ಕಪ್ಪ ನೀಡಲು ಸಿದ್ದರಾಮಯ್ಯನವರಿಂದ ದುಷ್ಟಕೂಟ ರಚನೆ: ಶ್ರೀನಿವಾಸ್ ಪ್ರಸಾದ್ ಕಿಡಿ
ಮೈಸೂರು, ಫೆಬ್ರವರಿ 17 : ಕಾಂಗ್ರೆಸ್ ಹೈಕಮಾಂಡ್ ಗೆ ಕಪ್ಪ ನೀಡುವ ಸಲುವಾಗಿ ಸಿದ್ದರಾಮಯ್ಯ ದುಷ್ಟಕೂಟ ರಚಿಸಿಕೊಂಡಿದ್ದು, ಅದರ ಮೂಲಕವೇ ಎಲ್ಲರನ್ನು ಸಮಾಧಾನ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಮತ್ತೊಮ್ಮೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆಗಮಿಸಿದ ವಿ. ಶ್ರೀನಿವಾಸ್ ಪ್ರಸಾದ್ ಮಾತನಾಡಿ, ಸಿದ್ದರಾಮಯ್ಯರ ದುಷ್ಟಕೂಟಕ್ಕೆ ದಿಗ್ವಿಜಯಸಿಂಗ್ ಮುಖ್ಯಸ್ಥರಾಗಿದ್ದಾರೆ. ತನ್ನ ಕೂಟದ ಮೂಲಕ ಹೈಕಮಾಂಡ್ ಗೆ ಕಪ್ಪ ನೀಡುತ್ತಾ ತನ್ನ ಸ್ಥಾನ ಉಳಿಸಿಕೊಂಡಿದ್ದಾರೆ. ಇಲ್ಲದಿದ್ದಲ್ಲಿ ಕಾಂಗ್ರೆಸ್ನಲ್ಲಿ ಆದ ಬೆಳವಣಿಗೆಗೆ ಸಿದ್ದರಾಮಯ್ಯ ಯಾವತ್ತೋ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕಾಗಿತ್ತು ಎಂದು ಕಿಡಿಕಾರಿದರು.[ಎಸ್ಸೆಂ ಕೃಷ್ಣ ಬಿಜೆಪಿಗೆ ಸೇರಿದರೆ ಪಕ್ಷದ ಶಕ್ತಿ ಹೆಚ್ಚಲಿದೆ: ಶ್ರೀನಿವಾಸ ಪ್ರಸಾದ್]

ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಗಳ ಹುದ್ದೆಯ ಗೌರವವೇ ಗೊತ್ತಿಲ್ಲ. ಅಂಥಹವರು ಸಿಎಂ ಆಗಿದ್ದು ರಾಜ್ಯದ ದುರದೃಷ್ಟ. ನಂಜನಗೂಡಿನ ಉಪಚುನಾವಣೆಯಲ್ಲಿ ನಾನು ಸೋತರೆ ರಾಜಕೀಯ ಸನ್ಯಾಸತ್ವ ಪಡೆಯುತ್ತೇನೆ. ನೀವು ಸೋತರೆ ರಾಜಕೀಯ ಬಿಡುತ್ತೀರಾ ಎಂದು ಸಿದ್ದರಾಮಯ್ಯನವರಿಗೆ ಸವಾಲು ಹಾಕಿದರು.
ನಂಜನಗೂಡಿನಲ್ಲಿ ಕಾಂಗ್ರೆಸ್ ಗೆಲ್ಲುತ್ತಿತ್ತು ಪ್ರಸಾದ್ ಅಲ್ಲ, ಅಂತಹ ಕಾಂಗ್ರೆಸ್ ಪಕ್ಷಕ್ಕೆ ಇಂದು 30 ಮಂದಿ ಅಭ್ಯರ್ಥಿಗಳಲ್ಲಿ ಒಬ್ಬರೂ ಆಯ್ಕೆಯಾಗುತ್ತಿಲ್ಲ. ಉಪಚುನಾವಣೆಯಲ್ಲಿ ನಿಮ್ಮ ಶಕ್ತಿ ಏನು ಅಂತ ತೋರಿಸಿ ಎಂದು ಜರಿದರು.
ಮಹದೇವಪ್ಪ ಸಿದ್ದರಾಮಯ್ಯರ ಗುಲಾಮರಾಗಿದ್ದು, ಸಿದ್ದರಾಮಯ್ಯನವರಿಂದಲೇ ಮಹದೇವಪ್ಪ ರಾಜಕೀಯದಲ್ಲಿ ಇದ್ದಾರೆ. ಅವರು ನಿಮ್ಮ ಲಾಯಲ್ಟಿಯಾಗಿರಬೇಕಿತ್ತು. ಆದರೆ ಅವರು ಗುಲಾಮರಾಗಿದ್ದಾರೆ. ಅವರಿಗೆ ಓಟು, ಹಣ, ಅಧಿಕಾರ ಎಲ್ಲವನ್ನು ಕೊಟ್ಟಿದ್ದು ಸಿದ್ದರಾಮಯ್ಯನವರೇ. ಇವರೆಲ್ಲರ ಮೂಲಕ ಹೈಕಮಾಂಡ್ ಕಿವಿ ಊದಿ ಇವರಿಲ್ಲದಿದ್ದರೇ ಕಾಂಗ್ರೆಸ್ ಇಲ್ಲ ಅನ್ನೋ ಪರಿಸ್ಥಿತಿಗೆ ತಂದಿಟ್ಟಿದ್ದಾರೆ. ಅದರ ಪರಿಣಾಮವಾಗಿ ಎಐಸಿಸಿ ದುರ್ಬಲವಾಗಿ ಹೋಗಿದೆ ಅಸಮಾಧಾನ ಗೊಂಡರು.
-
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications