ಮೈಸೂರಿನಲ್ಲಿ ಟ್ರಿಣ್-ಟ್ರಿಣ್ ಸೈಕಲ್ ಯೋಜನೆಗೆ ಸಿದ್ದರಾಮಯ್ಯ ಚಾಲನೆ
ಮೈಸೂರು, ಜೂನ್ 04 : ಹಲವು ದಿನಗಳಿಂದ ಮುಂದೂಡುತ್ತಲೇ ಬಂದಿದ್ದ ದೇಶದ ಮೊದಲ ಸಾರ್ವಜನಿಕ ಬೈಸಿಕಲ್ ಹಂಚಿಕೆ (ಪಿಬಿಎಸ್) ಯೋಜನೆ ಟ್ರಿಣ್ ಟ್ರಿಣ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿನ ಜಯಚಾಮರಾಜೇಂದ್ರ ಒಡೆಯರ್ ವೃತ್ತದ ಬಳಿ ಸೈಕಲ್ ತುಳಿಯುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಸಾರ್ವಜನಿಕ ಸೈಕಲ್ ಬಳಕೆ ವ್ಯವಸ್ಥೆಯನ್ನು ಲೋಕಾರ್ಪಣೆ ಮಾಡಲಾಗಿದೆ. 1961ರಲ್ಲಿ ನಾನು ವಿದ್ಯಾಭ್ಯಾಸ ಮಾಡುವಾಗ ಮೈಸೂರಿನಲ್ಲಿ ಸೈಕಲ್ ನಲ್ಲೇ ಓಡಾಡುತ್ತಿದ್ದೆ ಎಂದು ಬಾಲ್ಯದ ನೆನಪುಗನ್ನು ಮೆಲುಕು ಹಾಕಿದರು.[ಮೈಸೂರಿನಲ್ಲಿ ಪ್ರವಾಸಿಗರಿಗೆ ಬಾಡಿಗೆ ಸೈಕಲ್, ಕೇಳಲಿದೆ ಟ್ರಿಣ್-ಟ್ರಿಣ್]

ಮೈಸೂರು ಸುಂದರವಾದ ನಗರ. ಈ ನಗರದ ಪರಿಸರ, ಸೌಂದರ್ಯ ಕಾಪಾಡುವುದು ಅವಶ್ಯ. ನಗರದಲ್ಲಿ 12 ಲಕ್ಷ ಜನಸಂಖ್ಯೆ ಇದ್ದು, ಆರೂವರೆ ಲಕ್ಷ ವಾಹನಗಳಿವೆ. ಜಗತ್ತಿನ 600 ನಗರಗಳಲ್ಲಿ ಸಾರ್ವಜನಿಕ ಸೈಕಲ್ ಬಳಕೆ ವ್ಯವಸ್ಥೆ ಇದೆ.
ವಾಹನಗಳ ದಟ್ಟಣೆ, ವಾಯುಮಾಲಿನ್ಯದ ಹಿನ್ನೆಲೆಯಲ್ಲಿ ನಾವು ಹೆಚ್ಚಾಗಿ ಪರಿಸರ ಸ್ನೇಹಿ ವಾಹನಗಳನ್ನು ಸಂಚಾರಕ್ಕೆ ಬಳಸುವುದು ಸೂಕ್ತ. ನಾನು ಬಹಳ ವರ್ಷ ಸೈಕಲ್ ತುಳಿದಿದ್ದೇನೆ.
ಮೈಸೂರಿನಿಂದ 20 ಕಿ.ಮೀ.ದೂರ ಇರುವ ನಮ್ಮೂರಿಗೆ ಪ್ರತಿ ಶನಿವಾರ ಸೈಕಲ್ ನಲ್ಲೇ ಹೋಗಿ ಬರುತ್ತಿದ್ದೆ. ಹೀಗಾಗಿ ಸೈಕಲ್ ತುಳಿಯುವ ಅಭ್ಯಾಸ ನನಗಿದೆ ಎಂದರು.

ಮೈಸೂರಿನಲ್ಲಿ ಸಾರ್ವಜನಿಕ ಸೈಕಲ್ ಬಳಕೆ ವ್ಯವಸ್ಥೆ ಜಾರಿಗೆ ತಂದಿರುವುದು ಬಹಳ ಒಳ್ಳೆಯದು. ನಗರದ ಜನರಿಗೆ ಇದು ಒಳ್ಳೆಯ ಕೊಡುಗೆ. ಬೆಂಗಳೂರು ನಗರದಲ್ಲೂ ಈ ವ್ಯವಸ್ಥೆ ಜಾರಿಗೆ ತರುವ ಆಲೋಚನೆ ಇದೆ ಎಂದು ಹೇಳಿದರು.
ಈ ಸಂದರ್ಭ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಶಾಸಕ ಸೋಮಶೇಖರ್, ಪಾಲಿಕೆಯ ಮೇಯರ್ ಎಂ.ಜೆ.ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
-
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications