'ನನಗೆ ಮರಾಠಿ ಬರೋಲ್ಲ ಕ್ಷಮಿಸಿ' ಎಂದ ಸಿಎಂ ಕನ್ನಡಿಗರ ಕ್ಷಮೆ ಕೇಳಲಿ: ಸಿಂಹ
ಮೈಸೂರು, ಏಪ್ರಿಲ್ 29: ಬೆಳಗಾವಿಯಲ್ಲಿ ನನಗೆ ಮರಾಠಿ ಬರೋಲ್ಲ. ಕ್ಷಮಿಸಿ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡಿದ್ದಾರೆ. ಇದು ಕನ್ನಡಿಗರಿಗೆ ಮಾಡಿದ ಅವಮಾನ. ಸಿದ್ದರಾಮಯ್ಯ ಈ ಕೂಡಲೆ ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಮೈಸೂರು-ಮಡಿಕೇರಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಇನ್ನು ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಮಾತನಾಡಿದ ಸಿಂಹ, "ಸಿಎಂ ಸಿದ್ದರಾಮಯ್ಯನವರಿಗೆ ಕನ್ನಡದ ಅರಿವಿಲ್ಲ. ಕಾಂಗ್ರೆಸ್ ಪಕ್ಷದವರಿಗೆ ಪ್ರಣಾಳಿಕೆ, ಪ್ರನಾಳಿಕೆ ಈ ಪದಗಳಿಗೆ ವ್ಯತ್ಯಾಸವೇ ಗೊತ್ತಿಲ್ಲ. ಇನ್ನೊಂದೆಡೆ ಬೆಳಗಾವಿಯಲ್ಲಿ ನಿಂತು ಮರಾಠಿ ಪ್ರೇಮ ಮೆರೆಯುತ್ತಾರೆ. ಇಲ್ಲಿ ಕನ್ನಡ ಅಸ್ಮಿತೆ ಬಗ್ಗೆ ಮಾತನಾಡುತ್ತಾರೆ. ಇವರದ್ದು ಕೇವಲ ರಾಜಕೀಯಕ್ಕಾಗಿ ಕನ್ನಡ ಪ್ರೇಮ," ಎಂದು ಅವರು ಕಿಡಿಕಾರಿದರು.

ಮೈಸೂರು ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು, "ನಿಜವಾದ ಕನ್ನಡ ಪ್ರೇಮ ಇದ್ದಿದ್ದರೆ ಮುಖ್ಯಮಂತ್ರಿ ಬೆಳಗಾವಿಯಲ್ಲಿ ಮರಾಠಿಗರ ಕ್ಷಮೆ ಕೇಳುತ್ತಿರಲಿಲ್ಲ. ರಾಜ್ಯದ ಜನರಿಗೆ ಸಿದ್ದರಾಮಯ್ಯರ ಬೋಗಸ್ ಕನ್ನಡ ಪ್ರೇಮ ಅರ್ಥವಾಗಿದೆ. ಈ ಚುನಾವಣೆಯಲ್ಲಿ ಸಿದ್ದರಾಮಯ್ಯರಿಗೆ ಕನ್ನಡಿಗರೇ ಪಾಠ ಕಲಿಸುತ್ತಾರೆ," ಎಂದು ಅವರು ತಿಳಿಸಿದ್ದಾರೆ.












Click it and Unblock the Notifications