CM Siddaramaiah: ಮೈಸೂರು ಪ್ರವಾಸದಲ್ಲಿ ಸಿಎಂ: ಸಾಂಸ್ಕೃತಿಕ ನಗರಿಯಿಂದಲೇ ಪ್ರಚಾರ ಶುರು!
ಮೈಸೂರು ಏಪ್ರಿಲ್ 1: ಮೈಸೂರು ಲೋಕಸಭಾ ಚುನಾವಣೆಯ ಸಮರ ಜೋರಾಗಿದೆ. ಸಾಂಸ್ಕೃತಿಕ ನಗರಿಯಿಂದ ಸಿಎಂ ಸಿದ್ದರಾಮಯ್ಯ ಪ್ರಚಾರವನ್ನು ಇಂದು ಆರಂಭಿಸಲಿದ್ದಾರೆ. ಮಾತ್ರವಲ್ಲದೆ ಮೈಸೂರಿನಲ್ಲಿ ಮೂರು ದಿನದ ಪ್ರವಾಸ ಕೈಗೊಂಡಿದ್ದಾರೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಈ ಬಾರಿ ಬಿಜೆಪಿ ರಾಜಮನೆತನದ ಯದುವೀರ್ ಒಡೆಯರ್ ಅವರಿಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ ಪಕ್ಷ ಎಂ ಲಕ್ಷ್ಮಣ್ ಅವರನ್ನು ಅಖಾಡಕ್ಕಿಳಿಸಿದೆ. ಈಗಾಗಲೇ ಮೈಸೂರಿಗೆ ತೆರಳಿರುವ ಅವರು ಮದ್ಯಾಹ್ನ 3 ಗಂಟೆಗೆ ಟಿ ನರಸೀಪುರ ಕ್ಷೇತ್ರದಲ್ಲಿ ಪ್ರಚಾರವನ್ನು ಆರಂಭಿಸಲಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, '20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ಚಾಮರಾಜನಗರ ಹಾಗೂ ಮೈಸೂರಿನಲ್ಲೂ ನಾವೇ ಗೆಲ್ಲುತ್ತೇವೆ. ಸೋಲಿನ ಭೀತಿಯಿಂದ 28 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಬಿಜೆಪಿ ಅವರು ಸುಳ್ಳು ಹೇಳುತ್ತಿದ್ದಾರೆ' ಎಂದು ಸಿದ್ದರಾಮಯ್ಯ ಹೇಳಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ನಾಮಪತ್ರ ಸಲ್ಲಿಕೆಯಲ್ಲೂ ಸಿಎಂ ಪಾಲ್ಗೊಳ್ಳಲಿದ್ದಾರೆ. ಸಂಜೆ 6ಕ್ಕೆ ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ.
ಮೈಸೂರು ಜಿಲ್ಲೆ ಸಾಂಸ್ಕೃತಿಕವಾಗಿ, ಶೈಕ್ಷಣಿಕವಾಗಿ ಹಿಂದಿನಿಂದಲೂ ಉನ್ನತ ಮಟ್ಟದಲ್ಲಿರುವ ಜಿಲ್ಲೆ. ಇನ್ನು ದಕ್ಷಿಣದ ಕಾಶ್ಮೀರ ಎಂದೇ ಖ್ಯಾತವಾಗಿರುವ ಕೊಡಗು ಜಿಲ್ಲೆ ಪ್ರಾಕೃತಿಕ ಸೌಂದರ್ಯದ ಖನಿ. ವಿಧಾನಸಭಾ ಚುನಾವಣೆಯ ಅದ್ಭುತ ಗೆಲುವಿನಿಂದಾಗಿ ಉತ್ಸಾಹದಿಂದಿರುವ ಕಾಂಗ್ರೆಸ್ ಪಕ್ಷ ಕಳೆದುಹೋಗಿರುವ ತನ್ನ ಗತ ವೈಭವವನ್ನು ಇಲ್ಲಿ ಮರಳಿ ಪಡೆಯುವ ಪ್ರಯತ್ನದಲ್ಲಿದೆ.
ಹಿಂದಿನ ಚುನಾವಣೆಯ ಲೆಕ್ಕಾಚಾರಗಳನ್ನು ನೋಡುವುದಾದರೆ, 2014ರಲ್ಲಿ ಅನಿರೀಕ್ಷಿತವಾಗಿ ಬಿಜೆಪಿ ಟಿಕೆಟ್ ಪಡೆದ ಪತ್ರಕರ್ತ ಪ್ರತಾಪ್ ಸಿಂಹ್ ಅವರು ಅಡಗೂರು ಎಚ್ ವಿಶ್ವನಾಥ್ ವಿರುದ್ಧ 31 608 ಮತಗಳ ಅಂತರದಿಂದ ಜಯಭೇರಿ ಬಾರಿಸಿ ಸಂಸತ್ ಪ್ರವೇಶಿಸಿದರು. ಆ ಬಾರಿ ಪ್ರತಾಪ್ ಸಿಂಹ ಅವರು 503908 ಮತಗಳನ್ನು ಪಡೆದರೆ, ಕಾಂಗ್ರೆಸ್ ನ ಅಡಗೂರು ಎಚ್ ವಿಶ್ವನಾಥ್ 472300 ಮತಗಳನ್ನು ಪಡೆದಿದ್ದರು. ಇನ್ನು ಜೆಡಿಎಸ್ ನ ಚಂದ್ರಶೇಖರಯ್ಯ ಅವರು 138587 ಮತಗಳನ್ನು ಪಡೆದಿದ್ದರು.
2019ರ ಚುನಾವಣೆಯಲ್ಲಿ ಬಿಜೆಪಿಯ ಪ್ರತಾಪ್ ಸಿಂಹ ಅವರು 688974 ಮತಗಳನ್ನು ಪಡೆದರೆ, ಬಿಜೆಪಿಯಿಂದ ಕಾಂಗ್ರೆಸ್ ಸೇರಿ ಟಿಕೆಟ್ ಗಿಟ್ಟಿಸಿಕೊಂಡಿದ್ದ ಮೈತ್ರಿ ಅಭ್ಯರ್ಥಿ ಸಿಎಚ್ ವಿಜಯಶಂಕರ್ ಅವರು 550327 ಮತಗಳನ್ನು ಪಡೆದಿದ್ದರು.ಇನ್ನು ಬಿಎಸ್ಪಿಯಿಂದ ಕಣಕ್ಕಿಳಿದಿದ್ದ ಡಾ ಬಿ ಚಂದ್ರು ಪಡೆದದ್ದು ಕೇವಲ 24597 ಮತಗಳು.
ಸಿಎಂ ತವರು ಜಿಲ್ಲೆ ಮತ್ತು ಕಳೆದ ವಿಧಾನಸಭಾ ಚುನಾವಣೆಯಲ್ಲಿ 5 ಸ್ಥಾನಗಳನ್ನು ಗೆದ್ದಿರುವುದು ಕಾಂಗ್ರೆಸ್ ಗೆ ಪ್ಲಸ್ ಪಾಯಿಂಟ್ ಆಗಿದ್ದರೂ ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ಕಾಂಗ್ರೆಸ್ ಗೆ ಗೆಲುವು ಕೂಡ ಸುಲಭ ಸಾಧ್ಯವಿಲ್ಲ. ಹೀಗಾಗಿ ಈ ಬಾರಿ ಮತದಾರರ ಮನ ಯಾರ ಕಡೆಗೆ ವಾಲಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications