ಪ್ರಧಾನಿ ಮೋದಿ ಹೇಳಿದ ಅಚ್ಛೇ ದಿನ ಬರಲೇ ಇಲ್ಲ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ
ಬಿಜೆಪಿ ಸರಕಾರ ಹಿಂದುಳಿದವರು, ದಲಿತರು, ಶ್ರಮಿಕ ವರ್ಗ ಶಕ್ತಿ ತುಂಬುವ ನಿಟ್ಟಿನಲ್ಲಿ ಯಾವುದೇ ಜನಪ್ರಿಯ ಯೋಜನೆ ನೀಡಿಲ್ಲ. ಮೋದಿಯವರು ಬರಲಿದೆ ಎಂದು ಹೇಳಿದ ಒಳ್ಳೆಯ (ಅಚ್ಛೆ) ದಿನ ಇದೇನಾ ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಚಾಮರಾಜನಗರ ಲೋಕಸಭಾ ಕ್ಷೇತ್ರದ ನಂಜನಗೂಡಿನಲ್ಲಿ ನಡೆದ ಬೃಹತ್ ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಯುವಕರು, ಉದ್ಯೋಗ, ಮಹಿಳೆಯರು, ಶೂದ್ರರು, ದಲಿತರು, ಶ್ರಮಿಕರು, ದುಡಿಯುವವರ ಪರವಾದ ಯೋಜನೆಯನ್ನೇ ನೀಡದ ಬಿಜೆಪಿಯನ್ನು ತಿರಸ್ಕರಿಸಿ. ಈ ವರ್ಗಗಳಿಗೆ ವಿಶೇಷ ಆಸಕ್ತಿಯಿಂದ ಯೋಜನೆ ನೀಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದರು.

ಸಾಲು ಪ್ರಶ್ನೆ ಕೇಳಿದ ಸಿದ್ದರಾಮಯ್ಯ
ಚುನಾವಣಾ ಬಾಂಡ್ ಮೂಲಕ ನೀವು ಸಂಗ್ರಹಿಸಿದ 7600 ಕೋಟಿ ಹಣಕ್ಕೆ ತೆರಿಗೆ ಕಟ್ಟಿದ್ದೀರಾ ಮೋದಿಯವರೇ? ಈಗ ಯಾರನ್ನು ಜೈಲಿಗೆ ಕಳುಹಿಸಬೇಕು ಹೇಳಿ ಮೋದಿಯವರೇ ಎಂದು ಪ್ರಶ್ನಿಸಿದರು.
ಭ್ರಷ್ಟರನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ಮೋದಿಯವರು ಭಾಷಣ ಮಾಡಿದ್ದಾರೆ. ಆದರೆ, ದೇಶದಲ್ಲಿದ್ದ ಭ್ರಷ್ಟರೆಲ್ಲಾ ಈಗ ಯಾವ ಪಕ್ಷದಲ್ಲಿದ್ದಾರೆ ಎಂದು ಕೇಳಿದರು.
"ಐಟಿ, ಸಿಬಿಐ ದುರುಪಯೋಗ ಪಡೆಸಿಕೊಂಡು ಇಬ್ಬರು ಮುಖ್ಯಮಂತ್ರಿಗಳಾದ ಕೇಜ್ರಿವಾಲ್ ಮತ್ತು ಹೇಮಂತ್ ಸುರೇನ್ ಅವರನ್ನು ಜೈಲಿಗೆ ಕಳುಹಿಸಿದ್ದಾರೆ. ₹7600 ಕೋಟಿ ಹಣಕ್ಕೆ ಒಂದು ಪೈಸೆ ತೆರಿಗೆ ಕಟ್ಟಿಲ್ಲವಲ್ಲಾ ಈ ಹಗರಣಕ್ಕಾಗಿ ಯಾರನ್ನು ಜೈಲಿಗೆ ಕಳುಹಿಸಬೇಕು ಹೇಳಿ? ಎಂದರು.
ಬಿಜೆಪಿಗೆ ಮತ ಹಾಕುವ ಬಡವರೂ ಸೇರಿ ಇಡೀ ರಾಜ್ಯದ ಬಡವರು ಹೊಟ್ಟೆ ತುಂಬ ಊಟ ಮಾಡಲಿ ಅಂತ ನಾವು ಅಕ್ಕಿ ಕೊಟ್ಟೆವು. ಈ ಬಿಜೆಪಿಯವರು ಬಂದು ಕತ್ರಿ ಹಾಕಿಬಿಟ್ಟರು. ಈಗ ನಾವು ಮತ್ತೆ ಅಧಿಕಾರಕ್ಕೆ ಬಂದು ಅಕ್ಕಿ ಕೊಡುತ್ತಿದ್ದೇವೆ. ಬಿಜೆಪಿ-ಜೆಡಿಎಸ್ ಇಬ್ಬರಿಗೂ ಜನಪರವಾದ ಸಿದ್ಧಾಂತ ಮತ್ತು ಬದ್ಧತೆ ಇಲ್ಲದಿರುವುದರಿಂದ ನಾಡಿನ ಜನತೆ ಎರಡೂ ಪಕ್ಷಗಳನ್ನು ತಿರಸ್ಕರಿಸಿದ್ದಾರೆ ಎಂದರು.
ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ, ಬೇಳೆ ಕಾಳು, ಅಡುಗೆ ಎಣ್ಣೆ ಬೆಲೆ ಆಕಾಶಕ್ಕೆ ಏರಿಸಿದ್ದೀರಲ್ಲಾ ಮೋದಿಯವರೇ? ಇದಾ ನಿಮ್ಮ ಅಭಿವೃದ್ಧಿ ಎಂದು ಪ್ರಶ್ನೆ ಮಾಡಿದರು.
ಮಹಾತ್ಮಗಾಂಧಿಯವರ ನೇತೃತ್ವದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ನಮ್ಮ ಕಾಂಗ್ರೆಸ್ ಪಕ್ಷ. ಬ್ರಿಟೀಷರ ವಿರುದ್ಧ ಹೋರಾಟ ಮಾಡಿ ಹುತಾತ್ಮರಾದ ಸಂಘ ಪರಿವಾರದ ಒಬ್ಬೇ ಒಬ್ಬನನ್ನು, ಬಿಜೆಪಿಯ ಒಬ್ಬ ದೇಶಕ್ಕಾಗಿ ಹುತಾತ್ಮರಾಗಿದ್ರೆ ತೋರಿಸಿ, ನಾನು ರಾಜಕೀಯ ಬಿಟ್ಟು ಬಿಡ್ತೀನಿ ಎಂದು ನೇರ ಸವಾಲು ಹಾಕಿದರು.
-
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಆದಿಚುಂಚನಗಿರಿ ಮಠಕ್ಕೆ ಇಂದು ಪ್ರಧಾನಿ ಮೋದಿ ಭೇಟಿ: ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆಗೆ ಸಕಲ ಸಿದ್ಧತೆ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ












Click it and Unblock the Notifications