ಮೈಸೂರಿನ ಅಧಿಕಾರಿಗಳಿಗೆ ಗುಟುರು ಹಾಕಿದ ಸಿದ್ದರಾಮಯ್ಯ
ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಶನಿವಾರ ನಡೆದ ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ
ಮೈಸೂರು, ಮೇ 20: 'ಮೊದಲು ಕೆಲಸ ಮಾಡ್ರಿ. ಆಮೇಲೆ ಸಬೂಬು ಹೇಳುವುದನ್ನು ಕಲಿಯಿರಿ' - ಹೀಗೆಂದು ಹೇಳಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ.
ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಶನಿವಾರ ನಡೆದ ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಹೀಗೆ ಅಧಿಕಾರಿಗಳ ಕಡೆಗೊಂದು ಗುಟುರು ಹಾಕಿದರು.

ಸಿದ್ದರಾಮಯ್ಯ, ಜನಸಂಪರ್ಕ ಸಭೆ ಮಾಡಿ ಬಹಳ ದಿನಗಳೇ ಆಗಿತ್ತು. ನಾನು ಮೈಸೂರಿಗೆ ಬಂದಿದ್ದ ಸಮಯದಲ್ಲಿ ನೂರಾರು ಜನರು ಅರ್ಜಿ ಕೊಟ್ಟಿದ್ದರು.
ಅಧಿಕಾರಿಗಳು ಜನರನ್ನು ಪ್ರೀತಿಯಿಂದ ಮಾತನಾಡಿಸಬೇಕು. ಈ ಕೆಲಸ ಆಗಲ್ಲ ಎಂದು ಹೇಳುವಂತಿಲ್ಲ. ಜನರ ಕೆಲಸ ವಿಳಂಬ ಮಾಡುವುದೇ ದೊಡ್ಡ ಭ್ರಷ್ಟಾಚಾರ. ನಾವೆಲ್ಲಾ ಇರುವುದು ಜನರಿಗೋಸ್ಕರ ಎಂದು ಹೇಳಿದರು. ತಾಲೂಕು ಕಚೇರಿಯಲ್ಲಿ ತುಂಬಾ ಸಮಸ್ಯೆಯಿದೆ. ಸರ್ವೆ ಸಮಸ್ಯೆಯೂ ತುಂಬಾ ಇದೆ. ರೈತರಿಗೆ ಬೇಗ ಕೆಲಸ ಮಾಡಿಕೊಡುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ ಎಂದು ಬೇಸರಿಸಿದರು.
ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ ಸಿದ್ದರಾಮಯ್ಯ, ಯಾವ ಇಲಾಖೆಯಲ್ಲಿ ಏನೇನು ಸಮಸ್ಯೆ ಇದೆ ಅವುಗಳನ್ನು ಪಟ್ಟಿ ಮಾಡಿ. ಸಮಸ್ಯೆಗಳನ್ನು ಪರಿಹರಿಸಲು ಮಾಡಲು ಪ್ರಯತ್ನ ಮಾಡಿ. ಕುದುರೆಗೆ ಕೋಡು ಕಟ್ಟಿರುವ ಹಾಗೆ ಇದು ಆಗುವುದಿಲ್ಲ ಎಂದು ಹೇಳುವಂತಿಲ್ಲ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಖಡಕ್ ಎಚ್ಚರಿಕೆ ಕೊಟ್ಟರು.
ಸಭೆಯಲ್ಲಿ ವರುಣಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಡಾ.ಯತೀಂದ್ರ, ಜಿಲ್ಲಾ ಮತ್ತು ವಿಭಾಗೀಯ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಭಾಗಿಯಾಗಿದ್ದರು
{promotion-urls}
-
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications