ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಾಕ್ ಪರ ಘೋಷಣೆ; ಸಿಎಂ ಯಡಿಯೂರಪ್ಪ ಅನುಮಾನ ಏನು?

|
Google Oneindia Kannada News

Recommended Video

ಪಾಕ್ ಪರ ಘೋಷಣೆ: ಅಮೂಲ್ಯ ವಿರುದ್ಧ ಸಿಎಂ ಆಕ್ರೋಶ!

ಮೈಸೂರು, ಫೆಬ್ರವರಿ 21: ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯ ಲಿಯೋನ ಎಂಬ ವಿದ್ಯಾರ್ಥಿನಿ ಪರ ಸಿಎಂ ಯಡಿಯೂರಪ್ಪ ಕಿಡಿಕಾರಿದ್ದಾರೆ. ಶುಕ್ರವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 'ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡಿಸುವ ಸಂಬಂಧ ಈ ರೀತಿಯ ಕೃತ್ಯಗಳು ನಡೆಯುತ್ತಿವೆ. ಆ ಹುಡುಗಿಗೆ ನಕ್ಸಲ್ ಸಂಬಂಧ ಇತ್ತು' ಎಂದು ಹೇಳಿದ್ದಾರೆ.

'ಅಮೂಲ್ಯ ಎನ್ನುವ ಹುಡುಗಿ ಪಾಕ್ ಪರ ವಹಿಸಿ ಮಾತನಾಡಿರುವ ಹಿಂದೆ ಯಾರಿದ್ದಾರೆ ಎನ್ನುವ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಸೂಕ್ರ ಶಿಕ್ಷೆ ವಿಧಿಸುತ್ತೇವೆ. ಅವಾಗಲೇ ಇಂತಹ ಘಟನೆಗಳು ಮರುಕಳಿಸುವುದಿಲ್ಲ' ಎಂದು ಹೇಳಿದರು.

'ಪಾಕಿಸ್ತಾನ್ ಜಿಂದಾಬಾದ್' ಎಂದವಳಿಗೆ ವೇದಿಕೆಯಲ್ಲೇ ಓವೈಸಿ ಪ್ರತಿಕ್ರಿಯೆ ಏನು?'ಪಾಕಿಸ್ತಾನ್ ಜಿಂದಾಬಾದ್' ಎಂದವಳಿಗೆ ವೇದಿಕೆಯಲ್ಲೇ ಓವೈಸಿ ಪ್ರತಿಕ್ರಿಯೆ ಏನು?

'ಅಮೂಲ್ಯ ತಂದೆಗೆ ಜಾಮೀನು ಕೊಡಬಾರದು. ಅವಳ ಕೈ ಕಾಲು ಮುರಿಯಿರಿ ಎಂದು ಅವರ ತಂದೆಯೇ ಹೇಳಿದ್ದಾರೆ. ಆ ಬಗ್ಗೆ ನಾನೇನು ಹೆಚ್ಚಿಗೆ ಹೇಳುವುದಿಲ್ಲ. ಈ ಬಗ್ಗೆ ನಮ್ಮ ಪೊಲೀಸ್ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತಾರೆ' ಎಂದು ತಿಳಿದು ಬಂದಿದೆ ಎಂದರು.

CM Yediyurappa Reaction On Pakistan Zindabadh Sloganist Amulya Leona

ಬೆಂಗಳೂರಿನ ಪ್ರೀಡಂಪಾರ್ಕ್‌ನಲ್ಲಿ ಗುರುವಾರ ಸಂಜೆ ಹಿಂದೂ ಮುಸ್ಲಿಂ, ಸಿಕ್, ಇಸಾಯಿ ಸಂಘಟನೆ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡುತ್ತಿದ್ದ ಅಮೂಲ್ಯ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಳು. ಈ ವೇಳೆ ಓವೈಸಿ ಕೂಡ ಇದ್ದರು. ಅಮೂಲ್ಯಳನ್ನು ಬಂಧಿಸಿ, 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇತ್ತ ಅಮೂಲ್ಯ ಹೇಳಿಕೆ ಖಂಡಿಸಿ ತೀವ್ರ ಪ್ರತಿಭಟನೆಗಳು ನಡೆಯುತ್ತಿವೆ.

English summary
CM Yediyurappa Reaction On Pakistan Zindabadh Sloganist Amulya Leona. There is Some Orgnaizations working behind the amulya, yediyurappa said in mysore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X