ಲಾಕ್ಡೌನ್ ನಿಯಮ ಉಲ್ಲಂಘಿಸಿದ ಸಿಎಂ ಪುತ್ರ ವಿಜಯೇಂದ್ರ!
ಮೈಸೂರು, ಮೇ 18: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದಲ್ಲಿ ಲಾಕ್ಡೌನ್ ಘೋಷಿಸಿ ದೇವಾಲಯಗಳ ದರ್ಶನಕ್ಕೂ ನಿರ್ಬಂಧ ಹೇರಲಾಗಿದೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರು ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಲ್ಲದೆ, ಕಪಿಲಾ ನದಿ ದಡದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶಗಳು ವ್ಯಕ್ತವಾಗಿವೆ.
ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಸಿಎಂ ಪುತ್ರ ಬಿ.ವೈ ವಿಜಯೇಂದ್ರ ಅವರು ಪತ್ನಿ ಸಹಿತ ದೇವಾಲಯಕ್ಕೆ ಭೇಟಿ ನೀಡಿದ್ದೆಷ್ಟು ಸರಿ? ಇದು ಕೋವಿಡ್ ನಿಯಮದ ಉಲ್ಲಂಘನೆ ಅಲ್ಲವೆ ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಮಂಗಳವಾರ ಪತ್ನಿ ಸಹಿತ ದೇವಾಲಯಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ದೇಗುಲದ ಕಾರ್ಯನಿರ್ವಾಹಕ ಅಧಿಕಾರಿ ರವೀಂದ್ರ ಅವರು ಬರಮಾಡಿಕೊಂಡು ದೇಗುಲದ ಬಾಗಿಲು ತೆರೆದು ದೇವಾಲಯದೊಳಗೆ ಪೂಜೆ ಸಲ್ಲಿಸಲು ಅವಕಾಶ ಮಾಡಿಕೊಟ್ಟರು. ಸುಮಾರು ಅರ್ಧಗಂಟೆ ಶ್ರೀಕಂಠೇಶ್ವರನಿಗೆ ಪೂಜೆ ಸಲ್ಲಿಸಿ ಪ್ರಾರ್ಥನೆ ಗೈದ ದಂಪತಿ ಬಳಿಕ ಕಪಿಲಾ ನದಿ ದಡದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಆ ನಂತರ ನದಿಗೆ ಬಾಗಿನ ಅರ್ಪಿಸಿದ್ದಾರೆ. ಸುಮಾರು ಎಂಟು ಮಂದಿ ಗನ್ ಮ್ಯಾನ್ ಗಳೊಂದಿಗೆ ಆಗಮಿಸಿದ ವಿಜಯೇಂದ್ರ ದಂಪತಿ ಬಳಿ ಸಾರ್ವಜನಿಕರು ಸುಳಿಯದಂತೆ ನೋಡಿಕೊಳ್ಳಲಾಯಿತಲ್ಲದೆ, ಮಾಧ್ಯಮದವರಿಗೆ ಚಿತ್ರೀಕರಣ ಮಾಡದಂತೆ ಎಚ್ಚರಿಕೆ ನೀಡಲಾಗಿತ್ತು.

ಕಾನೂನು ಜಾರಿ ಮಾಡುವವರೇ ಕಾನೂನು ಪಾಲನೆ ಮಾಡದೆ ಹೋದರೆ ಲಾಕ್ಡೌನ್ ಮಾಡಬೇಕಾದ ಅಗತ್ಯವೇನಿತ್ತು? ಕಳೆದ ಒಂದು ತಿಂಗಳಿನಿಂದ ಪುರೋಹಿತರು ಹೊರತುಪಡಿಸಿ ಸಾರ್ವಜನಿಕರು ದೇವಸ್ಥಾನಕ್ಕೆ ಭೇಟಿ ನೀಡದೆ ಹೊರಗಿನಿಂದಲೇ ದೇವರಿಗೆ ಕೈಮುಗಿದು ಹೋಗುತ್ತಿದ್ದರು. ಆದರೆ ಲಾಕ್ಡೌನ್ ಹೇರಿರುವ ಕಾಲದಲ್ಲಿ ದೇವರ ದರ್ಶನ ಮಾಡುವ ಜರೂರು ಏನಿತ್ತು ಎಂದು ಜನ ಕೇಳುತ್ತಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸಿಎಂ ಪುತ್ರನಿಗೊಂದು ನ್ಯಾಯ..? ಸಾಮಾನ್ಯರಿಗೊಂದು ನ್ಯಾಯವೇ? ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications