ಸೋತವರಿಗೆ ಸಚಿವ ಸ್ಥಾನ ನೀಡುವುದು ಸಿಎಂ ಪರಮಾಧಿಕಾರ: ಸೋಮಶೇಖರ್
ಮೈಸೂರು, ಜನವರಿ 25: ಉಪ ಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ನೀಡುವುದು ಸಿಎಂ ಯಡಿಯೂರಪ್ಪ ಅವರ ಪರಮಾಧಿಕಾರ ಎಂದು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಮೈಸೂರಿನ ಸುತ್ತೂರಿನಲ್ಲಿ ಮಾತನಾಡಿದ ಸೋಮಶೇಖರ್, ಚುನಾವಣೆಯಲ್ಲಿ ಗೆದ್ದ ಮೇಲೆ ಯಾವಾಗ ಬೇಕಾದರೂ ಸಂಪುಟ ವಿಸ್ತರಣೆ ಮಾಡಬಹುದು, ಇಂತಹದೇ ದಿನ ಮಾಡಿ ಎಂದು ಹೇಳುವುದು ಸರಿಯಲ್ಲ ಎಂದರು.
ಉಪ ಚುನಾವಣೆಯಲ್ಲಿ ಸೋತವರಿಗೆ ಈ ಹಿಂದೆಯೇ ಚುನಾವಣೆಯಲ್ಲಿ ಸ್ಪರ್ಧಿಸುವುದು ಬೇಡ ಅಂತ ಹೇಳಿದ್ದರು. ಆಗಲೇ ಸೋಲುವ ಮುನ್ಸೂಚನೆ ದೊರೆತಿತ್ತು. ಆದರೂ ಮುಖ್ಯಮಂತ್ರಿಗಳ ಮಾತು ಕೇಳದೇ ಚುನಾವಣೆಗೆ ಸ್ಪರ್ಧಿಸಿದರು ಎಂದು ಸೋಮಶೇಖರ್ ತಿಳಿಸಿದರು.

ರಾಣೇಬೆನ್ನೂರಿನ ಆರ್.ಶಂಕರ್ ಮಾತ್ರ ಚುನಾವಣೆ ನಿಲ್ಲದೇ ತಟಸ್ಥ ನಿಲುವು ಅನುಸರಿಸಿದ್ದರು. ಅವರಿಗೆ ಮೇ ತಿಂಗಳಿನಲ್ಲಿ ಎಂಎಲ್ಸಿ ಮಾಡಿ ಸಚಿವರನ್ನಾಗಿ ಮಾಡುತ್ತಾರೆ ಎಂದು ಹೇಳಿದರು.
ಆದರೆ ಕೆಲವರು ಸೋಲುವ ಮುನ್ಸೂಚನೆ ಇದ್ದರೂ ಕೂಡಾ ಉಪ ಚುನಾವಣೆಗೆ ನಿಂತು ಸೋತಿದ್ದಾರೆ, ಅಂತವರಿಗೆ ಸಚಿವ ಸ್ಥಾನ ನೀಡಿ ಎಂದು ಕೇಳುವುದು ತಪ್ಪಾಗುತ್ತದೆ ಎಂದು ಪರೋಕ್ಷವಾಗಿ ಎಂಟಿಬಿ ನಾಗರಾಜ್ ಹಾಗೂ ಎಚ್.ವಿಶ್ವನಾಥ್ಗೆ ಮಾತಿನ ಚಾಟಿ ಬೀಸಿದರು.
ಶಾಸಕ ಎಸ್.ಟಿ.ಸೋಮಶೇಖರ್ ಅವರ ಮಾತಿಗೆ ಪ್ರತಿಕ್ರಿಯೆ ನೀಡಿರುವ ಅನರ್ಹ ಶಾಸಕ ಎಚ್.ವಿಶ್ವನಾಥ್, ""ಸಚಿವ ಸಂಪುಟದಲ್ಲಿ ನಮಗೆ ಸ್ಥಾನವಿದೆ. ಸಿಎಂ ಯಡಿಯೂರಪ್ಪ ಚುನಾವಣಾ ಪೂರ್ವವಾಗಿ ನಮಗೆ ಮಾತು ನೀಡಿದ್ದಾರೆ, ಅದರಂತೆ ನಡೆದುಕೊಳ್ಳುತ್ತಾರೆ ಅನ್ನೋ ವಿಶ್ವಾಸವಿದೆ ಎಂದು ಹೇಳಿದರು.
ಮೈಸೂರಿನ ಸುತ್ತೂರಿನಲ್ಲಿ ಮಾತನಾಡಿದ ಮಾಜಿ ಸಚಿವ ಎಚ್.ವಿಶ್ವನಾಥ್, ಯಡಿಯೂರಪ್ಪರ ಸಂಪುಟದಲ್ಲಿ ನಾನೂ ಕೂಡ ಇರ್ತಿನಿ ಅನ್ನೋ ವಿಶ್ವಾಸವ್ಯಕ್ತಪಡಿಸಿದರು.
2014 ರ ಲೋಕಸಭಾ ಚುನಾವಣೆಯಲ್ಲಿ ಅರುಣ್ ಜೇಟ್ಲಿ ಸೋತಿದ್ದರು, ಆದರೂ ಸಹ ಅವರ ಹಿರಿತನಕ್ಕೆ ಮಣೆ ಹಾಕಿ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಿ ಅವರ ಅನುಭವ ಉಪಯೋಗಿಸಿಕೊಂಡಿದ್ದಾರೆ ಎಂದರು.
ಅರುಣ್ ಜೇಟ್ಲಿ ಅದರಂತೆ ನಮ್ಮನ್ನೂ ಸಂಪುಟಕ್ಕೆ ಸೇರಿಸಿಕೊಂಡು ನಮ್ಮ ಅನುಭವ ಬಳಸಿಕೊಳ್ಳಲಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಎಚ್.ವಿಶ್ವನಾಥ್ ಸಲಹೆ ನೀಡಿದರು.
ಚುನಾವಣೆಗೆ ನಿಲ್ಲಬೇಡಿ ಎಂದಿದ್ದು ನಿಜ, ಆದರೆ ಕ್ಷೇತ್ರ ಬಿಟ್ಟು ಕೊಡುವುಕ್ಕೆ ಆಗುತ್ತಾ.? ಹಾಗಾಗಿ ಚುನಾವಣೆಗೆ ಸ್ಪರ್ಧಿಸಿದೆ, ಗೆಲುವು-ಸೋಲು ಸಹಜ ಎಂದು ಹೇಳಿದರು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications