ಕಬಿನಿಗೆ ಬಾಗಿನ ಸಮರ್ಪಿಸಿದ ಸಿಎಂ: ನೆರೆ ಪರಿಹಾರದ ಬಗ್ಗೆ ಹೇಳಿದ್ದೇನು?
Recommended Video
ಮೈಸೂರು, ಸೆಪ್ಟೆಂಬರ್ 7: ತುಂಬಿ ಹರಿಯುತ್ತಿರುವ ಕಬಿನಿ ಜಲಾಶಯಕ್ಕೆ ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿ ಬಾಗಿನ ಅರ್ಪಣೆ ಮಾಡಿದರು.
ಕೆ ಆರ್ ಎಸ್, ಕಬಿನಿ ಭರ್ತಿಗೆ ಕೆಲವೇ ಅಡಿಗಳಷ್ಟು ಬಾಕಿ
ಬೆಳಿಗ್ಗೆ 11 ಗಂಟೆಗೆ ವಿಶೇಷ ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ಅವರು, ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದರು. ಅವರಿಗೆ ಸಚಿವ ಸೋಮಣ್ಣ, ಸಂಸದ ಶ್ರೀನಿವಾಸ್ ಪ್ರಸಾದ್, ಶಾಸಕ ಅನಿಲ್ ಚಿಕ್ಕಮಾದು ಕೂಡ ಸಾಥ್ ನೀಡಿದರು. ಜಲಾಶಯದ ಬಳಿ ಅಧಿಕಾರಿಗಳು, ಜನಪ್ರತಿನಿಧಿಗಳು ಸೇರಿದ್ದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಬಿನಿ, ಕೆ.ಆರ್.ಎಸ್.ಜಲಾಶಯಗಳು ಈಗಾಗಲೇ ಭರ್ತಿಯಾಗಿವೆ. ಇದರಿಂದಾಗಿ ತಮಿಳುನಾಡಿನೊಂದಿಗೆ ಇದ್ದ ನೀರು ಹಂಚಿಕೆ ಸಮಸ್ಯೆ ಬಗೆಹರಿದಿದೆ" ಎಂದರು.
"ಈಗಾಗಲೇ ಅಮಿತ್ ಶಾ, ನಿರ್ಮಲಾ ಸೀತಾರಾಂ ರಾಜ್ಯಕ್ಕೆ ಬಂದು ಹೋಗಿದ್ದಾರೆ. ವಾಸ್ತವ ಪರಿಸ್ಥಿತಿ ಅವರಿಗೆ ಗೊತ್ತಿದೆ. ಕಾರಣಾಂತರಗಳಿಂದ ಮೋದಿ ಅವರನ್ನು ಭೇಟಿ ಮಾಡಲಾಗಲಿಲ್ಲ. ಶೀಘ್ರದಲ್ಲೇ ಪರಿಹಾರ ಹಣ ಬಿಡುಗಡೆ ಆಗಲಿದೆ. ಮತ್ತೊಮ್ಮೆ ನಿಯೋಗ ಕರೆದುಕೊಂಡು ಹೋಗುವುದಿಲ್ಲ" ಎಂದು ತಿಳಿಸಿದ್ದಾರೆ.