ವರ್ಗಾವಣೆ ದಂಧೆ ಆರೋಪಕ್ಕೆ ವಿಧಾನಸಭೆಯಲ್ಲೇ ತಕ್ಕ ಉತ್ತರ ಕೊಡುತ್ತೇನೆ-ಸಿಎಂ ಸಿದ್ದರಾಮಯ್ಯ
ಮೈಸೂರು, ನವೆಂಬರ್ 19: ಎಚ್.ಡಿ.ಕುಮಾರಸ್ವಾಮಿ ವರ್ಗಾವಣೆ ದಂಧೆ ಆರೋಪಕ್ಕೆ ವಿಧಾನಸಭೆಯಲ್ಲಿ ತಕ್ಕ ಉತ್ತರ ಕೊಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ವಿಡಿಯೋದಲ್ಲಿ ಚರ್ಚೆಯಾಗಿರುವುದಕ್ಕೂ, ನೆನ್ನೆ ಇನ್ಸ್ಪೆಕ್ಟರ್ ವರ್ಗಾವಣೆಯಾಗಿರುವ ಪ್ರಕ್ರಿಯೆಗೂ ಯಾವುದೇ ಸಂಬಂಧವಿಲ್ಲ. ವಿಡಿಯೋದಲ್ಲಿ ಮೈಸೂರು ತಾಲೂಕು ಬಿಇಒ ವಿವೇಕಾನಂದ ಅವರ ಜೊತೆಯಲ್ಲಿ ಮಾತನಾಡಲಾಗಿದೆ. ನಿನ್ನೆ ಚಾಮರಾಜ ಕ್ಷೇತ್ರದ ಠಾಣೆಗೆ ವರ್ಗಾವಣೆಗೊಂಡಿರುವುದು ಇನ್ಸ್ಪೆಕ್ಟರ್ ವಿವೇಕಾನಂದ ಆಗಿದ್ದಾರೆ. ಈ ವರ್ಗಾವಣೆಗೂ ಬಿಇಒ ಅವರೊಂದಿಗಿನ ಮಾತುಕತೆ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

ಕೌರವ ಸಂಸ್ಕೃತಿ ರಾಜಕಾರಣ ಬೇಡ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕುಮಾರಸ್ವಾಮಿ ಹೇಳಿದ್ದಕ್ಕೆ ಉತ್ತರ ಕೊಡಬೇಕಿಲ್ಲ. ಪೆನ್ಡ್ರೈವ್ನಲ್ಲಿ ದಾಖಲೆಗಳಿವೆ ಎನ್ನುವ ಅವರು ತೆಗೆದು ತೋರಿಸಲು ಹೇಳಿ. ವಿಧಾನಸಭೆಯಲ್ಲಿ ಏಕೆ ಅದನ್ನು ಬಹಿರಂಗಪಡಿಸಲಿಲ್ಲ. ಬೇಡ ಅಣ್ಣಾ ಎಂದು ಬಿಟ್ರಾ? ಅದಕ್ಕೆ ತೋರಿಸಲಿಲ್ವಾ ಎಂದು ವ್ಯಂಗ್ಯವಾಡಿದರು.
ಕುಮಾರಸ್ವಾಮಿ ಅವರು ಅಧಿಕಾರ ಹಿಡಿಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಹತಾಶರಾಗಿ ವರ್ಗಾವಣೆ ದಂಧೆ ಹೇಳಿಕೆ ನೀಡುತ್ತಿದ್ದಾರೆ. ಅವರ ಹೊಟ್ಟೆ ಉರಿ, ಹೊಟ್ಟೆ ಕಿಚ್ಚು, ಅಸೂಯೆ, ದ್ವೇಷ ಮನೋಭಾವವೇ ಇದಕ್ಕೆ ಕಾರಣ. ಹಿಂದೆ 37 ಸ್ಥಾನದಲ್ಲಿ ಗೆಲುವು ಸಾಧಿಸಿದ್ದ ಜೆಡಿಎಸ್ ಈ ಬಾರಿ 19ಕ್ಕೆ ಕುಸಿದಿದ್ದೇಕೆ. ಅವರ ಪಂಚರತ್ನ ಯಾತ್ರೆಗೆ ಜನ ಏಕೆ ಬೆಲೆ ಕೊಟ್ಟಿಲ್ಲ. ಅವರು ಹತಾಶೆಗೆ ಒಳಗಾಗಲು ಈ ಅಂಶಗಳೇ ಕಾರಣವಾಗಿವೆ ಎಂದು ಆರೋಪಿಸಿದರು.
ಈಗ ಚುನಾವಣೆ ನಡೆದರೂ ಬಿಜೆಪಿ ಗೆಲ್ಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಆದರೆ ಸೋಲು ಗೆಲುವಿನ ಬಗ್ಗೆ ಜನರು ತೀರ್ಮಾನ ನೀಡುತ್ತಾರೆ. ಬಿಜೆಪಿಯವರು ಕನಸು ಕಾಣುತ್ತಿದ್ದಾರೆ. ಅವರ ವಿಶ್ವಾಸವೇ ನಿಜವಾಗಿದ್ದರೆ ರಮೇಶ್, ಯತ್ನಾಳ್, ಬೆಲ್ಲದ್ ಏಕೆ ಎದ್ದು ಹೋದರು..? ಈಗ ಮಗನನ್ನೇ ರಾಜ್ಯಾಧ್ಯಕ್ಷ ಮಾಡಿದ್ದಾರೆ. ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನನ್ನಾಗಿ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿಯಲ್ಲಿ ಅಸಮಾಧಾನ ಉಂಟಾಗಲಿದೆ. ಬಿಜೆಪಿಯ ಪರಿಸ್ಥಿತಿ ಏನಾಗಲಿದೆ ಎಂಬುದನ್ನು ನೀವೇ ಕಾದುನೋಡಿ ಎಂದರು.
-
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ












Click it and Unblock the Notifications