್ದೇಶದಿಂದ ಸಿದ್ದರಾಮಯ್ಯ ನನ್ನ ಮನೆಗೆ ಬಂದು ಚುನಾವಣಾ ಪ್ರಚಾರಕ್ಕೆ ಕರೆದುಕೊಂಡು ಹೋಗಿ ಗೆಲುವು ಸಾಧಿಸಿ ರಾಜಕೀಯ ಪುನರ್ ಜನ್ಮ ಪಡೆದುಕೊಂಡರು. ಆದರೆ ಅದನ್ನೆಲ್ಲ ಮರೆತು ದೌಲತ್ತಿನಿಂದ ನಡೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭಾಷಣದುದ್ದಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಕಿಡಿಕಾರಿದ ಅವರು, ಉಪಕಾರ ಸ್ಮರಣೆ ಇಲ್ಲದ ದುರಂಹಾಕರದ ಮನೋಭಾವನೆಯಿಂದ ಕೂಡಿರುವ ಸಿದ್ದರಾಮಯ್ಯ ಅವರು ಅಧಿಕಾರಕ್ಕಾಗಿ ಕಂಡವರ ಕಾಲು ಹಿಡಿಯುವ ಛಾತಿ ಮೈಗೂಡಿಸಿಕೊಂಡಿದ್ದು, ಮುಖ್ಯಮಂತ್ರಿಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಮುಂಬರುವ ಚುನಾವಣೆಯಲ್ಲಿ ರಾಜ್ಯದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ನಂತರ ಹಿರಿಯ ರಾಜಕೀಯ ಮುತ್ಸದ್ದಿ ಎಸ್.ಎಂ.ಕೃಷ್ಣ, ಕಾಂಗ್ರೆಸ್ ನ ಹಿರಿಯ ತಲೆಯಾಳು ಎಚ್.ವಿಶ್ವನಾಥ್ ಸೇರಿದಂತೆ ಇತರೆ ಘಟಾನುಘಟಿ ನಾಯಕರುಗಳು ಪಕ್ಷ ತೊರೆದಿದ್ದಾರೆ. ಸದಾ ಸ್ವಜನ ಪಕ್ಷಪಾತ ಮಾಡಿಕೊಂಡು ತನಗೆ ಸಹಾಯ ಮಾಡಿದವರನ್ನು ಮರೆಯುತ್ತಿರುವ ಅವರನ್ನು ನಾಡಿನ ಜನತೆ ಕ್ಷಮಿಸುವುದಿಲ್ಲ ಎಂದರು.
ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ಸಂಸ್ಕೃತಿ ಇಲ್ಲದ ಸಚಿವರಾಗಿದ್ದು, ತನ್ನ ಖಾತೆಯ ಕೆಲಸ ಮಾಡುವ ಬದಲು ಸಿದ್ದರಾಮಯ್ಯನ ಇಷ್ಟ ಕಷ್ಟಗಳನ್ನು ಪೂರೈಸುವ ಸೇವಕನಾಗಿದ್ದಾನೆ ಇಂತಹವರಿಂದ ರಾಜ್ಯದ ಅಭಿವೃದ್ದಿ ಸಾಧ್ಯವಿಲ್ಲ ಎಂದು ಕಿಡಿಕಾರಿದರು.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್











Click it and Unblock the Notifications